Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Court news ಗಂಡ ನಪುಂಸಕ ಎಂದು ವಿಚ್ಛೇದನ, 90 ಲಕ್ಷ ಜೀವನಾಂಶ ಕೋರಿದ್ದ ಪತ್ನಿಗೆ ಹೈಕೋರ್ಟ್ ಶಾಕ್
ದೇಶಪ್ರಮುಖ

Court news ಗಂಡ ನಪುಂಸಕ ಎಂದು ವಿಚ್ಛೇದನ, 90 ಲಕ್ಷ ಜೀವನಾಂಶ ಕೋರಿದ್ದ ಪತ್ನಿಗೆ ಹೈಕೋರ್ಟ್ ಶಾಕ್

Share
2 Min Read
SHARE

newsics.com

ನವದೆಹಲಿ: ತನ್ನ ಪತಿ ನಪುಂಸಕ. ಆತನಿಂದ ವಿಚ್ಛೇದನ ಮತ್ತು 90 ಲಕ್ಷ ರೂ. ಜೀವನಾಂಶ ಬೇಕೆಂದು ಮಹಿಳೆಯೊಬ್ಬರು ತೆಲಂಗಾಣ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಆದರೆ, ಪತಿಯ ನಪುಂಸಕತೆ ಅಥವಾ ಅವರು ಹೆಂಡತಿಗೆ ವಂಚನೆ ಮಾಡಿದ್ದಾರೆ ಎಂಬ ಆ ಮಹಿಳೆಯ ವಾದವನ್ನು ಪುಷ್ಟೀಕರಿಸಲು ಯಾವುದೇ ಪುರಾವೆಗಳಿಲ್ಲ ಎಂದು ಆ ಮಹಿಳೆಯ ಅರ್ಜಿಯನ್ನು ತೆಲಂಗಾಣ ಹೈಕೋರ್ಟ್ ತಿರಸ್ಕರಿಸಿದೆ.

ತನ್ನ ಪತಿ ನಿಮಿರುವಿಕೆಯ ಸಮಸ್ಯೆಯಿಂದ ಬಳಲುತ್ತಿದ್ದಾರೆ ಮತ್ತು ಲೈಂಗಿಕ ಸಂಪರ್ಕಕ್ಕೆ ಅಸಮರ್ಥರಾಗಿದ್ದಾರೆ ಎಂಬ ಕಾರಣಕ್ಕೆ ಮಹಿಳೆ ವಿಚ್ಛೇದನ ಕೋರಿದ್ದರು. ಜತೆಗೆ 90 ಲಕ್ಷ ರೂ. ಶಾಶ್ವತ ಜೀವನಾಂಶದ ಬೇಡಿಕೆ ಇಟ್ಟಿದ್ದರು.

ಮದುವೆಗೂ ಮೊದಲು ತನ್ನ ನಪುಂಸಕತೆಯ ಬಗ್ಗೆ ತಿಳಿಸದೆ ಅವರು ವಿವಾಹ ವಂಚನೆ ಮಾಡಿದ್ದಾರೆ ಎಂದು ಮಹಿಳೆ ವಾದಿಸಿದ್ದರು.

ಆದರೆ, ನ್ಯಾಯಮೂರ್ತಿ ಮೌಶುಮಿ ಭಟ್ಟಾಚಾರ್ಯ ಮತ್ತು ನ್ಯಾಯಮೂರ್ತಿ ಬಿ.ಆರ್. ಮಧುಸೂಧನ್ ರಾವ್ ಅವರ ಹೈಕೋರ್ಟ್ ಪೀಠವು ಆಕೆಯ ಮೇಲ್ಮನವಿಯನ್ನು ವಜಾಗೊಳಿಸಿತು. ಅಲ್ಲದೆ, ಆಕೆಯ ಮನವಿಯನ್ನು ತಿರಸ್ಕರಿಸುವ ಕುಟುಂಬ ನ್ಯಾಯಾಲಯದ ನಿರ್ಧಾರವನ್ನು ಎತ್ತಿಹಿಡಿಯಿತು.

ಈ ದಂಪತಿ ಡಿಸೆಂಬರ್ 2013ರಲ್ಲಿ ವಿವಾಹವಾಗಿದ್ದರು. ಆದರೆ, ಮದುವೆಯಾದಾಗಿನಿಂದ ತಾವಿಬ್ಬರೂ ಲೈಂಗಿಕ ಕ್ರಿಯೆ ನಡೆಸಿಲ್ಲ ಎಂದು ಮಹಿಳೆ ಹೇಳಿಕೊಂಡಿದ್ದಾಳೆ. ಪತ್ನಿ ತಮ್ಮ ಎರಡು ಹನಿಮೂನ್‌ಗಳನ್ನು ಸಹ ಉಲ್ಲೇಖಿಸಿದ್ದಾರೆ. ಒಂದು 2013ರಲ್ಲಿ ಕೇರಳದಲ್ಲಿ ಮತ್ತು ಇನ್ನೊಂದು 2014ರಲ್ಲಿ ಕಾಶ್ಮೀರದಲ್ಲಿ ನಡೆದಿತ್ತು. ಆದರೆ, ಆಕೆಯ ಪತಿಗೆ ಲೈಂಗಿಕ ಕ್ರಿಯೆ ನಡೆಸಲು ಸಾಧ್ಯವಾಗಿರಲಿಲ್ಲ. ಇದರಿಂದ ತನಗೆ ವಂಚನೆಯಾಗಿದೆ ಎಂದು ಆಕೆ ಕೋರ್ಟ್ ಮೆಟ್ಟಿಲೇರಿದ್ದಳು. ಸುಳ್ಳು ಹೇಳಿ ತನ್ನನ್ನು ಮದುವೆಯಾಗಿದ್ದಾರೆ ಎಂದು ಆಕೆ ಆರೋಪಿಸಿದ್ದರು.

ತನ್ನ ಪತಿ ರುಮಟಾಯ್ಡ್ ಸಂಧಿವಾತದಿಂದ ಬಳಲುತ್ತಿದ್ದಾರೆ. ಇದು ನಿಮಿರುವಿಕೆಯ ಸಮಸ್ಯೆಗೆ ಕಾರಣವಾಗುತ್ತದೆ ಎಂಬ ಅಂಶವನ್ನು ಅವರು ಮುಚ್ಚಿಟ್ಟಿದ್ದರು. ಇದು ಹಿಂದೂ ವಿವಾಹ ಕಾಯ್ದೆ, 1955 ರ ಅಡಿಯಲ್ಲಿ ಕ್ರೌರ್ಯಕ್ಕೆ ಸಮನಾಗಿರುತ್ತದೆ ಎಂದು ಆ ಮಹಿಳೆ ಆರೋಪಿಸಿದ್ದರು.

ಪತಿ ಹೆಂಡತಿಯ ಎಲ್ಲಾ ಆರೋಪಗಳನ್ನು ತಳ್ಳಿಹಾಕಿದರು. ತಮಗೆ ಸಣ್ಣಪುಟ್ಟ ಲೈಂಗಿಕ ಸಮಸ್ಯೆ ಇದ್ದರೂ ಅದಕ್ಕೆ ಈಗಾಗಲೇ ಚಿಕಿತ್ಸೆ ಪಡೆದಿದ್ದೇನೆ ಎಂದು ಹೇಳಿಕೊಂಡರು.

ಎರಡೂ ಹನಿಮೂನ್‌ ಸೇರಿದಂತೆ ಹಲವು ಸಂದರ್ಭಗಳಲ್ಲಿ ತನ್ನ ಹೆಂಡತಿಯೊಂದಿಗೆ ಲೈಂಗಿಕ ಸಂಬಂಧ ಹೊಂದಿದ್ದೇನೆ ಎಂದು ಅವರು ಹೇಳಿದ್ದಾರೆ.

ಮದುವೆಯಾದ 5 ವರ್ಷಗಳ ನಂತರ ತನ್ನ ಪತಿ ಲೈಂಗಿಕವಾಗಿ ದುರ್ಬಲ ಎಂದು ಹೆಂಡತಿ ಹೇಳಿಕೊಳ್ಳಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಇಡಿ ದಾಳಿ ವೇಳೆ ಗೋಡೆ ಹಾರಿ ತಪ್ಪಿಸಿಕೊಳ್ಳಲು ಯತ್ನಿಸಿದ TMC ಶಾಸಕನ ಬಂಧನ – ವೈರಲ್ ವಿಡಿಯೋ ನೋಡಿ

ಪತಿಗೆ ಲಿವರ್ ನೀಡಿದ ಪತ್ನಿ: ಅಂಗಾಂಗ ಕಸಿ ಬಳಿಕ ಇಬ್ಬರೂ ಸಾವು

ಗೆಳತಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸುವಾಗ ವಿವಾಹಿತ ವ್ಯಕ್ತಿ ಸಾವು : ಮಹಿಳೆಗೆ 8.6 ಲಕ್ಷ ರೂ. ದಂಡ ವಿಧಿಸಿದ ಕೋರ್ಟ್.!

TAGGED:High Court shocks wife who sought Rs 90 lakh alimony for divorce on grounds of eunuch husband
Share This Article
Facebook Twitter Copy Link Print
Previous Article Good news for farmers… ರೈತರಿಗೆ ಗುಡ್ ನ್ಯೂಸ್… ಅರ್ಜಿ ಹಾಕದಿದ್ದರೂ ವಾರಸುದಾರರ ಹೆಸರಿಗೆ ಜಮೀನು ವರ್ಗಾವಣೆ
Next Article Free Hospital ಚಿಕ್ಕಬಳ್ಳಾಪುರ: ಜಗತ್ತಿನ ಅತಿದೊಡ್ಡ ಉಚಿತ ಆಸ್ಪತ್ರೆ ಶೀಘ್ರ ಲೋಕಾರ್ಪಣೆ, ಇಲ್ಲಿರಲ್ವಂತೆ ಬಿಲ್ಲಿಂಗ್ ಕೌಂಟರ್!

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
Crimeದೇಶ

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?