newsics.com
ಬೆಳಗಾವಿ: ಎರಡು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿ ಆರು ತಿಂಗಳ ಗರ್ಭಿಣಿಯನ್ನಾಗಿ ಮಾಡಿ ಇದೀಗ ಇನ್ನೊಬ್ಬಳ ಮೇಲಿನ ವ್ಯಾಮೋಹಕ್ಕೆ ಬಿದ್ದು 15 ಲಕ್ಷ ರೂಪಾಯಿಗೆ ಸುಪಾರಿ ಕೊಟ್ಟು ಹೆಂಡತಿಯನ್ನೇ ಮುಗಿಸಿದ ಘಟನೆ ಕಾಗವಾಡ ತಾಲೂಕಿನ ಬಿ.ಕೆ.ಉಗಾರದಲ್ಲಿ ನಡೆದಿದೆ.
ಚೈತಾಲಿ ಗಂಡನ ಸುಪಾರಿಗೆ ಬಲಿಯಾದ ಮಹಿಳೆ. ಪ್ರದೀಪ್ ಪ್ರಮುಖ ಆರೋಪಿ. ಕಾನೂನು ಪದವಿ ಪಡೆದಿದ್ದ ಪ್ರದೀಪ್ ಕಿರಣಗಿ, ಕಾಗವಾಡ ಕೋರ್ಟ್ನಲ್ಲಿ ವಕೀಲ ವೃತ್ತಿಯಲ್ಲಿದ್ದ. ಪ್ರೇಮ-ವಿವಾಹದ ಬಳಿಕವೂ ಕಾಲೇಜಿನ ಸೀನಿಯರ್ ಜೊತೆಗೆ ಪ್ರದೀಪ್ಗೆ ಲವ್ ಶುರುವಾಗಿತ್ತಂತೆ.
ಸೀನಿಯರ್ ಲೇಡಿಯನ್ನ ಬುಟ್ಟಿಗೆ ಹಾಕಿಕೊಳ್ಳಲು ತನಗೆ ಮದುವೆಯೇ ಆಗಿಲ್ಲ ಎಂದು ನಾಟಕವಾಡಿದ್ದಾನೆ ಎನ್ನಲಾಗಿದೆ. ಜೂನಿಯರ್ ಪ್ರದೀಪ್ ಮಾತು ನಂಬಿದ್ದ ಸೀನಿಯರ್, ಪ್ರೀತಿಯ ಬಲೆಗೆ ಬಿದ್ದಿದ್ದಳು. ಸೀನಿಯರ್ ಮೇಲಿನ ಮೋಹದಿಂದ ಪತ್ನಿಯನ್ನು ಮುಗಿಸಲು ಪ್ಲಾನ್ ಮಾಡಿದ್ದಾನೆ ಎಂದು ತನಿಖೆಯಲ್ಲಿ ತಿಳಿದು ಬಂದಿದೆ.