Newsics_Kannada
Subscribe and watch video
ನ್ಯೂಸಿಕ್ಸ್ ಕನ್ನಡ
ಬನ್ನಿ ನಮ್ ಸಂಗಡ
newsics.com
ಭಾರತದ ಅತಿದೊಡ್ಡ ಉದ್ಯಮ ಸಂಸ್ಥೆ ಟಾಟಾ ಗ್ರೂಪ್ನೊಳಗೆ ಆಂತರಿಕ ಭಿನ್ನಮತದ ಬೆಂಕಿ ಹೊತ್ತಿಕೊಂಡಿದೆ. ರತನ್ ಟಾಟಾ ನಿಧನದ ಬಳಿಕ ಟಾಟಾ ಗ್ರೂಪ್ನಲ್ಲಿ ಎಲ್ಲವೂ ಸರಿಯಿಲ್ಲ. ಈ ಆಂತರಿಕ ಕಚ್ಚಾಟ, ದೇಶದ ಆರ್ಥಿಕತೆಯ ಮೇಲೆ ಪರಿಣಾಮ ಬೀರುವ ಆತಂಕವನ್ನು ಸೃಷ್ಟಿಸಿದೆ. ಈ ಪ್ರಕ್ಷುಬ್ಧತೆ ಪರಿಸ್ಥಿತಿ ತೀವ್ರವಾಗಿದೆಯೆಂದರೆ, ದೇಶದ ಇಬ್ಬರು ಅತ್ಯಂತ ಶಕ್ತಿಶಾಲಿ ವ್ಯಕ್ತಿಗಳಾದ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪ್ರತಿಸ್ಪರ್ಧಿ ಬಣಗಳ ನಡುವೆ ಮಧ್ಯಸ್ಥಿಕೆ ವಹಿಸಲು ಮುಂದಾಗಿದ್ದಾರೆ.
ಈ ವೇಳೆ ಟಾಟಾ ಗ್ರೂಪ್ನ ಲೀಡರ್ಗಳಿಗೆ ಮೋದಿ ಸರ್ಕಾರ ಬಿಗ್ ಎಚ್ಚರಿಕೆಯನ್ನು ನೀಡಿದೆ. ಸಮಸ್ಯೆ ಸೃಷ್ಟಿಸುವವರನ್ನು ಕಂಪನಿಯಿಂದ ಕಿತ್ತು ಬಿಸಾಡಿ ಎಂಬ ಫ್ರೀಡಂ ಅನ್ನು ಕೂಡ ಕೇಂದ್ರ ಸರ್ಕಾರ ಟಾಟಾ ಗ್ರೂಪ್ಗೆ ನೀಡಿದೆ.
ಸೆ.11ರಂದು 77 ವರ್ಷದ ಮಾಜಿ ರಕ್ಷಣಾ ಕಾರ್ಯದರ್ಶಿ ವಿಜಯ್ ಸಿಂಗ್ ಅವರನ್ನು ಟಾಟಾ ಸನ್ಸ್ನ ನಿರ್ದೇಶಕ ಮಂಡಳಿಗೆ ಮರುನೇಮಕ ಮಾಡುವ ವಿಚಾರದಲ್ಲಿ ನೊಯೆಲ್ ಟಾಟಾ ಮತ್ತು ಮಿಸ್ತ್ರಿಬಣದ ನಡುವೆ ತಿಕ್ಕಾಟ ಶುರುವಾಗಿದೆ. ಟ್ರಸ್ಟ್ ಮುಖ್ಯಸ್ಥ ನೊಯೆಲ್ ಟಾಟಾ ಹಾಗೂ ವೇಣು ಶ್ರೀನಿವಾಸನ್ ಅವರು ವಿಜಯ್ ಸಿಂಗ್ರನ್ನು ಮರುನೇಮಿಸುವ ಪ್ರಸ್ತಾಪ ಇಟ್ಟಿದ್ದು, ಮೆಹಲಿ ಮಿಸ್ತ್ರಿ ಸೇರಿ ಉಳಿದ ಮೂವರು ವಿರೋಧ ವ್ಯಕ್ತಪಡಿಸಿದರು. ಇದರಿಂದ ಬೇಸತ್ತ ವಿಜಯ್ ಸಿಂಗ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.ಟಾಟಾ ಟ್ರಸ್ಟ್ನ ಆಂತರಿಕ ಕಲಹದಲ್ಲಿ ಇದೀಗ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿದೆ. ಆದಷ್ಟು ಶೀಘ್ರ ಈ ಭಿನ್ನಮತ ಬಗೆಹರಿಸುವಂತೆ ಸ್ಪಷ್ಟ ಸಂದೇಶ ರವಾನಿಸಿದೆ.
ಮಂಗಳವಾರ ಟಾಟಾ ಟ್ರಸ್ಟ್ನ ಮುಖ್ಯಸ್ಥ ನೊಯೆಲ್ ಟಾಟಾ ಮತ್ತು ಟಾಟಾ ಸನ್ಸ್ನ ಎನ್. ಚಂದ್ರಶೇಖರನ್, ಟಾಟಾ ಟ್ರಸ್ಟ್ನ ಉಪ ಮುಖ್ಯಸ್ಥ ವೇಣು ಶ್ರೀನಿವಾಸನ್, ಟ್ರಸ್ಟಿಗಳಾದ ಡೇರಿಯಸ್ ಖಂಬಾಟಾ ಅವರನ್ನು ಕರೆಸಿಕೊಂಡು ಕೇಂದ್ರ ಗೃಹ ಸಚಿವ ಅಮಿತ್ ಶಾ ಕೆಲಕಾಲ ಮಾತುಕತೆ ನಡೆಸಿದರು. ಈ ಸಭೆಯಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಕೂಡ ಪಾಲ್ಗೊಂಡಿದ್ದರು.
ಟಾಟಾ ಕಂಪನಿಯು ದೇಶದ ಅತಿದೊಡ್ಡ ಕಾರ್ಪೊರೇಟ್ ಕಂಪನಿಯಾಗಿದ್ದು, ಐಟಿಯಿಂದ ಹಿಡಿದು ಅಡುಗೆ ಉಪ್ಪಿನ ವರೆಗೆ ಅನೇಕ ಉದ್ಯಮಗಳಲ್ಲಿ ತೊಡಗಿಸಿಕೊಂಡಿದೆ. ಟಾಟಾ ಗ್ರೂಪ್ ದೇಶದಲ್ಲಿ 38 ಲಕ್ಷ ಕೋಟಿ ರು. ಮೌಲ್ಯದ 400 ಕಂಪನಿಗಳನ್ನು ಮುನ್ನಡೆಸುತ್ತಿದೆ. ಈ ಗ್ರೂಪ್ನಲ್ಲಿನ ಅಸ್ಥಿರತೆ ದೇಶದ ಆರ್ಥಿಕತೆ ಮೇಲೂ ಪರಿಣಾಮ ಬೀರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇದೀಗ ಮಧ್ಯಪ್ರವೇಶಿಸಿದೆ.