newsics.com
ಇಡೀ ವಿಶ್ವವೇ ಎದುರು ನೋಡುವ ಗಂಗಾ ಆರತಿ ರೀತಿಯಲ್ಲಿ ಕಾವೇರಿ ಆರತಿ ಮಾಡಲಾಗುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, 25 ಜನರ ತಂಡ ಕಳುಹಿಸಿ ನಂತರ ವರದಿ ಕೊಡುತ್ತಾರೆ. ಆನಂತರ ಕಾವೇರಿ ಆರತಿ ಕಾರ್ಯಕ್ರಮ ಮಾಡುತ್ತೇವೆ . ಧಾರ್ಮಿಕ ದತ್ತಿ ಇಲಾಖೆ, ಕಾವೇರಿ ನೀರಾವರಿ ನಿಗಮ ಸೇರಿಕೊಂಡು ಕಾರ್ಯಕ್ರಮ ಮಾಡುತ್ತಾರೆ ಎಂದರು.
ಕಳೆದ ವರ್ಷ ಕಷ್ಟದಲ್ಲಿದ್ದರೂ ರೈತರನ್ನು ಕಾಪಾಡಿದ್ದೇವೆ. ಕಳೆದ ವರ್ಷ 200 ತಾಲೂಕುಗಳಲ್ಲಿ ಬರಗಾಲವಿತ್ತು. ಕಾವೇರಿ ಪ್ರಾಧಿಕಾರ ಆದೇಶದ ಪ್ರಕಾರ 40 ಟಿಎಂಸಿ ಬಿಡಬೇಕಿತ್ತು, 20 ಟಿಎಂಸಿ ಬಿಡಲು ಹೇಳಿತ್ತು. ಆದರೆ ನಾವು ಅಷ್ಟು ಬಿಟ್ಟಿಲ್ಲ. ಕೆಲವರು ನೀರು ಬಿಟ್ಟಿದ್ದೇವೆ ಎಂದು ವಾದ ಮಾಡಿದ್ದಾರೆ. ಎಲ್ಲರನ್ನು ಕರೆದು ಚರ್ಚೆ ಮಾಡಿ ನೀರು ಬಿಟ್ಟಿದ್ದೇವೆ. 30 ಟಿಎಂಸಿ ನೀರು ತಮಿಳುನಾಡಿಗೆ ತಲುಪಿಸಿದ್ದೇವೆ. ಇನ್ನು ಹತ್ತು ಟಿಎಂಸಿ ನೀರು ಬಿಡಬೇಕು. ಈ ವರ್ಷದ ಕೋಟಾ ಮುಗಿಯುತ್ತದೆ. 50 ಸಾವಿರ ಕ್ಯೂಸೆಕ್ ನೀರು ಹೋಗುತ್ತಿದೆ. ಆದೇಶವನ್ನು ಪಾಲನೆ ಮಾಡಿದ್ದೇವೆ ಎಂದು ಹೇಳಿದ್ದಾರೆ.
ಕಾವೇರಿ ಜಲಾನಯನ ಪ್ರದೇಶದ ಎಲ್ಲ ಕೆರೆ ತುಂಬಿಸಲು ಕಾರ್ಯಕ್ರಮ ರೂಪಿಸಿ ಎಂದು ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇನೆ ಎಂದರು.