Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಶೌಚಾಲಯಕ್ಕೆ ಹೋಗಲು ಅನುಮತಿ‌ ಕೇಳಿದ 2ನೇ ತರಗತಿ ಬಾಲಕಿಗೆ ಥಳಿತ, 100 ಬಸ್ಕಿ ಶಿಕ್ಷೆ
ದೇಶಪ್ರಮುಖ

ಶೌಚಾಲಯಕ್ಕೆ ಹೋಗಲು ಅನುಮತಿ‌ ಕೇಳಿದ 2ನೇ ತರಗತಿ ಬಾಲಕಿಗೆ ಥಳಿತ, 100 ಬಸ್ಕಿ ಶಿಕ್ಷೆ

Share
1 Min Read
SHARE

newsics.com

ಸುರ್ಗುಜಾ(ಛತ್ತೀಸ್‌ಗಢ): ಶೌಚಾಲಯಕ್ಕೆ ಹೋಗಲು ಅನುಮತಿ ಕೇಳಿದ ಎರಡನೇ ತರಗತಿ ವಿದ್ಯಾರ್ಥಿನಿಗೆ ಶಿಕ್ಷಕಿ ಥಳಿಸಿ, 100 ಬಸ್ಕಿ ಹೊಡೆಸಿರುವ ಘಟನೆ ಸೀತಾಪುರದ ಪ್ರತಾಪ್‌ಗಢ ಪ್ರದೇಶದಲ್ಲಿ ನಡೆದಿದೆ.

ಸೀತಾಪುರದ ಡಿಎವಿ ಮುಖ್ಯಮಂತ್ರಿ ಪಬ್ಲಿಕ್ ಶಾಲೆಯಲ್ಲಿ ಬುಧವಾರ ಈ ಘಟನೆ ನಡೆದಿದೆ.

100 ಬಸ್ಕಿ ಹೊಡೆದ ಕಾರಣ ವಿದ್ಯಾರ್ಥಿನಿಗೆ ನಿಂತುಕೊಳ್ಳಲೂ ಸಾಧ್ಯವಾಗಿಲ್ಲ. ಈ ಸಂಬಂಧ ಶುಕ್ರವಾರ ವಿದ್ಯಾರ್ಥಿನಿಯ ಕುಟುಂಬಸ್ಥರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಕುಟುಂಬಸ್ಥರು ಮೊದಲು ಶಾಲೆ ಪ್ರಾಂಶುಪಾಲರನ್ನು ಸಂಪರ್ಕಿಸಿ ಶಿಕ್ಷಕಿ ಮೇಲೆ ಕ್ರಮಕ್ಕೆ ಒತ್ತಾಯಿಸಿದ್ದರು. ಆದರೆ, ಯಾವುದೇ ಕ್ರಮ ಕೈಗೊಳ್ಳದ ಕಾರಣ ಶುಕ್ರವಾರ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ದೂರು ನೀಡಿದ್ದಾರೆ.

ತರಗತಿಯಲ್ಲಿದ್ದ ವಿದ್ಯಾರ್ಥಿನಿ ಶೌಚಾಲಯಕ್ಕೆ ಹೋಗಲು ಅನುಮತಿ ಕೇಳಿದಾಗ, ಶಿಕ್ಷಕಿ ನಮ್ರತಾ ಸಿಂಗ್ ಬಾಲಕಿಯ ಕಾಲುಗಳಿಗೆ ಕೋಲಿನಿಂದ ಥಳಿಸಿ ನಂತರ ತರಗತಿಯಲ್ಲಿ 100 ಬಸ್ಕಿ ಹೊಡೆಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ
ಬಸ್ಕಿ ಹೊಡೆಯುವ ವೇಳೆಯೂ ಥಳಿಸಿದ್ದರಿಂದ ವಿದ್ಯಾರ್ಥಿನಿಯ ಕಾಲುಗಳ ಸ್ನಾಯುಗಳಿಗೆ ಗಾಯವಾಗಿದೆ. ಇದರಿಂದಾಗಿ ನಿಲ್ಲಲು ಸಹ ಸಾಧ್ಯವಾಗಲಿಲ್ಲ.

ಈ ಘಟನೆ ಸಂಬಂಧ ಪ್ರಾಂಶುಪಾಲರಿಗೆ ದೂರು ನೀಡಿದ್ದರೂ ಅವರು ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಬದಲಾಗಿ ಆರೋಪ ನಿರಾಕರಿಸಿದರು ಎಂದು ಕುಟುಂಬಸ್ಥರು ದೂರಿದ್ದಾರೆ.
ದೂರಿನ ನಂತರ, ಶಾಲಾ ಶಿಕ್ಷಣ ಇಲಾಖೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿತು.

ದೂರಿನ ಆಧಾರದ ಮೇಲೆ ಜಿಲ್ಲಾ ಶಿಕ್ಷಣಾಧಿಕಾರಿ ದಿನೇಶ್ ಝಾ ಅವರು ಭಿಲಾಯಿಯಲ್ಲಿರುವ ಡಿಎವಿ ಮುಖ್ಯಮಂತ್ರಿ ಪಬ್ಲಿಕ್ ಶಾಲೆಗಳ ಪ್ರಾದೇಶಿಕ ನಿರ್ದೇಶಕರಿಗೆ ಪತ್ರ ಬರೆದು ಶಿಕ್ಷಕಿ ಮೇಲೆ ಕ್ರಮ ಜರುಗಿಸುವಂತೆ ಶಿಫಾರಸು ಮಾಡಿದರು.
ಡಿಇಒ ಅವರ ಪತ್ರದ ನಂತರ, ಪ್ರಾದೇಶಿಕ ನಿರ್ದೇಶಕರು ಶನಿವಾರ ಶಿಕ್ಷಕಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕೆಲಸದಿಂದ ವಜಾಗೊಳಿಸಿದರು.

ಈ ವಿಷಯದಲ್ಲಿ ನಿರ್ಲಕ್ಷ್ಯ ಮತ್ತು ದೂರಿನ ನಂತರವೂ ಕ್ರಮ ಕೈಗೊಳ್ಳದಿದ್ದಕ್ಕಾಗಿ ಶಾಲೆಯ ಉಸ್ತುವಾರಿ ಪ್ರಾಂಶುಪಾಲರನ್ನು ರಜೆಯ ಮೇಲೆ ಕಳುಹಿಸಲಾಗಿದೆ.

ಕಾರಿನ ಸನ್‌ ರೂಫ್‌ನಲ್ಲಿ ನಿಂತ ಬಾಲಕನಿಗೆ ಬಡಿದ ಕಬ್ಬಿಣದ ಬ್ಯಾರಿಯರ್, ಬೆಂಗಳೂರು ಬಾಲಕನ ಸ್ಥಿತಿ ಗಂಭೀರ, ವೈರಲ್ ವಿಡಿಯೋ ನೋಡಿ

ರೈಲಿನಲ್ಲೇ ಫುಲ್ ರೊಮ್ಯಾನ್ಸ್, ಸುತ್ತ ಪ್ರಯಾಣಿಕರಿದ್ದರೂ ಮೈಮರೆತ ಯುವ ಜೋಡಿ, ವೈರಲ್ ವಿಡಿಯೋ ನೋಡಿ

ನನ್ನದು 40 ಎಕರೆ ಬೆಳೆ ಹಾಳಾಯ್ತು, ನಾನ್ಯಾರ ಹತ್ರ ಹೇಳಲಿ… ಯುವ ರೈತನ ಮೇಲೆ ರೇಗಾಡಿದ ಮಲ್ಲಿಕಾರ್ಜುನ ಖರ್ಗೆ

TAGGED:Class 2 girl beaten up for asking permission to go to the toiletsentenced to 100 lashes
Share This Article
Facebook Twitter Copy Link Print
Previous Article ನನ್ನದು 40 ಎಕರೆ ಬೆಳೆ ಹಾಳಾಯ್ತು, ನಾನ್ಯಾರ ಹತ್ರ ಹೇಳಲಿ… ಯುವ ರೈತನ ಮೇಲೆ ರೇಗಾಡಿದ ಮಲ್ಲಿಕಾರ್ಜುನ ಖರ್ಗೆ
Next Article ಸಾಗರದಲ್ಲಿ ಗಣಪತಿ ವಿಸರ್ಜನೆ ವೇಳೆ ಉಗುಳಿದ ಅನ್ಯ ಕೋಮಿನ ಬಾಲಕರು: ವಿಡಿಯೋ ವೈರಲ್, ಕ್ಷಮೆ ಯಾಚನೆ ಬಳಿಕ ತಿಳಿಯಾದ ಪರಿಸ್ಥಿತಿ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?