Subscribe Newsics Kannada/YouTube
newsics.com
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಗೆ ಮತ್ತೊಂದು ಬಲಿಯಾಗಿದೆ.
ಬಿಎಂಟಿಸಿ ಬಸ್ ಹರಿದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶನಿವಾರ ರಾಜಾಜಿನಗರದ 1ನೇ ಬ್ಲಾಕ್ನಲ್ಲಿ ನಡೆದಿದೆ.
ಮೃತ ಬಾಲಕಿಯನ್ನು ಭುವನಾ ಎಂದು ಗುರುತಿಸಲಾಗಿದೆ. ರಾಜಾಜಿನಗರದ 1ನೇ ಬ್ಲಾಕ್ನ ಸಿಗ್ನಲ್ನಲ್ಲಿ ಆಕೆ ನಿಂತಿದ್ದಾಗ ಬಿಎಂಟಿಸಿ ಬಸ್ ಬಂದು ಗುದ್ದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಬಾಲಕಿ ರಾಜಾಜಿನಗರದ ಪಾಂಚಜನ್ಯ ವಿದ್ಯಾಪೀಠ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಳು ಎನ್ನಲಾಗಿದೆ.
ಈಕೆ ಬಡ ಕುಟುಂಬದ ಹಿನ್ನೆಲೆಯವಳಾಗಿದ್ದು ಪೋಷಕರು ಜೋಳ ಮಾರಿಕೊಂಡು ಮಗಳನ್ನು ಓದಿಸುತ್ತಿದ್ದರು. ಇವರು ಮಹಾಲಕ್ಷ್ಮೀ ಲೇಔಟ್ನ ಬೋವಿ ಪಾಳ್ಯದಲ್ಲಿ ವಾಸಿಸುತ್ತಿದ್ದರು.
ನಾಲ್ಕು ದಿನಗಳ ಹಿಂದಷ್ಟೇ ಕಮಲಾನಗರದಲ್ಲಿ ಬಿಎಂಟಿಸಿ ಬಸ್ನ ಬ್ರೇಕ್ ಫೇಲ್ಯೂರ್ ಆಗಿ ನಂದಿನಿ ಪಾರ್ಲರ್ಗೆ ನುಗ್ಗಿದ ಘಟನೆ ನಡೆದಿತ್ತು. ಬಸ್ನಲ್ಲಿ ಇಪ್ಪತ್ತು ಪ್ರಯಾಣಿಕರಿದ್ದರು. ಯಾರಿಗೂ ಯಾವುದೇ ಪ್ರಾಣಹಾನಿಯಾಗಿರಲಿಲ್ಲ. ನಂದಿನಿ ಪಾರ್ಲರ್ನ ಗೋಡೆ ಮತ್ತು ಒಳಗಡೆಯಿದ್ದ ಕೆಲವು ಉಪಕರಣಗಳಿಗೆ ಹಾನಿಯಾಗಿತ್ತು.
Another boat capsizes near Ankola ಅಂಕೋಲಾ ಬಳಿ ಮತ್ತೊಂದು ಬೋಟ್ ಮುಳುಗಡೆ, ಭಾರೀ ನಷ್ಟ
ಮಹಿಳೆಯ ಶವವನ್ನೂ ಬಿಡದ ವಿಕೃತಕಾಮಿ! ಮಹಿಳೆಯ ಮೃತದೇಹದ ಮೇಲೆ ಲೈಂಗಿಕ ದೌರ್ಜನ್ಯ