newsics.com
ಬೆಂಗಳೂರು: ಧರ್ಮಸ್ಥಳ ಪ್ರಕರಣ ಸಂಬಂಧ ಎಸ್ಐಟಿ ನೀಡಿರುವ ತನಿಖಾ ಮಾಹಿತಿಯನ್ನು ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಸದನಕ್ಕೆ ಮಾಹಿತಿ ನೀಡುತ್ತಿದ್ದಾರೆ. ಅನಾಲಿಸಿಸ್ ಬಂದ ಮೇಲೆ ತನಿಖೆ ಶುರು ಮಾಡಲಾಗುತ್ತದೆ. ನಿಯಮದಂತೆ ಅಪರಿಚಿತ ವ್ಯಕ್ತಿಗೆ ಪೊಲೀಸರು ರಕ್ಷಣೆ ನೀಡಲಾಗಿದೆ. ಸಾಕ್ಷಿದಾರನಿಗೆ ಕೇಂದ್ರ ಸರ್ಕಾರ ರೂಪಿಸಿರುವ ನಿಯಮದಂತೆ ರಕ್ಷಣೆ ನೀಡಲಾಗಿದೆ. ಅಪರಿಚಿತ ಧರ್ಮಸ್ಥಳದ ಎಲ್ಲಾ ಕಡೆ ತೋರಿಸಿದರೇ ಅಗೆಯುವುದಿಲ್ಲ. ಉತ್ಖನನ ಸ್ಥಗಿತಗೊಳಿಸುವ ಬಗ್ಗೆ ಎಸ್ಐಟಿಯವರೇ ನಿರ್ಧರಿಸಿದ್ದಾರೆ.
ಕೆಮಿಕಲ್, ಡಿಎನ್ಎ ಅನಾಲಿಸಿಸ್ ಮಾಡಬೇಕು. ಎಫ್ಎಸ್ಎಲ್ ಇಂದ ವರದಿ ಬರವರೆಗೂ ತಾತ್ಕಾಲಿಕವಾಗಿ ಎಸ್ಐಟಿಯಿಂದಲೇ ತನಿಖೆ ಸ್ಥಗಿತ ನಿರ್ಧಾರ. ಎಫ್ಎಸ್ಎಲ್ ಇಂದ ವರದಿ ಬಳಿಕ ತನಿಖೆ ಮುಂದುವರೆಯುತ್ತದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ.
ಧರ್ಮಸ್ಥಳ ಪ್ರಕರಣದ ಬಗ್ಗೆ ಇಂದು ಇಡೀ ದೇಶ ಗಮನಿಸುತ್ತಿದೆ. ಧರ್ಮಸ್ಥಳ ಠಾಣೆಗೆ ಹೋಗಿ ಓರ್ವ ದೂರು ಕೊಟ್ಟಿದ್ದನು. ನನಗೆ ನಿರಂತರ ಜೀವ ಬೆದರಿಕೆವೊಡ್ಡಿ ಶವ ಹೂತಿದ್ದ ಬಗ್ಗೆ ದೂರು ನೀಡಲಾಗಿತ್ತು.
ಈ ಹಿನ್ನಲೆಯಲ್ಲಿ ಪೊಲೀಸರು ನ್ಯಾಯಾಧೀಶರ ಮುಂದೆ ಆತನನ್ನು ಹಾಜರುಪಡಿಸಿ 164ರಡಿ ಹೇಳಿಕೆ ದಾಖಲಿಸಿದ್ದರು. ಬಳಿಕ ನ್ಯಾಯಾಧೀಶರು ತನಿಖೆಗೆ ಸೂಚಿಸಿದ್ದರು. ನ್ಯಾಯಾಧೀಶರ ಸೂಚನೆಯಂತೆ ಪೊಲೀಸರು ತನಿಖೆ ಕೈಗೊಂಡಿದ್ದರು. ಆ ನಂತ್ರ ಎಸ್ಐಟಿ ರಚಿಸುವಂತೆ ಮಹಿಳಾ ಆಯೋಗ ಪತ್ರ ಬರೆದಿತ್ತು. ಎಸ್ಐಟಿ ಏಕೆ ರಚಿಸಬೇಕೆಂದೂ ಮಹಿಳಾ ಆಯೋಗ ಪತ್ರದಲ್ಲಿ ಉಲ್ಲೇಖಿಸಿತ್ತು ಎಂದರು.
ಸದನದಲ್ಲಿ ವಿಪಕ್ಷಗಳಿಗೆ ಉತ್ತರಿಸಿದ ಗೃಹ ಸಚಿವ ಜಿ ಪರಮೇಶ್ವರ್, ನಾವು ಪ್ರಣವ್ ಮೋಹಾಂತಿ ನೇತೃತ್ವದ ಎಸ್ಐಟಿ ರಚನೆ ಮಾಡಿದ್ದೆವು. ಸದ್ಯ ಅವರು ತನಿಖೆ ನಡೆಸುತ್ತಿದ್ದಾರೆ. ತನಿಖೆ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮದ ಸುತ್ತಮುತ್ತಲಿನ ಪ್ರದೇಶದಲ್ಲಿ ಹಲವು ಸ್ಥಳಗಳನ್ನು ಅನಾಮಿಕ ವ್ಯಕ್ತಿ ಗುರುತಿಸಿದ್ದನು. ಅವುಗಳನ್ನು ಅಗೆದು ಕಳೇಬರ ಉತ್ಖನನ ನಡೆಸಿದ್ದಾರೆ. ಆದ್ರೆ, ಅವುಗಳಲ್ಲಿ ಅನಾಮಿಕ ತೋರಿಸಿದ 2 ಸ್ಥಳಗಳಲ್ಲಿ ಮಾತ್ರ ಕೆಲವು ಕಳೇಬರದ ಕುರುಹು ಪತ್ತೆಯಾಗಿವೆ ಎಂದರು.
https://www.newsics.com/2025/08/18/new-twist-in-the-dharmasthala-case/