newsics.com
ನವದೆಹಲಿ: “ನೀಟ್-ಯುಜಿ’ ಹಾಗೂ ವಿವಿಧ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆ, ಕಾವಡ್ ಯಾತ್ರೆಗೆ ಸಂಬಂಧಿಸಿ ಉತ್ತರ ಪ್ರದೇಶ ಸರ್ಕಾರ ಹೊರಡಿಸಿರುವ ಆದೇಶ ಸೇರಿದಂತೆ ವಿವಾದಾತ್ಮಕ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷಗಳು ಸಜ್ಜಾಗಿವೆ. ಹೀಗಾಗಿ, ಸೋಮವಾರದಿಂದ ಆರಂಭವಾಗಲಿರುವ ಸಂಸತ್ ಬಜೆಟ್ ಅಧಿವೇಶನವು ಕಾವೇರಿದ ಚರ್ಚೆ, ಕೋಲಾಹಲಕ್ಕೆ ಸಾಕ್ಷಿಯಾಗುವ ಎಲ್ಲ ಸಾಧ್ಯತೆಗಳಿವೆ.
ಬಜೆಟ್ ಅಧಿವೇಶನವು ಸುಸೂತ್ರವಾಗಿ ನಡೆಯಲು ಎಲ್ಲ ಪಕ್ಷಗಳು ಸಹಕಾರ ನೀಡಬೇಕು. ಇದು ಸಾಮೂಹಿಕ ಹೊಣೆಗಾರಿಕೆ ಎಂಬುದಾಗಿ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಭಾನುವಾರ ನಡೆದ ಸರ್ವಪಕ್ಷಗಳ ಸಭೆಯಲ್ಲಿ ಮನವಿ ಮಾಡಿದರು.
ಆದರೆ, ಹಲವು ವಿವಾದಾತ್ಮಕ ವಿಚಾರಗಳ ಕುರಿತು ಚರ್ಚೆಗೆ ಅವಕಾಶ ನೀಡಲೇಬೇಕು ಎಂಬುದಾಗಿ ಸರ್ವಪಕ್ಷಗಳ ಸಭೆಯಲ್ಲಿ ಪಾಲ್ಗೊಂಡಿದ್ದ ವಿಪಕ್ಷಗಳ ನಾಯಕರು ಖಂಡತುಂಡವಾಗಿ ಹೇಳುವ ಮೂಲಕ, ಸದನದಲ್ಲಿ ಹೋರಾಟಕ್ಕೆ ತಾವು ಸಜ್ಜಾಗಿದ್ದೇವೆ ಎಂಬ ಸಂದೇಶ ರವಾನಿಸಿದ್ದಾರೆ.
ಪ್ರಧಾನಿ ಮೋದಿ ಆಡಳಿತದ 3.0 ಅವಧಿಯ ಮೊದಲ ಬಹುನಿರೀಕ್ಷಿತ ಬಜೆಟ್ ನಾಳೆ (ಜು.23) ಮಂಡನೆಯಾಗಲಿದ್ದು, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಲಿದ್ದಾರೆ.
ಮುಂದಿನ 5 ದಿನ ರಾಜ್ಯದಲ್ಲಿ ಮಳೆ ಜತೆಗೆ ಶೀತಗಾಳಿ ಬೀಸುವ ಸಾಧ್ಯತೆ; ಹಲವೆಡೆ ರೆಡ್ ಅಲರ್ಟ್
ಕೊನೆಗೂ ಮದುವೆಯಾಗಲು ನಿರ್ಧರಿಸಿದ ಆ್ಯಂಕರ್ ಅನುಶ್ರೀ, ಕನಸಿನ ಹುಡುಗನನ್ನು ಹುಡುಕಿಕೊಡಿ ಎಂದ ಮಾತಿನ ಮಲ್ಲಿ!
ನೋವು ನೀಡದೆ ಒಂದೇ ನಿಮಿಷದಲ್ಲಿ ಜೀವಹರಣ ಮಾಡಬಲ್ಲ ‘ಆತ್ಮಹತ್ಯೆ ಯಂತ್ರ’ ಆವಿಷ್ಕಾರ! ಶೀಘ್ರ ಕಾರ್ಯಾರಂಭ
ವಿಶ್ವದ ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್ನಲ್ಲಿ ಕರ್ತವ್ಯ ನಿರ್ವಹಿಸಲು ಮೈಸೂರಿನ ಯುವತಿ ಆಯ್ಕೆ
ಪುನರ್ವಸತಿ ಕೇಂದ್ರದಿಂದಲೇ ಬಾಲಕಿ ಅಪಹರಣ, ಬಾಯ್ ಫ್ರೆಂಡ್ ಜತೆ ಎಸ್ಕೇಪ್ ಶಂಕೆ, ವಿಡಿಯೊ ನೋಡಿ