newsics.com
ಬೆಂಗಳೂರು: ಕರ್ನಾಟಕ ರಾಜ್ಯದಾದ್ಯಂತ ಸೆಪ್ಟೆಂಬರ್ 6ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಪ್ರದೇಶಗಳಲ್ಲಿ ವರುಣಾರ್ಭಟ ಜೋರಾಗಿ ಇರಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಸಮುದ್ರಕ್ಕಿಳಿಯುವವರಿಗೆ ಅಪಾಯದ ಎಚ್ಚರಿಕೆ ನೀಡಲಾಗಿದೆ. ಯಾರೂ ಸಹ ಸಮುದ್ರ ತೀರಕ್ಕೆ ಹೋಗದಂತೆ ಆದೇಶ ಹೊರಡಿಸಿದೆ.
ಸೆಪ್ಟೆಂಬರ್ 5ರವರೆಗೆ ಉತ್ತರ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಾದ್ಯಂತ ಯೆಲ್ಲೋ ಅಲರ್ಟ್ ಮತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಸೆಪ್ಟೆಂಬರ್5ರವರೆಗೆ ಕರಾವಳಿ ಸುತ್ತಮುತ್ತಲಿನ ಪ್ರದೇಶಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಸುತ್ತಮುತ್ತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.