Newsics_Kannada
Subscribe and watch video
ನ್ಯೂಸಿಕ್ಸ್ ಕನ್ನಡ
ಬನ್ನಿ ನಮ್ ಸಂಗಡ
newsics.com
ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ ಕೆಮ್ಮಿನ ಸಿರಪ್ ಸೇವಿಸಿ 11 ಮಕ್ಕಳು ಬಲಿಯಾಗಿದ್ದು, ಕೇಂದ್ರ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ.
2 ವರ್ಷದೊಳಗಿನ ಮಕ್ಕಳಿಗೆ ಶೀತ ಕೆಮ್ಮಿನ ಔಷಧ ನೀಡಬೇಡಿ. 5 ವರ್ಷದೊಳಗಿನ ಮಕ್ಕಳಿಗೆ ಕಾಫ್ ಸಿರಫ್ ನೀಡಬೇಕಾದ್ರೆ ಎಚ್ಚರಿಕೆ ಕ್ರಮ ಕೈಗೊಳ್ಳಿ ಎಂದು ಸೂಚನೆ ನೀಡಿದೆ. ಮೊದಲು ಹೈಡ್ರೇಷನ್ ಹಾಗೂ ರೆಸ್ಟ್ ಮಾಡುವುದು ಮೊದಲ ಆದ್ಯತೆ ಆಗಿರಬೇಕು ಎಂದು ಸೂಚನೆ ನೀಡಿದೆ.
ಈ ಮಕ್ಕಳ ದುರಂತ ಅಂತ್ಯ ದೇಶಾದ್ಯಂತ ಸುದ್ದಿ ಮಾಡಿದೆ. ಬೆನ್ನಲ್ಲೇ ಎಚ್ಚೆತ್ತ ಕೇಂದ್ರ ಆರೋಗ್ಯ ಇಲಾಖೆ ಮಕ್ಕಳಿಗೆ ಕೆಮ್ಮು ಔಷಧಿಯ ಕುರಿತು ಸಲಹೆ ನೀಡಿದೆ. ಆರೋಗ್ಯ ಸಚಿವಾಲಯವು ಎಲ್ಲಾ ರಾಜ್ಯಗಳಿಗೆ ಪ್ರಮುಖ ಆದೇಶವನ್ನು ಪಾಲಿಸುವಂತೆ ಸೂಚಿಸಿದೆ. ಮಕ್ಕಳಿಗೆ ಕೆಮ್ಮು ಔಷಧಿಯನ್ನು ಬಹಳ ಎಚ್ಚರಿಕೆಯಿಂದ ಮತ್ತು ಸೀಮಿತ ಪ್ರಮಾಣದಲ್ಲಿ ನೀಡಬೇಕು ಎಂದಿದೆ.
ಮುಖ್ಯಮಂತ್ರಿಗಳ ಉಚಿತ ಔಷಧ ಯೋಜನೆಯಡಿ ವಿತರಿಸಲಾದ ಕಳಪೆ ಗುಣಮಟ್ಟದ ಕೆಮ್ಮಿನ ಸಿರಪ್ಗಳ ಸೇವನೆಯಿಂದ ಇಬ್ಬರು ಮಕ್ಕಳು ಸಾವನ್ನಪ್ಪಿದರು ಮತ್ತು ಹಲವರು ಅಸ್ವಸ್ಥರಾದರು ಎಂದು ಆರೋಪಿಸಿ, ರಾಜಸ್ಥಾನ ಸರ್ಕಾರವು ಔಷಧ ನಿಯಂತ್ರಕ ರಾಜಾರಾಮ್ ಶರ್ಮಾ ಅವರನ್ನು ಅಮಾನತುಗೊಳಿಸಿದೆ ಮತ್ತು ಕೇಸನ್ ಫಾರ್ಮಾ ಪೂರೈಸಿದ ಎಲ್ಲಾ 19 ಔಷಧಿಗಳ ವಿತರಣೆಯನ್ನು ಸ್ಥಗಿತಗೊಳಿಸಿದೆ. ಆರೋಗ್ಯ ಇಲಾಖೆಯು ಗುಣಮಟ್ಟದ ನಿಯಂತ್ರಣ ವೈಫಲ್ಯಗಳು ಮತ್ತು ಉಪ್ಪಿನ ಅಂಶದ ಆಧಾರದ ಮೇಲೆ ಔಷಧ ಮಾನದಂಡಗಳನ್ನು ನಿಗದಿಪಡಿಸುವಲ್ಲಿ ಶರ್ಮಾ ಅವರ ಹಸ್ತಕ್ಷೇಪವನ್ನು ಉಲ್ಲೇಖಿಸಿದೆ.
ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ ಈ ವಿಷಯದ ಬಗ್ಗೆ ವಿವರವಾದ ತನಿಖೆಗೆ ಆದೇಶಿಸಿದರು.