newsics.com
ಬೆಂಗಳೂರು: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿ ಮೇಲೆ ಹಲ್ಲೆ ನಡೆಸಿ ಕುತ್ತಿಗೆಗೆ ಹಗ್ಗ ಬಿಗಿದು ಕೊಲೆ ಮಾಡಿದ ಕಾರ್ಮಿಕನನ್ನು ವರ್ತೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮೃತ ಮಹಿಳೆಯನ್ನು 30 ವರ್ಷದ ಪೂನಂ ಸಿಂಗ್ ಎಂದು ಗುರುತಿಸಲಾಗಿದ್ದು, ಆರೋಪಿ ಪತಿಯನ್ನು ರವೀಂದ್ರ ಸಿಂಗ್ ಎಂದು ಗುರುತಿಸಲಾಗಿದೆ. ಇಬ್ಬರೂ ಮೂಲತಃ ಉತ್ತರ ಪ್ರದೇಶದ ಗೋರಖ್ಪುರದವರಾಗಿದ್ದು, ಕೆಲಸ ಅರಸಿ ಬೆಂಗಳೂರಿಗೆ ಬಂದು ದೊಮ್ಮಸಂದ್ರ ಸಮೀಪದ ಬಾಲಾಜಿ ಲೇಔಟ್ನ ಬಾಡಿಗೆ ಮನೆಯಲ್ಲಿ ಕಳೆದ ಒಂದು ವರ್ಷದಿಂದ ವಾಸವಾಗಿದ್ದರು.
ಆರೋಪಿ ರವೀಂದ್ರ ಸಿಂಗ್ ವೃತ್ತಿಯಲ್ಲಿ ಕಾರ್ಪೆಂಟರ್ ಆಗಿದ್ದು, ಮದ್ಯ ವ್ಯಸನಿಯಾಗಿದ್ದ ಎನ್ನಲಾಗಿದೆ.
ಮೂರು ವರ್ಷದ ಹಿಂದೆ ಕೆಲಸ ಹುಡುಕಿಕೊಂಡು ಉತ್ತರ ಪ್ರದೇಶ ಮೂಲದ ಪೂನಂ ಸಿಂಗ್ ಮತ್ತು ರವೀಂದ್ರ ಸಿಂಗ್ ಬೆಂಗಳೂರಿಗೆ ಬಂದಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ದೊಮ್ಮಸಂದ್ರದಲ್ಲಿ ದಂಪತಿ ನೆಲೆಸಿದ್ದು, ರವೀಂದ್ರ ಸಿಂಗ್ ಬಡಗೆ ಕೆಲಸ ಮಾಡಿಕೊಂಡಿದ್ದ. ವಿಪರೀತ ಕುಡಿಯುತ್ತಿದ್ದ ರವೀಂದ್ರಸಿಂಗ್ ಮನೆಯಲ್ಲಿ ಜಗಳವಾಡುತ್ತಿದ್ದ. ಇದೇ ಕಾರಣಕ್ಕೆ ಗುರುವಾರ ಕೂಡ ಜಗಳವಾಗಿ ಪತ್ನಿಯನ್ನು ಕೊಲೆ ಮಾಡಿದ್ದಾನೆ. ಮೃತಳ ಸಹೋದರ ನೀಡಿದ ದೂರಿನ ಮೇರೆಗೆ ವರ್ತೂರು ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.