newsics.com
ಬೆಂಗಳೂರು: ರಾಜ್ಯದ ರಾಜಕೀಯ ವಲಯವನ್ನೇ ಬೆಚ್ಚಿ ಬೀಳಿಸಿರುವ ಬೃಹತ್ ಭೂಕಬಳಿಕೆ ಹಗರಣ ಬೆಳಕಿಗೆ ಬಂದಿದೆ.
ಕೆಂಗೇರಿ ಹೋಬಳಿಯ ದೊಡ್ಡಬೆಲೆ ಗ್ರಾಮದಲ್ಲಿ ಕನಿಷ್ಠ 360 ಕೋಟಿಗೂ ಮೌಲ್ಯ ಬಾಳುವ ಸರ್ಕಾರಿ ಭೂಮಿ ಕಬಳಿಕೆ ಮಾಡಲಾಗಿದೆ ಎಂಬ ಗಂಭೀರ ಆರೋಪ ಹೊರಬಿದ್ದಿದ್ದು, ಈ ಹಗರಣದ ಹಿಂದೆ ಶಾಸಕ ಎಸ್.ಟಿ. ಸೋಮಶೇಖರ್ ಆಪ್ತರೆಂದು ಹೇಳಲಾಗುತ್ತಿರುವ ನಾರಾಯಣಪ್ಪ ಮತ್ತು ಲಕ್ಕಪ್ಪ ಸಹೋದರರು ನಕಲಿ ದಾಖಲೆಗಳ ಆಧಾರದ ಮೇಲೆ 350 ಕೋಟಿಗೂ ಹೆಚ್ಚು ಮೌಲ್ಯದ ಸರ್ಕಾರಿ ಜಮೀನು ಕಬಳಿಸಿರುವ ಆರೋಪ ಹೊರಬಿದ್ದಿದೆ.
ದೊಡ್ಡಬೆಲೆ ಗ್ರಾಮದಲ್ಲಿ ಒಟ್ಟು 39 ಎಕರೆ ಸರ್ಕಾರಿ ಜಾಗವಿದ್ದು, ಅದರಲ್ಲೂ 24 ಎಕರೆ ಜಮೀನು ನಕಲಿ ದಾಖಲೆಗಳ ಆಧಾರದ ಮೇಲೆ ವಶಪಡಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.
ಪ್ರತಿ ಎಕರೆಗೂ ಕನಿಷ್ಠ 15-20 ಕೋಟಿ ರೂಪಾಯಿ ಮೌಲ್ಯ ಬಾಳುವ ಈ ಭೂಮಿಯ ಒಟ್ಟು ಬೆಲೆ 360 ಕೋಟಿಗೂ ಹೆಚ್ಚು.ನಕಲಿ ಹಕ್ಕುಪತ್ರಗಳು, ದಾಖಲೆಗಳು ಹಾಗೂ ಉಳುಮೆದಾರರ ಕಾಯ್ದೆಯ ಹೆಸರಿನಲ್ಲಿ ಸುಳ್ಳು ದಾಖಲೆಗಳನ್ನು ಸೃಷ್ಟಿಸಿ, ರಾಜಕೀಯ ಪ್ರಭಾವ ಬಳಸಿ ಭ್ರಷ್ಟ ಅಧಿಕಾರಿಗಳ ಸಹಕಾರದಿಂದ ಈ ಭೂಮಿಯನ್ನು ಖಾಸಗಿ ಸ್ವಾಧೀನಕ್ಕೆ ತೆಗೆದುಕೊಂಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬರುತ್ತಿದೆ.
ಭೂಗಳ್ಳತನದ ವಿರುದ್ಧ ಹೋರಾಡಿದ ಸ್ಥಳೀಯರು ಮತ್ತು ಹೋರಾಟಗಾರರು ದುರ್ಭಾಗ್ಯಕರ ಅಂತ್ಯ ಕಂಡಿದ್ದಾರೆ. 2002ರಲ್ಲಿ ನಿವೃತ್ತ ಯೋಧ ಕೊಲೆಯಾದರು. ಅದೇ ವರ್ಷ ಮತ್ತೊಬ್ಬ ಹೋರಾಟಗಾರ ವೆಂಕಟಪ್ಪ ಅನುಮಾನಾಸ್ಪದವಾಗಿ ಆತ್ಮಹತ್ಯೆ ಮಾಡಿಕೊಂಡರು. ಈ ಮೂರು ಪ್ರಕರಣಗಳ ಹಿಂದೆಯೂ ಭೂಮಿಯನ್ನು ಕಬಳಿಸಿದವರ ಕೈವಾಡವಿದೆ ಎಂಬ ಅನುಮಾನ ವ್ಯಕ್ತವಾಗಿದೆ.
ಈ ಹಗರಣದ ಕುರಿತು ಬಿಜೆಪಿ ಮುಖಂಡ ಎನ್.ಆರ್. ರಮೇಶ್ ಗಂಭೀರ ಆರೋಪ ಹೊರಿಸಿ, ಮರುತನಿಖೆ ಅಗತ್ಯವಿದೆ ಎಂದು ಆಗ್ರಹಿಸಿದ್ದಾರೆ. ಅವರ ಪ್ರಕಾರ, 39 ಎಕರೆಗಳಲ್ಲಿ 24 ಎಕರೆ ಸರ್ಕಾರಿ ಜಮೀನನ್ನು ನಕಲಿ ದಾಖಲೆ ಸೃಷ್ಟಿಸಿ ಹತ್ತಿಕ್ಕಲಾಗಿದೆ. ಇನ್ನೂ 15 ಎಕರೆ ಭೂಮಿಯನ್ನು 75 ವರ್ಷಗಳ ಹಿಂದೆ ಕೇವಲ 100 ರೂಪಾಯಿಗೆ ಖರೀದಿಸಿದಂತೆ ಸುಳ್ಳು ದಾಖಲೆ ಮಾಡಲಾಗಿದೆ.
ಕೆಂಗೇರಿ ಹೋಬಳಿಯ ದೊಡ್ಡಬೆಲೆ ಗ್ರಾಮದಲ್ಲಿ 360 ಕೋಟಿ ರೂ. ಮೌಲ್ಯದ ಸರ್ಕಾರಿ ಭೂಮಿ ಕಬಳಿಕೆ ಹಗರಣ ಬೆಳಕಿಗೆ ಬಂದಿದೆ. ಶಾಸಕರ ಆಪ್ತರು ನಕಲಿ ದಾಖಲೆಗಳ ಮೂಲಕ ಭೂಮಿ ಕಬಳಿಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಹೋರಾಟಗಾರರ ಅನುಮಾನಾಸ್ಪದ ಸಾವುಗಳ ಬಗ್ಗೆಯೂ ಅನುಮಾನ ವ್ಯಕ್ತವಾಗಿದೆ.