Subscribe NewsicsKannada/YouTube
newsics.com
ಬೆಂಗಳೂರು: ಆರೆಸ್ಸೆಸ್ ಶಾಖೆಗಳ ಮೇಲೆ ನಿರ್ಬಂಧ ವಿಧಿಸುವಂತೆ ಸಚಿವ ಪ್ರಿಯಾಂಕ್ ಖರ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದಿರುವ ಪತ್ರ ರಾಜ್ಯಾದ್ಯಂತ ಸುದ್ದಿಯಾಗುತ್ತಿದೆ.
ಈ ಬೆನ್ನಲ್ಲೇ ಖರ್ಗೆ ತವರು ಜಿಲ್ಲೆ ಕಲಬುರಗಿಯಲ್ಲಿ ಅದರಲ್ಲೂ ಕಾಂಗ್ರೆಸ್ ಶಾಸಕರ ಶಾಲೆಯಲ್ಲೇ ಆರೆಸ್ಸೆಸ್ ಶಾಖೆ ನಡೆಸಿರುವ ಸುದ್ದಿ ಎಲ್ಲೆಡೆ ವೈರಲ್ ಆಗತೊಡಗಿದೆ.
ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಕರ್ನಾಟಕದಲ್ಲಿ ಆರೆಸ್ಸೆಸ್ ಚಟುವಟಿಕೆ ನಿಷೇಧಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದಿದ್ದರು.
ಈ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದ ಶಾಸಕ ಎಂವೈ ಪಾಟೀಲ್ ಒಡೆತನದ ಮಹಾಂತೇಶ್ವರ ವಿದ್ಯಾವರ್ಧಕ ಶಿಕ್ಷಣ ಸಂಸ್ಥೆಯ ಅನುದಾನಿತ ಶಾಲೆಯಲ್ಲಿ ಆರೆಸ್ಸೆಸ್ ಬೈಠಕ್ ನಡೆದಿದೆ. ಅಷ್ಟೇ ಅಲ್ಲ, ಶಾಲೆಯ ಆವರಣದಲ್ಲಿ ಆರೆಸ್ಸೆಸ್ ಪಥಸಂಚಲನ, ಬೌದ್ಧಿಕ ಕಾರ್ಯಕ್ರಮ ಕೂಡ ನಡೆದಿದೆ.
ಅರೆಸ್ಸೆಸ್ ಚಟುವಟಿಕೆ ನಿಷೇಧ ಕುರಿತು ಸಿಎಂಗೆ ಪ್ರಿಯಾಂಕ್ ಖರ್ಗೆ ಪತ್ರ ಬರೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಲಬುರಗಿ ಕಾಂಗ್ರೆಸ್ ಶಾಸಕ ಎಂ.ವೈ.ಪಾಟೀಲ್, ಆರೆಸ್ಸೆಸ್ ನಲ್ಲೂ ಸ್ವಾತಂತ್ರ್ಯಕ್ಕೆ ಬಲಿಯಾದವರು ಒಬ್ಬರೋ ಇಬ್ಬರೋ ಇರಬಹುದು. ಅರೆಸ್ಸೆಸ್ ಲಾಠಿ ಬಿಟ್ಟು ತಿರಂಗಾ ಬಾವುಟ ಹಿಡಿಯಲಿ. ಅವರು ತಿರಂಗಾ ಹಿಡಿದರೆ ಸ್ವಾಗತವಿದೆ. ಲಾಠಿ ಹಿಡಿದು ಪಥಸಂಚಲನ ಮಾಡಿದರೆ ಖಂಡಿಸುತ್ತೇವೆ ಎಂದಿದ್ದಾರೆ.
ಮಹಾಂತೇಶ್ವರ ವಿದ್ಯಾವರ್ಧಕ ಶಿಕ್ಷಣ ಸಂಸ್ಥೆಯ ಅನುದಾನಿತ ಶಾಲೆ ಆವರಣದಲ್ಲಿ ಆರೆಸ್ಸೆಸ್ ಪಥಸಂಚಲನ ನಡೆಸಿದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಶಾಸಕರು, ನಮ್ಮ ಶಾಲೆ ಸಾರ್ವಜನಿಕರ ಸ್ವತ್ತು. ಎಲ್ಲಾ ಪಕ್ಷದವರಿಗೆ ಕಾರ್ಯಕ್ರಮ ಮಾಡಿಕೊಡಲು ಜಾಗ ಕೊಟ್ಟಿದ್ದೇವೆ. ನಮ್ಮದು ದ್ರಾವಿಡ, ಬುಡಕಟ್ಟು ಮನಸ್ಥಿತಿ. ಆದರೆ, RSS ನದ್ದು ಆರ್ಯ ಸಮಾಜ ಪರಿಕಲ್ಪನೆಯಾಗಿದೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮೂಲ ಉದ್ದೇಶವೇ ಬೇರೆ ಇದೆ ಎಂದು ಹೇಳಿದ್ದಾರೆ.
ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ ನೂರು ವರ್ಷ ತುಂಬಿದ ಹಿನ್ನೆಲೆಯಲ್ಲಿ ರಾಜ್ಯದೆಲ್ಲೆಡೆ ಸಂಘದ ಪಥಸಂಚಲನ ನಡೆಯುತ್ತಿದೆ. ಇದೇ ಸಂದರ್ಭದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಸಿಎಂ ಸಿದ್ದರಾಮಯ್ಯನವರಿಗೆ ಪತ್ರ ಬರೆದು ಸಂಘದ ಚಟುವಟಿಕೆಗಳ ನಿಷೇಧಕ್ಕೆ ಮನವಿ ಮಾಡಿದ್ದಾರೆ. ಈಗ ಕಾಂಗ್ರೆಸ್ ಶಾಸಕರೊಬ್ಬರ ಒಡೆತನದ ಶಾಲೆಯಲ್ಲೇ ಆರೆಸ್ಸೆಸ್ ಕಾರ್ಯಕ್ರಮ ನಡೆದಿರುವುದನ್ನು ಉಲ್ಲೇಖಿಸಿ ಪ್ರಿಯಾಂಕ್ ಖರ್ಗೆ ಪತ್ರದ ಬಗ್ಗೆ ಹಲವರು ವ್ಯಂಗ್ಯ ಮಾಡುತ್ತಿದ್ದಾರೆ.
ಆರ್.ಎಸ್.ಎಸ್ ಬ್ಯಾನ್ ಮಾಡಬೇಕು ಅಂತಾ ನಾನು ಹೇಳಿಲ್ಲ – ಪ್ರಿಯಾಂಕ್ ಖರ್ಗೆ ಸ್ಪಷ್ಟನೆ
RSS ಕ್ಯಾಂಪ್’ನಲ್ಲಿ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದೆ : ಡೆತ್’ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಟೆಕ್ಕಿ