newsics.com
ಬೆಂಗಳೂರು: ಸ್ಯಾಂಡಲ್ವುಡ್ ಸ್ಟಾರ್ ಅಜಯ್ ರಾವ್ ಹಾಗೂ ಪತ್ನಿ ಸ್ವಪ್ನಾ ರಾವ್ 2014ರಲ್ಲಿ ಮದುವೆಯಾಗಿದ್ದ ಈ ಜೋಡಿಗೆ ಮುದ್ದಾದ ಒಂದು ಹೆಣ್ಣು ಮಗು ಕೂಡ ಇದೆ. ಇತ್ತೀಚೆಗಷ್ಟೇ ಅಜಯ್ ರಾವ್ ಅವರ ನಿರ್ಮಾಣದ ಯುದ್ಧಕಾಂಡ ಸಿನಿಮಾ ಕೂಡ ರಿಲೀಸ್ ಆಗಿತ್ತು. ಇದೀಗ ದಾಂಪತ್ಯದಲ್ಲಿ ಬಿರುಕು ಮೂಡಿದ್ದು, ಪರಸ್ಪರ ವಿಚ್ಛೇದನ ಕೋರಿ ಕೋರ್ಟ್ ಮೊರೆ ಹೋಗಿದ್ದಾರೆ.
ಈ ಬಗ್ಗೆ ನಟ ಅಜಯ್ ರಾವ್ ಅವರು ಪತ್ರ ಬರೆದಿದ್ದಾರೆ.ಈ ಸೂಕ್ಷ್ಮ ಸಮಯದಲ್ಲಿ ನಮ್ಮ ಕುಟುಂಬದ ಖಾಸಗಿತನವನ್ನು ಗೌರವಿಸುವಂತೆ ಹಾಗೂ ವೈಯಕ್ತಿಕ ವಿಷಯಗಳಿಗೆ ಸಂಬಂಧಿಸಿದಂತೆ ಯಾವುದೇ ಸುದ್ದಿಯನ್ನು ಹಂಚಿಕೊಳ್ಳುವುದನ್ನು, ಹರಡುವುದನ್ನು ದೂರ ಇಡುವಂತೆ ವಿನಮ್ರತೆಯಿಂದ ವಿನಂತಿಸುತ್ತೇನೆ ಎಂದಿದ್ದಾರೆ. ಪ್ರತಿಯೊಂದು ಕುಟುಂಬವೂ ಸವಾಲುಗಳನ್ನು ಎದುರಿಸುತ್ತದೆ. ಅವುಗಳನ್ನು ಖಾಸಗಿಯಾಗಿ ಉಳಿಯುವಂತೆ ಸಹಕರಸಿ ಎಂದು ಎಲ್ಲರಲ್ಲೂ ಹೃತ್ಪೂರ್ವಕ ವಿನಂತಿ ಎಂದು ಕೇಳಿಕೊಂಡಿದ್ದಾರೆ. ಹಾಗೇ ಅಭಿಮಾನಿಗಳ ಬೆಂಬಲ ನಮಗೆ ಅತ್ಯಂತ ಮುಖ್ಯ ಎಂದು ಪತ್ರದಲ್ಲಿ ಬರೆದು ತಮ್ಮ ಅಧಿಕೃತ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಅನ್ನು ಶೇರ್ ಮಾಡಿದ್ದಾರೆ.
ನಟ ಅಜಯ್ ರಾವ್ ಅವರು ತಮ್ಮದೇ ನಿರ್ಮಾಣ ಸಂಸ್ಥೆ ಹುಟ್ಟು ಹಾಕಿದ್ದರು. ಕೃಷ್ಣ ಆರ್ಟ್ ಅಂಡ್ ಕ್ರಿಯೇಷನ್ ಹೆಸರನಲ ನಿರ್ಮಾಣ ಸಂಸ್ಥೆಯನ್ನ ಹೊರತಂದಿದ್ದರು. ಇತ್ತೀಚೆಗೆ ತಮ್ಮ ಯುದ್ಧಕಾಂಡ-2 ಸಿನಿಮಾ ಕೂಡ ಅದೇ ಸಂಸ್ಥೆಯಿಂದ ಹೊರತಂದಿದ್ದರು. ಆದರೆ ಅಜಯ್ ರಾವ್ ಅವರು ನಿರ್ಮಾಣಕ್ಕೆ ಕೈಹಾಕುವುದು ತಮ್ಮ ಪತ್ನಿ ಸ್ವಪ್ನಾ ಅವರಿಗೆ ಇಷ್ಟವಿರಲಿಲ್ಲ ಎಂದು ಹೇಳಲಾಗುತ್ತಿದೆ. ಈ ಹಿಂದೆಯೂ ಅವರು ಪ್ರೊಡಕ್ಷನ್ಗೆ ಇಳಿಯಬೇಡಿ ಎಂದು ಅಜಯ್ ಅವರಿಗೆ ಹೇಳಿದ್ದರು. ಸಿನಿಮಾ ನಿರ್ಮಾಣಕ್ಕೆ ಕೈಹಾಕಿ ಅಜಯ್ ರಾವ್ ನಷ್ಟಕ್ಕೆ ಸಿಲುಕಿದ್ದರು ಎಂದು ಹೇಳಲಾಗಿದ್ದು, ಇದೇ ವಿಚಾರವಾಗಿ ದಂಪತಿ ನಡುವೆ ಜಗಳ ನಡೆದಿದೆ ಎಂದು ಹೇಳಲಾಗುತ್ತಿದೆ.