Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಕಾಂತಾರ: ಚಾಪ್ಟರ್1′ ಇದು ದೈವದ ಕಥನ; ಸಿನಿಮಾದಲ್ಲಿ ಏನೆಲ್ಲ ಇದೆ?
ಪ್ರಮುಖಮನರಂಜನೆ

ಕಾಂತಾರ: ಚಾಪ್ಟರ್1′ ಇದು ದೈವದ ಕಥನ; ಸಿನಿಮಾದಲ್ಲಿ ಏನೆಲ್ಲ ಇದೆ?

Share
3 Min Read
SHARE

Newsics_Kannada

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಕಾಂತಾರ: ಚಾಪ್ಟರ್ 1′ ಚಿತ್ರದಲ್ಲೂ ದೈವದ ವಿಚಾರವೇ ಹೈಲೈಟ್. ಇಲ್ಲಿ ಹಲವು ದೈವಗಳ ಅವತಾರವನ್ನು ತೋರಿಸಲಾಗಿದೆ.

‘ಕಾಂತಾರ: ಚಾಪ್ಟರ್ 1’ ಕದಂಬರ ಕಾಲದಲ್ಲಿ ನಡೆಯುವ ಕಥೆ. ಕಾಡಿನಲ್ಲಿ ವಾಸ ಮಾಡುವ ಜನಾಂಗ ಒಂದುಕಡೆಯಾದರೆ, ಶ್ರೀಮಂತಿಕೆಯಿಂದ ಕಂಗೊಳಿಸುವ ರಾಜಾಡಳಿತ ಮತ್ತೊಂದು ಕಡೆ. ರಾಜನಿಗೆ ಕಾಡಿನ ಮೇಲೆ ಕಣ್ಣು, ಕಾಡಿನವರಿಗೆ ರಾಜ್ಯದ ಮೇಲೆ ಕಣ್ಣು. ಹೀಗೆ ಪರಸ್ಪರ ಆಸೆ ಹುಟ್ಟಿಕೊಳ್ಳಲು ಕಾರಣ ಏನು? ಅದು ಎಲ್ಲಿಗೆ ಹೋಗಿ ನಿಲ್ಲುತ್ತದೆ ಎಂದು ವಿವರಿಸುವ ಬದಲು ಸಿನಿಮಾದಲ್ಲೇ ಕಣ್ತುಂಬಿಕೊಳ್ಳುವುದು ಉತ್ತಮ.

ರಿಷಬ್ ಶೆಟ್ಟಿ ಅವರು ಬೆರ್ಮೆ ಹೆಸರಿನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಕಾಂತಾರ (ಕಾಡು) ಕಾಯುವ ಕಾಯಕ ಅವನದ್ದು. ಸಿನಿಮಾ ಉದ್ದಕ್ಕೂ ರಿಷಬ್ ಕಾಣಿಸಿಕೊಳ್ಳುತ್ತಾರೆ. ಸಿನಿಮಾದಲ್ಲಿ ಅವರ ಹಣೆಮೇಲೆ ಆಗಾಗ ಒಂದಷ್ಟು ಬೆವರಿನ ಹನಿಗಳು ಮೂಡುತ್ತದೆ. ಬಹುಶಃ ಈ ಸಿನಿಮಾ ಮಾಡುವಾಗಲೂ ಇದಕ್ಕಿಂತ ಹೆಚ್ಚಿನ ಬೆವರು ಅವರ ಹಣೆ ಮೇಲೆ ಮೂಡಿರಬಹುದು. ಅವರು ಹಾಕಿದ ಶ್ರಮ ಎದ್ದು ಕಾಣುತ್ತದೆ. ರಿಸ್ಕಿ ಆ್ಯಕ್ಷನ್ ದೃಶ್ಯಗಳನ್ನು ಡ್ಯೂಪ್ ಇಲ್ಲದೆ ಮಾಡಿ ತೋರಿಸಿದ್ದಾರೆ. ಅದು ಅವರ ಬದ್ಧತೆಯನ್ನು ತೋರಿಸುತ್ತದೆ. ‘ಕಾಂತಾರ’ ಚಿತ್ರದಲ್ಲಿ ದೈವದ ಪಾತ್ರ ಮಾಡುವಾಗ ಇರುವ ಎನರ್ಜಿಗಿಂತ ಹೆಚ್ಚಿನ ಎನರ್ಜಿಯನ್ನು ಅವರು ಇಲ್ಲಿ ಹಾಕಿದ್ದಾರೆ. ತೆರೆಮೇಲೆ ನೋಡುವಾಗ ನಿಜವಾಗಿಯೂ ರಿಷಬ್ ಶೆಟ್ಟಿ ಮೇಲೆ ದೈವ ಬಂದಿದೆಯೇ ಎಂದು ಪ್ರಶ್ನೆ ಮಾಡುವಂತೆ ನಟಿಸಿ ತೋರಿಸಿದ್ದಾರೆ. ಹಾವ ಭಾವಗಳನ್ನು ಎಲ್ಲಿಯೂ ಹೆಚ್ಚೂ ಇಲ್ಲದೆ, ಕಡಿಮೆಯೂ ಇಲ್ಲದೆ ಅಚ್ಚುಕಟ್ಟಾಗಿ ನಟಿಸಿದ್ದಾರೆ.

ದಂತದ ಗೊಂಬೆಯಂತೆ ರುಕ್ಮಿಣಿ ವಸಂತ್ ಕಾಣಿಸಿಕೊಳ್ಳುತ್ತಾರೆ. ಪ್ರತಿ ಫ್ರೇಮ್ನಲ್ಲೂ ಯಾರೋ ಬಿಡಿಸಿದ ಸುಂದರ ಚಿತ್ರದಂತೆ ಕಾಣಿಸುತ್ತಾರೆ. ಯುವ ರಾಣಿಯ ಪಾತ್ರಕ್ಕೆ ಅವರಿಗಿಂತ ಹೆಚ್ಚು ಸೂಕ್ತ ಮತ್ತೊಬ್ಬರು ಇರಲಿಕ್ಕಿಲ್ಲ ಎಂದನಿಸಬಹುದು. ರಾಜರ ಕಾಲದ ಉಡುಗೆಯು ಅವರ ಸೌಂದರ್ಯವನ್ನು ಮತ್ತಷ್ಟು ಹೆಚ್ಚಿಸಿದೆ. ಪ್ರಬುದ್ಧ ನಟನೆಯ ಮೂಲಕ ಅವರು ಇಷ್ಟ ಆಗುತ್ತಾರೆ. ಗುಲ್ಶನ್ ದೇವಯ್ಯ ಮಾಡಿದ ಕುಲಶೇಖರ ಪಾತ್ರಕ್ಕೆ ಇನ್ನೂ ಗಟ್ಟಿತನ ಕೊಡಬಹುದಿತ್ತು ಎಂದನಿಸದೇ ಇರದು. ಜಯರಾಮ್, ಪ್ರಮೋದ್ ಶೆಟ್ಟಿ ಮೊದಲಾವರು ತಮಗೆ ಕೊಟ್ಟ ಪಾತ್ರಕ್ಕೆ ನ್ಯಾಯ ಒದಗಿಸಿದ್ದಾರೆ. ಪ್ರಕಾಶ್ ತುಮಿನಾಡ್, ದೀಪಕ್ ರೈ ಪಣಜೆ ನಗುವಿನ ಕಚಗುಳಿ ಇಡುವ ಪ್ರಯತ್ನ ಮಾಡಿದ್ದಾರೆ. ರಾಕೇಶ್ ಪೂಜಾರಿ ಪಾತ್ರವೂ ಹೈಲೈಟ್ ಆಗುತ್ತದೆ. ಅವರು ಬದುಕಿದ್ದಿದ್ದರೆ ಖುಷಿ ಪಡುತ್ತಿದ್ದರೇನೋ.

ಅದ್ಭುತ ಎನಿಸುವ ಓಪನಿಂಗ್ ದೃಶ್ಯದೊಂದಿಗೆ ಸಿನಿಮಾ ಆರಂಭ ಆಗುತ್ತದೆ. ನಂತರ ನಿಧಾನವಾಗಿ ಟೇಕ್ಆಫ್ ಆಗುತ್ತದೆ. ಇಂಟರವಲ್ ಬ್ಲಾಕ್ಗೂ ಮೊದಲು ಬರುವ ಫೈಟಿಂಗ್ ದೃಶ್ಯ ಕ್ಲೈಮ್ಯಾಕ್ಸ್ ರೀತಿಯ ಫೀಲ್ ಕೊಡುತ್ತದೆ. ಇದನ್ನೇ ಕ್ಲೈಮ್ಯಾಕ್ಸ್ ಮಾಡಬಹುದಿತ್ತಲ್ಲ ಎನಿಸಬಹುದು. ಇದರ ಫೈಟ್ ಸಂಯೋಜನೆ ಭಿನ್ನವಾಗಿದೆ. ರಿಷಬ್ ಕ್ಲೈಮ್ಯಾಕ್ಸ್ನ ಒಳ್ಳೆಯ ರೀತಿಯಲ್ಲೇ ಕಟ್ಟಿಕೊಟ್ಟಿದ್ದಾರೆ. ಥಿಯೇಟರ್ನಿಂದ ಹೊರ ಬರುವಾಗ ಒಳ್ಳೆಯ ಫೀಲ್ ಕೊಡುತ್ತದೆ. ಸಿನಿಮಾದಲ್ಲಿ ಅದ್ದೂರಿತನಕ್ಕೆ ಎಲ್ಲಿಯೂ ಕೊರತೆ ಆಗದಂತೆ ‘ಹೊಂಬಾಳೆ ಫಿಲ್ಮ್ಸ್’ ನೋಡಿಕೊಂಡಿದೆ. ರಿಷಬ್ ಅವರು ಸಿನಿಮಾನ ತಾಂತ್ರಿಕವಾಗಿ ಶ್ರೀಮಂತವಾಗಿರುವಂತೆ ನೋಡಿಕೊಂಡಿದ್ದಾರೆ.

ಸಿನಿಮಾದಲ್ಲಿ ಹೆಚ್ಚು ಇಷ್ಟ ಆಗೋದು ವಿಎಫ್ಎಕ್ಸ್. ಇಡೀ ಚಿತ್ರಕ್ಕೆ ಬೇರೆಯದೇ ತೂಕ ಬರಲು ವಿಎಫ್ಎಕ್ಸ್ ಪಾತ್ರ ದೊಡ್ಡದಿದೆ. ಹುಲಿ, ಕಾಡು ಪಾಪಗಳು ನಿಜವಾದವೇನೋ ಎಂದನಿಸುವ ರೀತಿಯಲ್ಲಿ ವಿಎಫ್ಎಕ್ಸ್ ಮೂಡಿ ಬಂದಿದೆ. ಅರವಿಂದ್ ಕಶ್ಯಪ್ ಛಾಯಾಗ್ರಹಣ ಚಿತ್ರಕ್ಕೆ ಪ್ಲಸ್ ಪಾಯಿಂಟ್ ಆಗಿದೆ. 300-400 ದಶಕಕ್ಕೆ ತಕ್ಕಂತೆ ಕಾಸ್ಟ್ಯೂಮ್ ಬಳಕೆ ಮಾಡಲಾಗಿದೆ. ಮ್ಯೂಸಿಕ್ ವಿಚಾರದಲ್ಲಿ ಅಜನೀಶ್ ಹೊಸದನ್ನೇನು ಮಾಡಿಲ್ಲ. ‘ಕಾಂತಾರ’ ಸಿನಿಮಾದ ಎರಡು ಹಾಡುಗಳನ್ನೇ ಇಲ್ಲಿಯೂ ಬಳಕೆ ಮಾಡಿಕೊಂಡಿದ್ದು, ಪ್ರೇಕ್ಷಕರಿಗೆ ನಿರಾಸೆ ಉಂಟು ಮಾಡುತ್ತದೆ.

‘ಕಾಂತಾರ’ ಸಿನಿಮಾದಲ್ಲಿ ಎಲ್ಲವೂ ಎಷ್ಟಕ್ಕೆ ಬೇಕೋ ಅಷ್ಟೇ ಇದ್ದವು. ಈ ಕಾರಣದಿಂದಲೇ ಪ್ರೇಕ್ಷಕರಿಗೆ ಅದು ಇಷ್ಟವಾಗಿತ್ತು. ಆದರೆ, ‘ಕಾಂತಾರ: ಚಾಪ್ಟರ್ 1’ ಚಿತ್ರದಲ್ಲಿ ಫೈಟ್ಗಳೇ ಹೆಚ್ಚು ಅಬ್ಬರಿಸಿದಂತೆ ಕಾಣಿಸುತ್ತದೆ. ಕಥೆಯನ್ನು ಮತ್ತಷ್ಟು ಬಿಗಿಯಾಗಿ ಹೆಣೆಯುವ ಅವಕಾಶ ರಿಷಬ್ಗೆ ಇತ್ತು. ಚಿತ್ರದಲ್ಲಿ ಬರುವ ಯುದ್ಧದ ದೃಶ್ಯ ರಾಜಮೌಳಿಯ ‘ಬಾಹುಬಲಿ’ ಸಿನಿಮಾನ ನೆನಪಿಸದೆ ಇರದು. ‘ನಮ್ಮ ಊರಿನಿಂದ ಕಾಡಿಗೆ ನಡೆದು ಹೋದರೆ ಒಂದು ದಿನ ಬೇಕು’ ಎಂದು ಆರಂಭದಲ್ಲಿ ಡೈಲಾಗ್ ಒಂದು ಬರುತ್ತದೆ. ಆದರೆ, ಕ್ಲೈಮ್ಯಾಕ್ಸ್ ವೇಳೆಗೆ ಕಥಾ ನಾಯಕ ಕ್ಷಣಮಾತ್ರದಲ್ಲಿ, ನಾಡಿನಿಂದ ಕಾಡಿಗೆ ತೆರಳುತ್ತಾನೆ. ಈ ರೀತಿ ಕೆಲವು ದೃಶ್ಯಗಳು ಲಾಜಿಕ್ ಕೇಳುತ್ತವೆ. ‘ಕಾಂತಾರ’ದ ಸಕ್ಸಸ್ ಸೂತ್ರವನ್ನೇ ‘ಕಾಂತಾರ: ಚಾಪ್ಟರ್ 1’ ಚಿತ್ರಕ್ಕೂ ಬಳಸಿದ್ದಾರೆ ರಿಷಬ್. ಬೇಡ ಬೇಡವೆಂದರೂ ‘ಕಾಂತಾರ’ ಹಾಗೂ ‘ಕಾಂತಾರ: ಚಾಪ್ಟರ್ 1’ ನಡುವಿನ ಹೋಲಿಕೆ ನಡೆಯುತ್ತಲೇ ಇರುತ್ತದೆ. ‘ಕಾಂತಾರ: ಚಾಪ್ಟರ್ 2’ ಬರುವ ಸೂಚನೆಯನ್ನೂ ಕ್ಲೈಮ್ಯಾಕ್ಸ್ನಲ್ಲಿ ನೀಡಲಾಗಿದೆ.

ನಿದ್ದೆ ಮಾಡುವಾಗ ಬೆನ್ನು ನೋವು ಬರುತ್ತಾ? ಹಾಗಿದ್ರೆ ಈ ಆಹಾರಗಳ ಸೇವನೆ ಮಾಡಬೇಡಿ

TAGGED:Kantara: Chapter 1' Review: Splendor in legend; This is a divine story
Share This Article
Facebook Twitter Copy Link Print
Previous Article Mysore dasara ಜಂಬೂ ಸವಾರಿಗೂ ಮುನ್ನ ನಂದಿ ಧ್ವಜಕ್ಕೆ ಮೊದಲ ಪೂಜೆ ಯಾಕೆ?
Next Article Rain Alert ರಾಜ್ಯದಲ್ಲಿ ಅಕ್ಟೋಬರ್ 5ರವರೆಗೆ ಭಾರೀ ಮಳೆಯ ಮುನ್ಸೂಚನೆ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?