newsics.com
ಲಕ್ನೋ: ಕೆಲವು ಸಣ್ಣ ಮರಗಳ ನಡುವೆ 15 ದಿನಗಳ ಹೆಣ್ಣುಮಗುವನ್ನು ಜೀವಂತ ಸಮಾಧಿ ಮಾಡಿರುವ ಘಟನೆ ಉತ್ತರ ಪ್ರದೇಶದ ಜೈತಿಪುರ ಪ್ರದೇಶದ ಗೋದಾಪುರ ಗ್ರಾಮದ ಬಹಗುಲ್ ನದಿಯ ಸೇತುವೆ ಬಳಿ ನಡೆದಿದೆ.
ಕುರಿಗಾಹಿಯೊಬ್ಬ ಶಿಶುವಿನ ಅಳುವ ಧ್ವನಿಯನ್ನು ಕೇಳಿ ಅಲ್ಲಿಗೆ ಓಡಿ ಬಂದಿದ್ದರು. ನಂತರ ಅವರು ಮಗುವಿನ ಒಂದು ಕೈ ಮಣ್ಣಿನಿಂದ ಹೊರಗೆ ಇರುವುದನ್ನು ಗಮನಿಸಿದ್ದಾರೆ. ಇದಾದ ನಂತರ, ಅವರು ಸುತ್ತಮುತ್ತಲಿನ ಜನರಿಗೆ ಮಾಹಿತಿ ನೀಡಿದರು. ಸುತ್ತಮುತ್ತಲಿನ ಜನರು ಅಲ್ಲಿಗೆ ತಲುಪಿದಾಗ, ಅವರು ಕೂಡ ಮಗುವನ್ನು ನೋಡಿದ್ದಾರೆ. ನಂತರ ಜನರು ಪೊಲೀಸರಿಗೆ ಮಾಹಿತಿ ನೀಡಿದ್ದರು.
ಮಣ್ಣನ್ನು ತೆಗೆದು ಶಿಶುವನ್ನು ಭೂಮಿಯೊಳಗಿಂದ ಹೊರತೆಗೆದರು. ತಕ್ಷಣ ಆಕೆಯನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.