newsics.com
ಬೆಂಗಳೂರು: ಬಿಜೆಪಿ ಶಾಸಕರು ಗುರುವಾರ ರಾಜಭವನದವರೆಗೂ ಮೆರವಣಿಗೆ ನಡೆಸಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಿವೇಶನ ಹಗರಣ ಕುರಿತಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ದೂರು ನೀಡಿದರು.
ಉಭಯ ಸದನಗಳಲ್ಲಿ ಈ ವಿಷಯ ಪ್ರಸ್ತಾಪಿಸಲು ಆಡಳಿತಾರೂಢ ಕಾಂಗ್ರೆಸ್ ಅವಕಾಶ ನೀಡಲಿಲ್ಲ ಎಂದು ಅವರು ದೂರಿದ್ದಾರೆ.
ವಿಧಾನಮಂಡಲದ ಅಧಿವೇಶನವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದ ನಂತರ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಶಾಸಕರು ಭಿತ್ತಿಪತ್ರಗಳು ಮತ್ತು ಘೋಷಣೆಗಳೊಂದಿಗೆ ರಾಜಭವನಕ್ಕೆ ಮೆರವಣಿಗೆ ನಡೆಸಿದ ಪಕ್ಷದ ನಾಯಕರು, ರಾಜ್ಯಪಾಲರನ್ನು ಭೇಟಿ ಮಾಡಿ ಹಗರಣದ ವಿವರಗಳನ್ನು ನೀಡುವ ಮನವಿ ಪತ್ರ ಸಲ್ಲಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್, ಮುಖ್ಯಮಂತ್ರಿ ಸಿದ್ದರಾಮಯ್ಯ ನೇರವಾಗಿ ಭಾಗಿಯಾಗಿರುವ ಮುಡಾ ಹಗರಣದ ಬಗ್ಗೆ ಮಾತನಾಡಲು ಆಡಳಿತಾರೂಢ ಕಾಂಗ್ರೆಸ್ ಅವಕಾಶ ನೀಡಲಿಲ್ಲ ಎಂದು ಆರೋಪಿಸಿದರು.
ಈ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿರುವುದು ಈಗ ಜಗತ್ತಿಗೆ ಗೊತ್ತಾಗಿದೆ. ಕರ್ನಾಟಕದ ಇತಿಹಾಸದಲ್ಲಿ ಆಡಳಿತ ಪಕ್ಷಕ್ಕೆ ಇಂತಹ ಅವಮಾನ ಎದುರಾಗಿರಲಿಲ್ಲ. ಹಗರಣಗಳ ನಂತರ ಹಗರಣಗಳು ಮುನ್ನೆಲೆಗೆ ಬಂದಿವೆ ಎಂದು ಟೀಕಿಸಿದರು.
https://x.com/BYVijayendra/status/1816456220355817603?t=5Ky9A5VDr6u-jZ25qfQjPw&s=19
ವೇಶ್ಯಾವಾಟಿಕೆಗೆ ರಕ್ಷಣೆ ನೀಡುವಂತೆ ಕೋರ್ಟ್ಗೆ ವಕೀಲನಿಂದ ಅರ್ಜಿ! ಕೆರಳಿದ ಹೈಕೋರ್ಟ್
ಡೆಂಗ್ಯೂ ಹಾಟ್ ಸ್ಪಾಟ್ ಆದ ಬೆಂಗಳೂರು : ಅಧಿಕಾರಿಗಳಿಗೆ ಆರೋಗ್ಯ ಸಚಿವರ ಖಡಕ್ ವಾರ್ನಿಂಗ್
Paris Olympics: ಬಿಲ್ಲುಗಾರಿಕೆಯಲ್ಲಿ ಕ್ವಾರ್ಟರ್ ಫೈನಲ್ ತಲುಪಿದ ಭಾರತ ವನಿತೆಯರು