newsics.com
ಬೆಂಗಳೂರು: ರಾಜ್ಯದೆಲ್ಲೆಡೆ ವರುಣಾರ್ಭಟ ಜೋರಾಗಿದ್ದು ಕೆರೆ, ಕಟ್ಟೆ, ಹಳ್ಳ, ತೊರೆಗಳು ತುಂಬಿ ಹರಿಯುತ್ತಿವೆ. ಮುಂದಿನ 5 ದಿನಗಳ ಕಾಲ ರಾಜ್ಯದಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ರಾಜ್ಯದಲ್ಲಿ ಇನ್ನೂ 5 ದಿನ ವರುಣಾರ್ಭಟ ಮುಂದುವರಿಯಲಿದ್ದು, ಕರಾವಳಿ, ಉತ್ತರ ಒಳನಾಡು, ಮಲೆನಾಡು, ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಿರುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.
ಇಂದು ಮತ್ತು ನಾಳೆ ಕರಾವಳಿ ಪ್ರದೇಶಗಳಿಗೆ ರೆಡ್ ಅಲರ್ಟ್. ಬೆಳಗಾವಿಗೆ ಕೂಡ ಆರೆಂಜ್ ಅಲರ್ಟ್ ನೀಡಲಾಗಿದೆ. ಬೀದರ್, ಯಾದಗಿರಿ, ಕಲಬುರಗಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ದಕ್ಷಿಣ ಒಳನಾಡಿಗೆ ಇಂದು, ನಾಳೆ ರೆಡ್ ಅಲರ್ಟ್ ಘೋಷಿಸಿದ್ದು, ಶೀತಗಾಳಿ ಹೆಚ್ಚಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಿಗೆ ಚಳಿ, ಶೀತಗಾಳಿ ಇರಲಿದೆ. ಮಳೆರಾಯ ಇನ್ನು 5 ದಿನಗಳ ಕಾಲ ರಾಜ್ಯದಲ್ಲಿ ಅಬ್ಬರಿಸಲಿದ್ದಾರೆ ಎಂದು ಹವಾಮಾನ ಇಲಾಖೆ ತಿಳಿಸಿದೆ.