Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > PM hoists flag at Red Fort ಕೆಂಪುಕೋಟೆಯಲ್ಲಿ ಪ್ರಧಾನಿ ಧ್ವಜಾರೋಹಣ, ಸಿಂಧೂ ನದಿ ಒಪ್ಪಂದ ಸರಿಯಲ್ಲ ಎಂದ ಮೋದಿ, ವೀಡಿಯೊ ನೋಡಿ
ದೇಶಪ್ರಮುಖ

PM hoists flag at Red Fort ಕೆಂಪುಕೋಟೆಯಲ್ಲಿ ಪ್ರಧಾನಿ ಧ್ವಜಾರೋಹಣ, ಸಿಂಧೂ ನದಿ ಒಪ್ಪಂದ ಸರಿಯಲ್ಲ ಎಂದ ಮೋದಿ, ವೀಡಿಯೊ ನೋಡಿ

Share
2 Min Read
SHARE

newsics.com

ನವದೆಹಲಿ: ದೇಶದೆಲ್ಲೆಡೆ ಇಂದು (ಆ.15) 79ನೇ ಸ್ವಾತಂತ್ರ ಸಂಭ್ರಮ ಜೋರಾಗಿದ್ದು, ಕೆಂಪು ಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ಮಾಡಿದರು.

ಕೇಸರಿ ಪೇಟ, ಬಿಳಿ ಜುಬ್ಬಾ ಧರಿಸಿದ್ದ ಪ್ರಧಾನಿ ಮೋದಿ ಅವರನ್ನು ಕೆಂಪುಕೋಟೆಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬರಮಾಡಿಕೊಂಡರು. ದೇಶದ ನೌಕಾಸೇನೆ, ವಾಯುಸೇನೆ, ಭೂಸೇನೆ ಪಡೆಗಳಿಂದ ಗೌರವ ಸ್ವೀಕರಿಸಿದ ಪ್ರಧಾನಿ ಮೋದಿ ಅವರು ನಂತರ ಕೆಂಪು ಕೋಟೆಗೆ ತೆರಳಿ ಧ್ವಜಾರೋಹಣ ಮಾಡಿದರು.


ಈ ಬಾರಿಯ ಧ್ವಜರೋಹಣದ ಮೂಲಕ ಪ್ರಧಾನಿ ಮೋದಿ 12ನೇ ಬಾರಿ ಪ್ರಧಾನಿಯಾಗಿ ದೇಶದ ಧ್ವಜಾರೋಹಣ ಮಾಡಿದಂತಾಗಿದೆ.

ಇದೇ ವೇಳೆ ಪ್ರಧಾನಿ ಅಪರೇಷನ್ ಸಿಂಧೂರ್‌ನಲ್ಲಿ ಭಾಗಿಯಾದ ದೇಶದ ಯೋಧರನ್ನು ಗೌರವಿಸಿದರು.

ಈ ವೇಳೆ ಮಾತನಾಡಿದ ಪ್ರಧಾನಿ ಮೋದಿ, ರಾಷ್ಟ್ರದ ಹಿತದೃಷ್ಟಿಯಿಂದ ಸಿಂಧೂ ಒಪ್ಪಂದ ಸರಿಯಲ್ಲ, ಭಾರತದ ನೀರು ಶತ್ರು ದೇಶಗಳ ಹೊಲದಲ್ಲಿ ಹರಿಯುತ್ತಿದೆ. ನಮ್ಮ ದೇಶದ ಹೊಲಗಳಲ್ಲಿ ನಮ್ಮ ನೀರು ಹರಿಯಬೇಕು ಎಂದರು.
ಆತ್ಮನಿರ್ಭರ ಎಂದರೆ ಅದು ನಮ್ಮ ಶಕ್ತಿ ಸಾಮರ್ಥ್ಯ, ಅದು ಕೇವಲ ಆಮದು ರಪ್ತು ಅಲ್ಲ, ದೇಶ ಅಭಿವೃದ್ಧಿಯಾಗಬೇಕಾದರೆ ಆತ್ಮನಿರ್ಭರತೆ ಅನಿವಾರ್ಯ. ಸ್ವಂತ ಶಕ್ತಿಯ ಮೇಲೆ ದೇಶ ಅವಲಂಬಿತವಾಗಬೇಕು. ಆಪರೇಷನ್ ಸಿಂದೂರ್‌ನಲ್ಲೇ ಆತ್ಮನಿರ್ಭರ ಭಾರತದ ಪ್ರದರ್ಶನವಾಗಿದೆ. ಆತ್ಮನಿರ್ಭರತೆಯಾಗದಿದ್ದರೆ ಆಪರೇಷನ್ ಸಿಂದೂರ್‌ ಯಶಸ್ವಿಯಾಗುತ್ತಿರಲಿಲ್ಲ. ಶತ್ರುವಿಗೆ ಯಾವ ಅಸ್ತ್ರ ಹೇಗೆ ಪ್ರಯೋಗವಾಗುತ್ತಿದೆ ಎಂಬುದು ಗೊತ್ತಾಗಲಿಲ್ಲ. ಇದು ತಂತ್ರಜ್ಞಾನದ ಶತಮಾನ, ತಂತ್ರಜ್ಞಾನವೇ ಜೀವನ ಎಂದು ಪ್ರಧಾನಿ ಹೇಳಿದರು.
ಇಂದು ಇಡೀ ವಿಶ್ವ ಸೆಮಿಕಂಡಕ್ಟರ್‌ನತ್ತ ನೋಡುತ್ತಿದೆ. ನಾವು 4 ಹೊಸ ಘಟಕಗಳಿಗೆ ಹಸಿರು ನಿಶಾನೆ ತೋರಿದ್ದೇವೆ. ವರ್ಷದ ಅಂತ್ಯದಲ್ಲಿ ಸೆಮಿಕಂಡಕ್ಟರ್ ಭಾರತದಲ್ಲೇ ರೆಡಿಯಾಗುತ್ತದೆ. ಮೆಡ್ ಇನ್ ಇಂಡಿಯಾ ಚಿಪ್ ಸಿದ್ಧಗೊಳಲಿದೆ. ಭಾರತ ಅಣುಶಕ್ತಿಗೂ ಪ್ರಾಮುಖ್ಯತೆ ನೀಡುತ್ತಿದೆ. 10 ಹೊಸ ಅಣು ರಿಯಾಕ್ಟರ್‌ಗಳಿಗೆ ಅವಕಾಶ ನೀಡಿದ್ದೇವೆ. 2027ರಲ್ಲಿ ಭಾರತದ ಅಣುಶಕ್ತಿ 10 ಪಟು ಹೆಚ್ಚಾಗಲಿದೆ. ಪ್ರಕೃತಿ ಬಗ್ಗೆ ನಾವು ಸಂವೇದನಾಶೀಲರಾಗಿದ್ದೇವೆ. 2030ರ ಒಳಗೆ ಶೇಕಡಾ 50ರಷ್ಟು ಹಸಿರು ಶಕ್ತಿ ಗುರಿ ಮುಟ್ಟಲಿದ್ದೇವೆ. ದೇಶದಲ್ಲಿ ತೈಲ ಗ್ಯಾಸ್ ಖಜಾನೆ ತೆರೆಯುವ ಉದ್ದೇಶವಿದ್ದು, ಅದಕ್ಕಾಗಿ ಸಿದ್ಧತೆ ನಡೆಸಿದ್ದೇವೆ. ಆತ್ಮನಿರ್ಭರ ಭಾರತಕ್ಕಾಗಿ ಸಂಪತ್ತುಗಳನ್ನು ಬಳಸಿಕೊಳ್ಳಬೇಕಿದೆ. ಬಾಹ್ಯಾಕಾಶದಲ್ಲೂ ಭಾರತ ಆತ್ಮನಿರ್ಭರತೆ ಸಾಧಿಸಿದೆ. ಬಾಹ್ಯಾಕಾಶ ಕೇಂದ್ರ ಸ್ಥಾಪಿಸುವ ಹಾದಿಯಲ್ಲಿದ್ದೇವೆ. ಇಂಧನ, ಕೈಗಾರಿಕೆ, ತಂತ್ರಜ್ಞಾನ ಗಣಿಗಾರಿಕೆಯಲ್ಲಿ ಆತ್ಮನಿರ್ಭರತೆ ಆಗಬೇಕಿದೆ ಎಂದು ಪ್ರಧಾನಿ ಹೇಳಿದರು.
ಜಲವಿದ್ಯುತ್ ನ್ಯೂಕ್ಲಿಯರ್‌ನಲ್ಲೂ ಭಾರತ ಮುಂದಿದೆ. ಕಳೆದ 11 ವರ್ಷಗಳಲ್ಲಿ ಶೌರಶಕ್ತಿ ಹೆಚ್ಚಾಗಿದೆ. 2017ರ ಒಳಗೆ ವಿಕಸಿತ ಭಾರತದ ಗುರಿ ಇಟ್ಟಿದ್ದೇವೆ. 2030ರ ಒಳಗೆ ಕ್ಲೀನ್ ಎನರ್ಜಿ ಪಡೆಯುತ್ತೇವೆ ಎಂದು ಮೋದಿ ಹೇಳಿದರು.

https://twitter.com/i/status/1956174841293234385

https://twitter.com/i/status/1956183271009870247

Sharanabasappa Appa no more ಶರಣಬಸವೇಶ್ವರ ಸಂಸ್ಥಾನ ಮಠದ ಪೀಠಾಧಿಪತಿ ಶ್ರೀ ಶರಣಬಸಪ್ಪ ಅಪ್ಪಾ ಲಿಂಗೈಕ್ಯ

TAGGED:Modi says Indus River Treaty is wrongPM hoists flag at Red Fort
Share This Article
Facebook Twitter Copy Link Print
Previous Article Good Morning | Today’s prediction ಇಂದಿನ ರಾಶಿ ಭವಿಷ್ಯ, 15-08-2025, ಶುಕ್ರವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?
Next Article Dr. Appaji’s funeral today evening ಡಾ.ಅಪ್ಪಾಜಿ ದರ್ಶನಕ್ಕೆ ಭಾರೀ ಜನಸಾಗರ, ಇಂದು ಸಂಜೆ ಅಂತ್ಯಕ್ರಿಯೆ

Popular Posts

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

You Might Also Like

ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read
ಕರ್ನಾಟಕಪ್ರಮುಖ

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read
ಕರ್ನಾಟಕಪ್ರಮುಖ

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read
ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?