newsics.com
ಬೆಂಗಳೂರು: ಕಾವೇರಿ ನೀರು ಸರಬರಾಜು ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 15, 16 ಮತ್ತು 17 ರಂದು ಬೆಂಗಳೂರಿನಲ್ಲಿ ಕಾವೇರಿ ನೀರು ಪೂರೈಕೆ ಸ್ಥಗಿತವಾಗಲಿದೆ.
ಒಟ್ಟು 5 ಹಂತಗಳಲ್ಲಿ ಸುಮಾರು 60 ಗಂಟೆಗಳ ಕಾಲ ನೀರು ಸರಬರಾಜು ಸ್ಥಗಿತವಾಗಲಿದ್ದು, ಹೀಗಾಗಿ ಸಾರ್ವಜನಿಕರು ಮುಂಚಿತವಾಗಿ ನೀರನ್ನು ಸಂಗ್ರಹಿಸಿಟ್ಟುಕೊಳ್ಳಲು ಜಲಮಂಡಳಿ ಮನವಿ ಮಾಡಿದೆ.
ಈ ಕುರಿತು ಜಲಮಂಡಳಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ಮಾಹಿತಿ ನೀಡಿದ್ದು, ನಿಯಮಿತ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನೀರು ಸರಬರಾಜು ಯೋಜನೆಯ ವಿವಿಧ ಹಂತಗಳ ಜಲರೇಚಕ ಯಂತ್ರಾಗಾರಗಳನ್ನು ಸೆಪ್ಟೆಂಬರ್ 15, 16 ಮತ್ತು 17 ರಂದು ಸ್ಥಗಿತಗೊಳಿಸಲಾಗುತ್ತಿದೆ. ಈ ಜಲರೇಚಕ ಯಂತ್ರಾಗಾರಗಳ ಸ್ಥಗಿತತೆಯಿಂದ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಹೀಗಾಗಿ ಸಾರ್ವಜನಿಕರು ಮುಂಚಿತವಾಗಿ ನೀರು ಸಂಗ್ರಹಿಸಿಟ್ಟುಕೊಳ್ಳುಂತೆ ಮನವಿ ಮಾಡಿದ್ದಾರೆ.
ಎಲ್ಲೆಲ್ಲಿ ಯಾವಾಗ ನೀರು ಬಂದ್?
ಕಾವೇರಿ 5ನೇ ಹಂತ – ಸೆಪ್ಟೆಂಬರ್ 15 ರ ಬೆಳಗ್ಗೆ 1 ರಿಂದ ಸೆಪ್ಟೆಂಬರ್ 17 ರ ಮಧ್ಯಾಹ್ನ 1ರವರೆಗೆ ಒಟ್ಟು 60 ಗಂಟೆಗಳು.
ಕಾವೇರಿ ಹಂತ 1, 2, 3, 4 ರಲ್ಲಿ – ಸೆಪ್ಟೆಂಬರ್ 16 ರ ಬೆಳಗ್ಗೆ 6ರಿಂದ ಸೆಪ್ಟೆಂಬರ್ 17 ರ ಬೆಳಗ್ಗೆ 6ರವರೆಗೆ ಒಟ್ಟು 24 ಗಂಟೆಗಳು.
ಏನು ಕಾಮಗಾರಿ?
ಬೆಂಗಳೂರು ನಗರದ ಜನತೆಗೆ ಯಾವುದೇ ಅಡೆತಡೆಯಿಲ್ಲದೆ ಕುಡಿಯುವ ನೀರನ್ನು ಸರಬರಾಜು ಮಾಡಲು, ಕಾವೇರಿ ನೀರು ಸರಬರಾಜು ಯೋಜನೆಯ ಜಲರೇಚಕ ಯಂತ್ರಾಗಾರಗಳು ಮತ್ತು ಮುಖ್ಯ ಕೊಳವೆ ಮಾರ್ಗಗಳ ಸುಲಲಿತ ಚಾಲನೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಸುಸ್ಥಿತಿಯಲ್ಲಿಡುವ ಉದ್ದೇಶದಿಂದ ಜಲಮಂಡಳಿಯ ವಿವಿಧೆಡೆ ನಿಯಮಿತ ತುರ್ತು ನಿರ್ವಹಣೆಯ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ.
ಮತ್ತೊಂದು ವಿಡಿಯೋ ಬಿಡುಗಡೆ ಮಾಡಿದ ಎಂ.ಡಿ. ಸಮೀರ್: ಈ ಬಾರಿ ಧೂತ ಹೇಳಿದ್ದೇನು? ಅಳಲು ತೋಡಿಕೊಂಡಿದ್ದೇನು?
ಹೀರಾಬೆನ್ ನಿಜವಾಗ್ಲೂ ಪ್ರಧಾನಿ ಮೋದಿಗೆ ಬೈದ್ರಾ? ಏನಿದು AI ವಿಡಿಯೋ ರಂಪಾಟ? ವೈರಲ್ ವಿಡಿಯೋ ನೋಡಿ
90% ಜನರು ತಪ್ಪು ರೀತಿಯಲ್ಲಿ ‘ಚಹಾ’ ತಯಾರಿಸ್ತಾರೆ, ಮೊದ್ಲು ಯಾವುದನ್ನ ಸೇರಿಸ್ಬೇಕು?
Life style ನೀವು ದಿನಾ ಬೆಳಿಗ್ಗೆ ಅಲಾರಾಂನೊಂದಿಗೆ ಎಚ್ಚರಗೊಳ್ಳುತ್ತೀರಾ?
Bathing Tips ಸ್ನಾನ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! ಮಾಡಿದರೆ ಅಷ್ಟೇ..
ಇನ್ಮುಂದೆ ಮಲ್ಟಿಫ್ಲೆಕ್ಸ್ ಸೇರಿದಂತೆ ಎಲ್ಲಾ ಚಿತ್ರಮಂದಿರಗಳಿಗೂ ಏಕರೂಪದ ದರ ನಿಗದಿ