newsics.com
ಮೂವರು ಮಕ್ಕಳಿಗೆ ಬೆಂಕಿ ಹಚ್ಚಿ ಕೊಂದು ತಂದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ
ಪ್ರಕಾಶಂ ಜಿಲ್ಲೆಯ ಪೆದ್ದಬೋಯಪಲ್ಲಿ ಗ್ರಾಮದ ರಸಗೊಬ್ಬರ ಅಂಗಡಿ ಮಾಲೀಕ ಗುಟ್ಟ ವೆಂಕಟೇಶ್ವರಲು ಎಂದು ಗುರುತಿಸಲಾದ ಆರೋಪಿ ಆಗಸ್ಟ್ 30 ರಂದು ತನ್ನ ಪತ್ನಿ ದೀಪಿಕಾ ಜೊತೆ ಜಗಳವಾಡಿದ್ದ.
ಪೊಲೀಸರ ಪ್ರಕಾರ, ಅದೇ ರಾತ್ರಿ ವೆಂಕಟೇಶ್ವರಲು ತನ್ನ ಇಬ್ಬರು ಕಿರಿಯ ಮಕ್ಕಳಾದ ವರ್ಷಿಣಿ ಮತ್ತು ಶಿವಧರ್ಮ ಅವರನ್ನು ಉಪ್ಪನುತಲ ಮಂಡಲದ ಸೂರ್ಯತಾಂಡ ಬಳಿ ಬೆಂಕಿ ಹಚ್ಚಿದ್ದಾನೆ ಎಂದು ಆರೋಪಿಸಲಾಗಿದೆ. ನಂತರ ತೆಲಂಗಾಣದ ಅಚಂಪೇಟ್ ಬಳಿಯ ತಂದ್ರಾದಲ್ಲಿ ತನ್ನ ಹಿರಿಯ ಮಗಳು ಮೋಕ್ಷಿತಾಳನ್ನು ಕೊಂದಿದ್ದಾನೆ. ಕೊಲೆ ಬಳಿಕ ಅಚಂಪೇಟ್ನಲ್ಲಿ ಖರೀದಿಸಿದ್ದ ಕೀಟನಾಶಕವನ್ನು ಸೇವಿಸಿ ಸೂಸೈಡ್ ಮಾಡಿಕೊಂಡಿದ್ದಾನೆ. ಅವನ ಶವ ವೆಲ್ದಂಡ ಮಂಡಲದ ಬುರಕುಂಟಾದಲ್ಲಿ ಪತ್ತೆಯಾಗಿದೆ.
ವೆಂಕಟೇಶ್ವರಲು ಅವರ ಸಹೋದರ ಮಲ್ಲಿಕಾರ್ಜುನ ರಾವ್ ನೀಡಿದ ದೂರಿನ ಮೇರೆಗೆ ವೆಲ್ದಂಡ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.