newsics.com
ಬೆಂಗಳೂರು : ರಾಜ್ಯದಲ್ಲಿ ವರುಣನ ಅಬ್ಬರ ಮತ್ತೆ ಜೋರಾಗಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಹಲವು ಜಿಲ್ಲೆಗಳಿಗೆ ಅಲರ್ಟ್ ಘೋಷಣೆ ಮಾಡಿದೆ.
ವಾಯುಭಾರ ಕುಸಿತ ಹಾಗೂ ಚಂಡಮಾರುತದ ಪ್ರಭಾವ ಹೆಚ್ಚಾಗಿದೆ. ಹಾಗಾಗಿ, ದೇಶದ ಬಹುತೇಕ ಕಡೆಗಳಲ್ಲಿ ವರ್ಷಧಾರೆ ಮುಂದುವರೆದಿದ್ದು, ಕರ್ನಾಟಕದಲ್ಲೂ ವರುಣನ ಆರ್ಭಟ ಜೋರಾಗಿದೆ.
ಆಗಸ್ಟ್ 19ರ ನಂತರ ಮಳೆ ಮತ್ತಷ್ಟು ಹೆಚ್ಚಾಗಲಿರುವ ಕಾರಣ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಧಾರವಾಡ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
https://www.newsics.com/2025/08/15/5-dead-as-wall-of-humayuns-tomb-complex-collapses/