Newsics_Kannada
Subscribe and watch video
ನ್ಯೂಸಿಕ್ಸ್ ಕನ್ನಡ
ಬನ್ನಿ ನಮ್ ಸಂಗಡ
newsics.com
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲಿನಲ್ಲಿದ್ದಾರೆ.ಇದೀಗ ಆರೋಪಿ ದರ್ಶನ್ಗೆ ಮತ್ತೆ ಬೆನ್ನು ನೋವು ಕಾಣಿಸಿಕೊಂಡಿದೆ. ಸೆಂಟ್ರಲ್ ಜೈಲ್ಗೆ ಹೋದ ಎರಡು ತಿಂಗಳಲ್ಲಿ ಮೊದಲ ಬಾರಿಗೆ ಜೈಲಾಧಿಕಾರಿಗೆ ದರ್ಶನ್ ದೂರು ನೀಡಿದ್ದಾರೆ.
ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿರುವ ವೈದ್ಯರು ದರ್ಶನ್ ಬೆನ್ನು ನೋವಿಗೆ ಚಿಕಿತ್ಸೆ ನೀಡಿದ್ದು, ಜೈಲಾಧಿಕಾರಿ ಪ್ರತಿ ನಿತ್ಯ ದರ್ಶನ್ ಹೆಲ್ತ್ ರಿಪೋರ್ಟ್ ಪಡೆಯುತ್ತಿದ್ದಾರೆ. ಇದೇ ಮೊದಲ ಬಾರಿಗೆ ಬೆನ್ನು ನೋವಿನ ಸಮಸ್ಯೆ ಬಗ್ಗೆ ಜೈಲಾಧಿಕಾರಿಗಳ ಬಳಿ ದರ್ಶನ್ ಹೇಳಿಕೊಂಡಿದ್ದು, ಪ್ರತಿನಿತ್ಯ ಜೈಲಿನ ವೈದ್ಯರಿಂದಲೇ ತಪಾಸಣೆ ಚಿಕಿತ್ಸೆ ಕಾರ್ಯ ನಡೀತಿದೆ.
ಫಂಗಸ್ ಹಾಗೂ ವ್ಯವಸ್ಥೆ ಸರಿಯಿಲ್ಲ ಎಂದು ದರ್ಶನ್ ಕೋರ್ಟ್ಗೆ ಹೇಳಿದ್ದರು. ಇದೀಗ ಮೊದಲ ಬಾರಿಗೆ ಬೆನ್ನು ನೋವಿನ ಸಮಸ್ಯೆ ಬಗ್ಗೆ ಹೇಳಿಕೊಂಡಿದ್ದಾರೆ. ಬಳ್ಳಾರಿ ಜೈಲಿನ ದಿನಗಳಲ್ಲಿ ದರ್ಶನ್ ತೀವ್ರ ಬೆನ್ನು ನೋವಿನ ಸಮಸ್ಯೆಗೆ ಒಳಗಾಗಿದ್ದರು. ನಂತರ ಕೋರ್ಟ್ ಮೊರೆ ಹೋಗಿ ಚಿಕಿತ್ಸೆಗಾಗಿ ಜಾಮೀನು ಪಡೆದು ಬೆಂಗಳೂರಿಗೆ ಬಂದಿದ್ದರು. ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆದ ಬಳಿಕ ಬೆನ್ನು ನೋವು ಸ್ವಲ್ಪ ಸುಧಾರಿಸಿತ್ತು. ಇದೀಗ ಮತ್ತೆ ಬೆನ್ನುನೋವು ಉಲ್ಬಣಗೊಂಡಿದೆ.