newsics.com
ತುಮಕೂರು: ಕುಡಿಯುವ ನೀರಿನ ವಿಚಾರಕ್ಕಾಗಿ ಪರಸ್ಪರ ಎರಡು ಗುಂಪುಗಳು ಗಲಾಟೆ ಮಾಡಿಕೊಂಡು ಕೊಲೆಯಲ್ಲಿ ಅಂತ್ಯ ಕಂಡಿದೆ.
ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ
ಹೋಬಳಿಯ ಪೋಲೇನಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಎರಡು ಗುಂಪುಗಳ ನಡುವೆ ಆರಂಭವಾದ ಜಗಳ ಆನಂದ್ (32) ಎಂಬತನನ್ನು ನಾಗೇಶ್ ಎಂಬ ವ್ಯಕ್ತಿ ದ್ವೇಷದಿಂದ ಅಟ್ಟಾಡಿಸಿ ಹೊಡೆದಿದ್ದಲ್ಲದೆ ನಡೆದುಕೊಂಡು ಹೋಗುತ್ತಿದ್ದ ಆನಂದನ ಮೇಲೆ ಬೊಲೆರೊ ವಾಹನ ಹತ್ತಿಸಿ ಸಾಯಿಸಿರುವ ಘಟನೆ ಗುರುವಾರ ನಡೆದಿದೆ.
ಕೊಡಿಗೇನಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ಶ್ರೀನಿವಾಸ್ ಪ್ರಸಾದ್ ಆರೋಪಿ ನಾಗೇಶ್ ಮೇಲೆ ಕೇಸ್ ದಾಖಲಿಸಿ ಬಂಧಿಸಿದ್ದಾರೆ.