Newsics_Kannada
Subscribe and watch video
ನ್ಯೂಸಿಕ್ಸ್ ಕನ್ನಡ
ಬನ್ನಿ ನಮ್ ಸಂಗಡ
newsics.com
ಮೈಸೂರು : ಅರಮನೆ ನಗರಿ ಮೈಸೂರಿನಲ್ಲಿ ದಸರಾ ಸಂಭ್ರಮ ಮನೆ ಮಾಡಿದ್ದು, ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವಕ್ಕೆ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ಉತ್ಸವಮೂರ್ತಿಗೆ ದೀಪ ಬೆಳಗಿ ಪುಷ್ಪಾರ್ಚನೆ ಮಾಡುವ ಮೂಲಕ ಇಂದು ಉದ್ಘಾಟಿಸಿದರು
ಬಳಿಕ ಭಾಷಣದಲ್ಲಿ ಮಾತನಾಡಿದ ಅವರು, ಚಾಮುಂಡಿ ಸನ್ನಿಧಿ ಬಳಿ ಕರೆದೊಯ್ಯುವುದಾಗಿ ನನ್ನ ಸ್ನೇಹಿತೆ ಒಬ್ಬರು ಹೇಳಿದ್ದರು.ಈಗ ಸರ್ಕಾರ ನನ್ನನ್ನು ದಸರಾ ಉದ್ಘಾಟನೆಗೆ ಅಹ್ವಾನಿಸಿದದ ಬಳಿಕ ಬೇಕಾದಷ್ಟು ಏರುಪೇರು ಹಾಗೂ ಸನ್ನಿವೇಶಗಳು ನಡೆದರೂ ಕೂಡ, ತಾಯಿ ಚಾಮುಂಡಿ ನನ್ನನ್ನು ಕರೆಸಿಕೊಂಡಿದ್ದಾಳೆ. ನಾನು ಈಗ ತಾನೆ ಹಾಗೆ ಸನ್ನಿಧಿಯಿಂದ ನಿಮ್ಮೆಲ್ಲರಿಗೆ ಬಂದು ನಿಂತಿದ್ದೇನೆ. ದಸರಾ ಅಂದರೆ ಇದು ಕೇವಲ ಹಬ್ಬ ಮಾತ್ರ ಅಲ್ಲ ಇದು ನಾಡಿನ ಒಂದು ನಾಡಿಮಿಡಿತ ಸಂಸ್ಕೃತಿಯ ಉತ್ಸವ ಎಲ್ಲರನ್ನೂ ಒಳಗೊಳ್ಳುವಂತಹ ಗಳಿಗೆ ಸಮನ್ವಯದ ಮೇಳವಾಗಿದೆ. ಹೆಸರು ಅರಸರ ಸಂಸ್ಕೃತಿಯ ಪರಂಪರೆಯಿಂದ ಹಿಡಿದು ಕನ್ನಡ ಭಾಷೆಯ ಹೃದಯದ ಆಳದ ಸ್ಪಂದನದ ವರೆಗೆ ಈ ಹಬ್ಬವು ನಮಗೆ ನೆನಪಿಸುತ್ತದೆ.
ಸಂಸ್ಕೃತಿ ಎಂದರೆ ಬೇರೆ ಬೇರೆ ಧ್ವನಿಗಳ ಸಂಗಮ ವಿಭಿನ್ನತೆಯಲ್ಲೇ ಏಕತೆಯ ಸುಗಂಧ. ದಸರಾ ನಮ್ಮ ಸಮಗ್ರ ಮತ್ತು ಸಂಸ್ಕೃತಿಯ ಪ್ರತೀಕವಾಗಿದೆ. ನನಗೆ ಗೊತ್ತಿರುವ ಹಾಗೆ ಮೈಸೂರಿನ ಉರ್ದು ಭಾಷೆಕರು ನವರಾತ್ರಿಯ ಎಲ್ಲಾ 10 ದಿನಗಳಿಗೂ ಉರ್ದುವಿನಲ್ಲಿ ಅವರದೇ ಆದಂತಹ ಗುರುತನ್ನ ಕೊಟ್ಟಿರುತ್ತಾರೆ.ನನಗೆ ನೆನಪಿನಲ್ಲಿ ಇರುವ ಹೇಳುವ ಹಾಗೆ ವಿಜಯದಶಮಿಗೆ ಇಲ್ಲಿನ ಉರ್ದು ಭಾಷಿಕರು ಸಿಲಿಂಗನ್ ಅಂತ ಕರೆಯುತ್ತಾರೆ ಅದು ಅವರ ಸಾಹಿತ್ಯ ಸಂಸ್ಕೃತಿ ಮತ್ತು ಬದುಕಿನಲ್ಲಿ ಭಾಗವಾಗಿದೆ ಯಾರು ಭಿನ್ನರಲ್ಲ, ಯಾರು ಪರಕಿಯರಲ್ಲ ಇರಲ್ಲ ಎಲ್ಲರೂ ಕೂಡ ಒಳಗೊಂಡಂತಹ ಆಚರಿಸುವಂತಹ ಒಂದು ಸಾಂಸ್ಕೃತಿಕ ಉತ್ಸವವಾಗಿದೆ.