newsics.com
ಶಿರಸಿ: ಉತ್ತರ ಕನ್ನಡ ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದ್ದ ಶಿರಸಿ ಕಸ್ತೂರಬಾ ನಗರದ ಇಬ್ಬರು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ ಸುಖಾಂತ್ಯ ಕಂಡಿದೆ.
ಪೊಲೀಸರ ತೀವ್ರ ಹುಡುಕಾಟದ ಪರಿಣಾಮ ವಿದ್ಯಾರ್ಥಿನಿಯರು ಮುಂಬೈ ರೈಲ್ವೆ ನಿಲ್ದಾಣದಲ್ಲಿ ಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದ್ದು, ಹೆಚ್ಚಿನ ವಿವರ ಇನ್ನಷ್ಟೇ ಸಿಗಬೇಕಿದೆ.

ಆದರೆ ಪೊಲೀಸರು ಈ ಕುರಿತು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. 8 ಮತ್ತು 6ನೇ ತರಗತಿಯಲ್ಲಿ ಓದುತ್ತಿದ್ದ ಇಬ್ಬರು ಬಾಲಕಿಯರು ಚಿತ್ರಕಲೆ ತರಗತಿಗೆ ಹೋಗಿ ಬರುವುದಾಗಿ ಹೇಳಿ ಶನಿವಾರ ಮಧ್ಯಾಹ್ನ ಮನೆಯಿಂದ ಹೊರಟವರು ನಾಪತ್ತೆಯಾದ ವಿಚಾರ ಭಾರೀ ಆತಂಕ ಸೃಷ್ಟಿಸಿತ್ತು.
ಕಾಣೆಯಾದ ವಿದ್ಯಾರ್ಥಿಗಳ ಪೋಷಕರು ಶಿರಸಿ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಹೀಗಾಗಿ ಪೊಲೀಸರು ತೀವ್ರ ಶೋಧ ಆರಂಭಿಸಿದ್ದರು. ಸಿಸಿಟಿವಿ ದೃಶ್ಯಗಳೂ ಸೇರಿದಂತೆ ಎಲ್ಲಾ ಕಡೆಗಳಲ್ಲಿ ಹುಡುಕಾಟ ನಡೆಸಿದ್ದರು.
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಶಿರಸಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿನಿಯರು ಓಡಾಡಿರುವ ದೃಶ್ಯ ದಾಖಲಾಗಿತ್ತು.