newsics.com
ಬೆಂಗಳೂರು: ನಾನೆಂದೂ ಸತ್ಯವನ್ನು ಬಿಟ್ಟು ಹೋಗಿಲ್ಲ. ಎಲ್ಲರೂ ಶಾಂತತೆಯನ್ನು ಕಾಪಾಡಬೇಕು, ತಳ್ಮೆಯಿಂದ ಇರುವಂತೆ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಮನವಿ ಮಾಡಿದ್ದಾರೆ.
ಧರ್ಮಸ್ಥಳ ಅಪಪ್ರಚಾರ ಖಂಡಿಸಿ ಇಂದು ನಡೆದ ಜೈನ ಮುನಿಗಳ ಕಾರ್ಯಕ್ರಮ ನಡೆಸಿದ್ದು, ಇದರಲ್ಲಿ ರಾಜ್ಯದ ಎಲ್ಲಾ ಜೈನ ಮಠಗಳ ಭಟ್ಟಾರಕರು ಪಾಲ್ಗೊಂಡಿದ್ದರು. ಅಲ್ಲದೇ ವಿವಿಧ ಜೈನ ಸಂಘ ಸಂಸ್ಥೆಗಳಿಂದ ನೂರಾರು ಜನ ಭಾಗಿಯಾಗಿದ್ದರು.
ಈ ವೇಳೆ ಮಾತನಾಡಿದ ಡಾ.ಡಿ.ವೀರೇಂದ್ರ ಹೆಗ್ಗಡೆ , ಇಂದು ಶ್ರೀ ಕ್ಷೇತ್ರಕ್ಕೆ ಬಹಳ ವಿಶೇಷವಾದ ಕಳೆ ಬಂದಿದೆ. ಇಷ್ಟೊಂದು ಆಶಯಧಾರಿಗಳು, ಆಶೀರ್ವಚನ ನೀಡುತ್ತಿರೋದು ತುಂಬಾ ದೊಡ್ಡದು. ಇಷ್ಟೊಂದು ಸಂಖ್ಯೆಯಲ್ಲಿ ಕ್ಷೇತ್ರಕ್ಕೆ ಬಂದಿರೋದು ಸಂತಸ ತಂದಿದೆ. ಇಂದು ಮೂಡಬಿದ್ರೆ ಭಟ್ಟಾರಕರ ಪಟ್ಟಾಭೀಷೇಕದ ದಿನ, ಅವರು ಕೂಡ ನಿಮ್ಮೊಂದಿಗಿದ್ದೇವೆ ಎಂಬ ಸಂದೇಶ ಕೊಟ್ಟಿದ್ದಾರೆ ಇದಕ್ಕಿಂತ ದೊಡ್ಡ ಮಾತು ನನಗೆ ಬೇಡ ಎಂದರು.
ಧರ್ಮಸ್ಥಳದ ಬೆಳವಣಿಗೆಯಿಂದ ಪುರುಷರಿಗಿಂತ, ಮಹಿಳೆಯರೇ ಹೆಚ್ಚಾಗಿ ಕಣ್ಣೀರಿಟ್ಟಿದ್ದಾರೆ, ವೇದನೆ ಪಡುತ್ತಿದ್ದಾರೆ. ಕೆಲ ಹೆಣ್ಣುಮಕ್ಕಳು ಯಾವುದೇ ರೀತಿಯ ಹೋರಾಟಕ್ಕೆ, ಪ್ರತಿಭಟನೆಗೂ ತಯಾರಿದ್ದಾರೆ. ಆದ್ರೆ ಅಂತಹ ಹೋರಾಟ ಅಗತ್ಯವಿಲ್ಲ. ಎಲ್ಲವೂ ಮಂಜುನಾಥ ಸ್ವಾಮಿಗೆ ಬಿಟ್ಟಿದ್ದೇವೆ. ಸತ್ಯ ಬಿಟ್ಟು ನಾನು ಯಾವತ್ತೂ ಹೋಗಿಲ್ಲ. ಹೋಗುವುದೂ ಇಲ್ಲ. ಎಲ್ಲರೂ ಶಾಂತತೆಯನ್ನು ಕಾಪಾಡಬೇಕು. ತಾಳ್ಮೆಯಿಂದ ಇರಬೇಕು ಎಂದು ಮನವಿ ಮಾಡಿದ್ದಾರೆ.
Sonu Nigam ನಿದ್ರಾದೇವಿ ನೆಕ್ಸ್ಟ್ ಡೋರ್ಗಾಗಿ ಸೋನು ನಿಗಮ್ ಮೇಲಿನ ಬ್ಯಾನ್ ನಿಷೇಧ: ಮೈಸೂರಲ್ಲಿ ನಾಳೆ ನಿರ್ಧಾರ