Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Cabinet decision ದೌರ್ಜನ್ಯಕ್ಕೊಳಗಾಗಿ ಮೃತಪಟ್ಟ ಎಸ್ಸಿ, ಎಸ್ಟಿ ಕುಟುಂಬದವರಿಗೆ ಉದ್ಯೋಗ: ಸಿದ್ದರಾಮಯ್ಯ ಕ್ಯಾಬಿನೆಟ್ ನಿರ್ಧಾರ
ಕರ್ನಾಟಕಪ್ರಮುಖ

Cabinet decision ದೌರ್ಜನ್ಯಕ್ಕೊಳಗಾಗಿ ಮೃತಪಟ್ಟ ಎಸ್ಸಿ, ಎಸ್ಟಿ ಕುಟುಂಬದವರಿಗೆ ಉದ್ಯೋಗ: ಸಿದ್ದರಾಮಯ್ಯ ಕ್ಯಾಬಿನೆಟ್ ನಿರ್ಧಾರ

Share
3 Min Read
SHARE

newsics.com

ಬೆಂಗಳೂರು: ಜಾತಿ ತಾರತಮ್ಯ ಹಿನ್ನೆಲೆಯಲ್ಲಿ ದೌರ್ಜನ್ಯಕ್ಕೊಳಗಾಗಿ ಮೃತಪಟ್ಟ ಎಸ್‌ಸಿ, ಎಸ್‌ಟಿ ವರ್ಗಕ್ಕೆ ಸೇರಿದ ವ್ಯಕ್ತಿಗಳ ಕುಟುಂಬಸ್ಥರಿಗೆ ಗ್ರೂಪ್-ಸಿ ಮತ್ತು ಗ್ರೂಪ್-ಡಿ ವೃಂದದ ಹುದ್ದೆಗಳಿಗೆ ಅನುಕಂಪದ ಆಧಾರದ ಮೇಲೆ ಸರ್ಕಾರಿ ಉದ್ಯೋಗ ನೀಡಲು ಸಚಿವ ಸಂಪುಟ ಅನುಮೋದನೆ ನೀಡಿದೆ.

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನ ತೆಗೆದುಕೊಳ್ಳಲಾಗಿದೆ. ಈ ಸಂಬಂಧ ನಿಯಮ ತಿದ್ದುಪಡಿ ತರಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಕೋಲಾರ, ಬೆಂಗಳೂರಿನ ‌ ದಾಸನಪುರ, ಮೈಸೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ತಲಾ ಒಂದು 50 ಟಿಪಿಡಿ ಬಯೋ ಸಿಎನ್‌ಜಿ ಘಟಕಗಳನ್ನು ಒಟ್ಟು 74.88 ಕೋಟಿ ರೂ.ಗಳ (ಪ್ರತಿ ಘಟಕಕ್ಕೆ 24.96 ಕೋಟಿ ರೂ.) ಅಂದಾಜು ವೆಚ್ಚದಲ್ಲಿ ಸ್ಥಾಪನೆಗೆ ಅನುಮೋದನೆ.

ಕರ್ನಾಟಕ ಲೋಕಸೇವಾ ಆಯೋಗದ 2024-25ನೇ ಸಾಲಿನ ವಾರ್ಷಿಕ ವರದಿಗೆ ಒಪ್ಪಿಗೆ.

ವಿಜಯಪುರ ಜಿಲ್ಲೆಯಲ್ಲಿ ಅಭಿವೃದ್ಧಿಪಡಿಸುತ್ತಿರುವ ವಿಜಯಪುರ ವಿಮಾನ ನಿಲ್ದಾಣದ ಅಭಿವೃದ್ಧಿ ಕಾಮಗಾರಿಗಳ ಒಟ್ಟು 618.75 ಕೋಟಿ ರೂ.ಗಳ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ.

347 ಕೋಟಿ ರೂ. ಮೂಲ ವೆಚ್ಚ ಇತ್ತು. ಇದೀಗ ದೊಡ್ಡ ವಿಮಾನ ಇಳಿಯುವ ನಿಟ್ಟಿನಲ್ಲಿ ಪರಿಷ್ಕರಣೆ.

ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ (ಪಿಪಿಪಿ ಮಾದರಿ) ಕಾರ್ಡಿಯಾಕ್ ಯೂನಿಟ್ ಸ್ಥಾಪಿಸಲು ಅಗತ್ಯವಿರುವ ವೈದ್ಯಕೀಯ ಉಪಕರಣಗಳನ್ನು 10.89 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಖರೀದಿಸಲು ಸಂಪುಟ ಒಪ್ಪಿಗೆ.

ಉಡುಪಿ ಜಿಲ್ಲೆಯ ಕಾರ್ಕಳ ತಾಲ್ಲೂಕಿನ ಕುಕ್ಕುಂದೂರು ಗ್ರಾಮದ 534/1ಎ1ರಲ್ಲಿ 0.14 (14 ಗುಂಟೆ) ವಿಸ್ತೀರ್ಣದ ಜಮೀನನ್ನು ಕಾಂಗ್ರೆಸ್ ಭವನ ಕಟ್ಟಡ ನಿರ್ಮಾಣದ ಉದ್ದೇಶಕ್ಕೆ ಕಾಂಗ್ರೆಸ್‌ ಭವನ ‌ ಟ್ರಸ್ಟ್ (ರಿ) ಬೆಂಗಳೂರಿಗೆ ಮಂಜೂರು.

ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲ್ಲೂಕಿನ ಪ್ರಜಾಸೌಧ, ಶಿರಸಿ ತಾಲ್ಲೂಕು ಆಡಳಿತ ಕೇಂದ್ರ ಕಟ್ಟಡದ 2ನೇ ಹಂತದಲ್ಲಿ ಮೂರನೇ ಮಹಡಿಯ ನಿರ್ಮಾಣದ ಕಾಮಗಾರಿಗೆ ಹಾಗೂ ಈ ಕಟ್ಟಡಕ್ಕೆ ಪೀಠೋಪಕರಣಗಳನ್ನು ಹಾಗೂ ಇತರ ಮೂಲ ಸೌಕರ್ಯಗಳನ್ನು ಒದಗಿಸಲು ಒಟ್ಟು 16 ಕೋಟಿ ರೂ.ಗಳ ಪರಿಷ್ಕೃತ ಅಂದಾಜು ಮೊತ್ತಕ್ಕೆ ‌ಸಂಪುಟ ಆಡಳಿತಾತ್ಮಕ ‌ ಅನುಮೋದನೆ.

ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಿರ್ಮಿಸುತ್ತಿರುವ ಪ್ರಜಾಸೌಧ, ಜಿಲ್ಲಾ ಆಡಳಿತ ‌ ಕೇಂದ್ರ ಕಟ್ಟಡದ 3ನೇ ಮತ್ತು 4ನೇ ಮಹಡಿಯ ನಿರ್ಮಾಣ ಹಾಗೂ ಹಾಗೂ ಭವಿಷ್ಯದಲ್ಲಿ 5ನೇ ಮತ್ತು 6ನೇ ಮಹಡಿಯನ್ನು ವಿಸ್ತರಿಸುವ ಕಾಮಗಾರಿಯ 55.00 ಕೋಟಿ ರೂ.ಗಳ ಪರಿಷ್ಕೃತ ಅಂದಾಜು ಮೊತ್ತಕ್ಕೆ ಸಂಪುಟ ಆಡಳಿತಾತ್ಮಕ ಅನುಮೋದನೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನ ಅಥಣಿ ಗ್ರಾಮದ ಗಾಯರಾಣ ರಿ.ಸ.ನಂ. 880 4-00 ಎಕರೆ ಜಮೀನನ್ನು ಶ್ರೀ ಮಹಾಲಕ್ಷ್ಮೀ ದೇವಿ (ಲಕ್ಕವ್ವದೇವಿ) ದೇವಸ್ಥಾನ, ಕಟಗೇರಿ ಇವರಿಗೆ ಮಂಜೂರು.
ಕೇಂದ್ರ ಕಾರಾಗೃಹಗಳಾದ ಬಳ್ಳಾರಿ, ವಿಜಯಪುರ, ಧಾರವಾಡ, ಶಿವಮೊಗ್ಗ, ಬೆಳಗಾವಿ, ಮೈಸೂರು, ಕಲಬುರಗಿ ಮತ್ತು ತುಮಕೂರು ಜಿಲ್ಲಾ ಕಾರಾಗೃಹಗಳಲ್ಲಿ ಒಟ್ಟು 16.75 ಕೋಟಿ ರೂ.ಗಳ ಮೊತ್ತದಲ್ಲಿ 10 ಸಂಖ್ಯೆಯ ಜಾಮರ್‌ಗಳನ್ನು ಅಳವಡಿಸಲು ಸಂಪುಟ ಆಡಳಿತಾತ್ಮಕ ಅನುಮೋದನೆ.

ಬೆಂಗಳೂರು ನಗರ ಜಿಲ್ಲೆ, ಬೆಂಗಳೂರು ದಕ್ಷಿಣ ತಾಲೂಕು ಸರ್.ಎಂ. ವಿಶ್ವೇಶ್ವರಯ್ಯ ನಗರದಲ್ಲಿ ಛಲವಾದಿ ಮಹಾಸಭಾ ವತಿಯಿಂದ ನಿರ್ಮಿಸುತ್ತಿರುವ ಛಲವಾದಿ ಸಮುದಾಯ ಭವನದ .22.33 ಕೋಟಿ ರೂ.ಗಳ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ.

ಬೆಂಗಳೂರಿನ ಮಾಗಡಿ ಮುಖ್ಯ ರಸ್ತೆಯಲ್ಲಿರುವ ಕೇಂದ್ರ ಪರಿಹಾರ ಸಮಿತಿಗೆ ಸೇರಿದ ಜಮೀನಿನಲ್ಲಿ ಸುಮ್ಮನಹಳ್ಳಿ ಸೊಸೈಟಿಗೆ ಗುತ್ತಿಗೆಗೆ ನೀಡಲಾದ ಜಮೀನಿನ ಪೈಕಿ ಸರ್ವೆ ನಂಬರ್ 4ರಲ್ಲಿ ಲಭ್ಯವಿರುವ 15 ಎಕರೆ 16 ಗುಂಟೆ ಜಮೀನನ್ನು ಹಿಂಪಡೆದು ಈ ಜಮೀನಿನಲ್ಲಿ ಮಾನಸಿಕ ಆರೋಗ್ಯ ಕೇಂದ್ರ, ಸಮಾಜ ಕಲ್ಯಾಣ ಇಲಾಖೆಯಡಿ ಬರುವ ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದ (ಐಜಿಸಿಸಿಡಿ) ವತಿಯಿಂದ ಡಾ.ಬಿ.ಆರ್. ಅಂಬೇಡ್ಕರ್ ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರ ಮತ್ತು ಕೇಂದ್ರ ಪರಿಹಾರ ಸಮಿತಿಯಿಂದ ಸಿದ್ದ ಉಡುಪು ಘಟಕಗಳನ್ನು ಸ್ಥಾಪಿಸಲು ಒಪ್ಪಿಗೆ.

ಅಧಿಕಾರಿ/ನೌಕರರು ಮುಂಬಡ್ತಿ ಹೊಂದಲು ತರಬೇತಿ ಕಡ್ಡಾಯಗೊಳಿಸಲು ಒಪ್ಪಿಗೆ.

ರಾಜ್ಯದ 9,337 ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟವನ್ನು ಸಿದ್ಧಪಡಿಸಲು ಹೊಸ ಪಾತ್ರೆ ಪರಿಕರಗಳು ಅಗತ್ಯವಿದ್ದು, ಇದಕ್ಕೆ ಬೇಕಾದ ಅನುದಾನವನ್ನು ರಾಜ್ಯ ಸರ್ಕಾರದ ಕ್ಷೀರಭಾಗ್ಯ ಯೋಜನೆಯಡಿ ನೀಡಲು ಒಪ್ಪಿಗೆ. ಒಟ್ಟಾರೆ 21.55 ಕೋಟಿ ರೂ.ಗಳ ಅಂದಾಜು ಮೊತ್ತ ಭರಿಸಲು ಸಂಪುಟ ಅಸ್ತು.

ಮತಪತ್ರ ಮಾಡುವುದರ ಬಗ್ಗೆ ಸುಗ್ರೀವಾಜ್ಞೆ ಹೊರಡಿಸುವ ಅವಶ್ಯಕತೆ ಇದೆಯೋ ಇಲ್ಲವೋ ಎಂಬ ಬಗ್ಗೆ ಚರ್ಚೆ ನಡೆದಿದೆ. ಚುನಾವಣಾ ಆಯೋಗದ ಆಯುಕ್ತರ ಜತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲು ನಿರ್ಧಾರ.

Bigg Boss ಬಿಗ್ ಬಾಸ್ ಕನ್ನಡ ಸೀಸನ್ 12′ ಶೋಗೆ ಫೈನಲ್ ಆದ ಸ್ಪರ್ಧಿಗಳು ಇವರೇ ನೋಡಿ?

Actress Tanushree ಅಲ್ಲಿಗೆ ಹೋಗಿ ನಾನೇಕೆ ಪರಪುರುಷನ ಜತೆ ಮಲಗ್ಲಿ… ನಟಿ ತನುಶ್ರೀ ಹೀಗೆ ಹೇಳಿದ್ಯಾಕೆ?

Pitru Paksha: ಪಿತೃ ಪಕ್ಷದಲ್ಲಿ ಗಂಡ ಹೆಂಡತಿ ದೈಹಿಕ ಸಂಬಂಧ ಬೆಳೆಸಬಾರದಾ?

MYSURU DASARA ಈ ಬಾರಿಯ ಮೈಸೂರು ದಸರಾಗೆ ಭಾರೀ ಸರ್ಪಗಾವಲು: DGP ಡಾ. ಸಲೀಂ ಸೂಚನೆಗೇನು‌‌ ಕಾರಣ?

ಜಾತಿ ಗಣತಿ ರದ್ದುಪಡಿಸುವಂತೆ ಕೋರಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆ

Gold Rate: ಚಿನ್ನ ಖರೀದಿ ಮಾಡೋರಿಗೆ ಇದೇ ಬೆಸ್ಟ್​ ಟೈಮ್.. ಬಂಗಾರದ ಬೆಲೆಯಲ್ಲಿ ಇಳಿಕೆ

TAGGED:Siddaramaiah Cabinet decision to provide jobs to families of SCST who died due to violence
Share This Article
Facebook Twitter Copy Link Print
Previous Article Bigg Boss ಬಿಗ್ ಬಾಸ್ ಕನ್ನಡ ಸೀಸನ್ 12′ ಶೋಗೆ ಫೈನಲ್ ಆದ ಸ್ಪರ್ಧಿಗಳು ಇವರೇ ನೋಡಿ?
Next Article Dharmasthala Case: ಬಂಗ್ಲೆಗುಡ್ಡ ರಹಸ್ಯ; ಅಸ್ಥಿಪಂಜರದ ಬಳಿ ಸಿಕ್ಕ ಐಡಿ ಕಾರ್ಡ್ ನಲ್ಲಿರುವ ವ್ಯಕ್ತಿಯ ಗುರುತು ಪತ್ತೆ

Popular Posts

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read

Modi and DK ಮುಖ್ಯಮಂತ್ರಿಯಾದ ಬಳಿಕ ಮೊದಲ‌ ಬಾರಿ ಮೋದಿ ಭೇಟಿಯಾದ ಡಿಕೆ: ಪ್ರಧಾನಿ ಜತೆ ಚರ್ಚಿಸಿದ್ದೇನು?

1 Min Read

Burude case ಧರ್ಮಸ್ಥಳ ಬುರುಡೆ ಕೇಸ್‌ನಲ್ಲಿ ಪ್ರಕಾಶ್ ರಾಜ್! ಕೇರಳದಿಂದ 200 ಕೋಟಿ ಫಂಡಿಂಗ್, ಚಿನ್ನಯ್ಯ ಹೇಳಿದ್ದೇನು?

4 Min Read

ಸಾಗರದಲ್ಲಿ ಪೆಟ್ರೋಲ್ ಕದಿಯೋ ಗ್ಯಾಂಗ್: ಬಸ್, ರೈಲ್ವೆ ನಿಲ್ದಾಣದ ಬೈಕ್ ಗಳೇ ಕಳ್ಳರ ಟಾರ್ಗೆಟ್!

1 Min Read

You Might Also Like

ದೇಶಪ್ರಮುಖವಿದೇಶ

ಎಲೋನ್ ಮಸ್ಕ್ ಒಡೆತನದ SpaceX ಮತ್ತು Starlink ಟಾರ್ಗೆಟ್ ಎಂದ ಇರಾನ್!

1 Min Read
ದೇಶಪ್ರಮುಖ

ಸೊಸೆ ಮೇಲೆ ಮಾವನಿಂದಲೇ ಪದೇ ಪದೇ ಅತ್ಯಾಚಾರ: ಫೋನ್ ನಲ್ಲೇ ತ್ರಿವಳಿ ತಲಾಖ್ ನೀಡಿದ ಪತಿ

2 Min Read
ಕರ್ನಾಟಕಪ್ರಮುಖ

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಪ್ರಕ್ರಿಯೆಗೆ ಚಾಲನೆ : ಬಾಯ್ಸ್​​​​ ನಿಮಗೂ ಉಚಿತ ಪ್ರಯಾಣ

1 Min Read
ದೇಶಆರೋಗ್ಯಪ್ರಮುಖಲೈಫ್‌ಸ್ಟೈಲ್

Mental health ಮಾನಸಿಕ ಆರೋಗ್ಯ ಹದಗೆಡಿಸುತ್ತಿದೆಯಾ ವರ್ಕ್ ಫ್ರಂ ಹೋಮ್? ಹೊಸ ಅಧ್ಯಯನ ಹೇಳ್ತಿರೋದೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?