newsics.com
ಬೆಂಗಳೂರು : ಇಂದು ಸಂಜೆಯೊಳಗೆ ಮಹೇಶ್ ತಿಮರೋಡಿಯನ್ನು ಅರೆಸ್ಟ್ ಮಾಡಿ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಪೊಲೀಸರಿಗೆ ಆದೇಶ ನೀಡಿದ್ದಾರೆ.
ಸೌಜನ್ಯ ಪರ ಹೋರಾಟದಲ್ಲಿ ಗುರುತಿಸಿಕೊಂಡಿದ್ದ ಮಹೇಶ್ ಶೆಟ್ಟಿ ತಿಮರೋಡಿ ಸಾಮಾಜಿಕ ಜಾಲತಾಣದಲ್ಲಿ ನಾಲಗೆ ಹರಿಬಿಟ್ಟಿದ್ದು, ಇದೀಗ ಅರೆಸ್ಟ್ ಮಾಡುವಂತೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಮಂಗಳೂರು ಪೊಲೀಸ್ ಕಮಿಷನರ್ ಗೆ ಸೂಚನೆ ನೀಡಿದ್ದಾರೆ.
ಮಹೇಶ್ ಶೆಟ್ಟಿ ತಿಮರೋಡಿ ಎಂಬ ವ್ಯಕ್ತಿಯು ಧರ್ಮಸ್ಥಳ ಶವ ಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಾಜಿ ಮುಖ್ಯಮಂತ್ರಿಯೊಬ್ಬರು 28 ಕೊಲೆಗಳನ್ನು ಮಾಡಿದ್ದಾರೆ ಎಂದು ಆರೋಪಿಸಿದ್ದರು. ಈ ಆರೋಪವು ವಿಧಾನಸಭೆಯಲ್ಲಿ ನಡೆದ ಚರ್ಚೆಯಲ್ಲಿ ತೀವ್ರ ವಿವಾದಕ್ಕೆ ಕಾರಣವಾಯಿತು. ಪ್ರತಿಪಕ್ಷ ನಾಯಕ ಆರ್. ಅಶೋಕ್ ಮತ್ತು ಶಾಸಕ ಸುನೀಲ್ ಕುಮಾರ್, ಈ ಆರೋಪವನ್ನು ಸರ್ಕಾರದ ವಿರುದ್ಧ ಆಯುಧವಾಗಿ ಬಳಸಿದರು. ಸರ್ಕಾರ ಈ ಆರೋಪಕ್ಕೆ ಮೌನವಾಗಿದ್ದರೆ, ಆರೋಪವನ್ನು ಒಪ್ಪಿಕೊಂಡಂತೆ ಎಂದು ಆರ್. ಅಶೋಕ್ ಆಗ್ರಹಿಸಿದ್ದರು. ಇದರ ಬೆನ್ನಲ್ಲೇ ಮಹೇಶ್ ತಿಮರೋಡಿ ವಿರುದ್ಧ ಕಠಿಣ ಕ್ರಮಕ್ಕೆ ಸಚಿವ ಪರಮೇಶ್ವರ್ ಸೂಚನೆ ನೀಡಿದ್ದು, ಸಂಜೆಯೊಳಗೆ ಬಂಧಿಸಿ ಎಂದು ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
https://www.newsics.com/2025/08/18/heavy-rains-again-in-the-state/