Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Dinesh ammannaya ಹಿರಿಯ ಯಕ್ಷಗಾನ ಭಾಗವತ, ರಸರಾಗ ಚಕ್ರವರ್ತಿ ದಿನೇಶ್ ಅಮ್ಮಣ್ಣಾಯ ಇನ್ನಿಲ್ಲ, ವೀಡಿಯೊ ನೋಡಿ
ಕರ್ನಾಟಕಪ್ರಮುಖಮನರಂಜನೆ

Dinesh ammannaya ಹಿರಿಯ ಯಕ್ಷಗಾನ ಭಾಗವತ, ರಸರಾಗ ಚಕ್ರವರ್ತಿ ದಿನೇಶ್ ಅಮ್ಮಣ್ಣಾಯ ಇನ್ನಿಲ್ಲ, ವೀಡಿಯೊ ನೋಡಿ

Share
1 Min Read
SHARE

Subscribe NewsicsKannada/YouTube

newsics.com

ಮಂಗಳೂರು: ತೆಂಕುತಿಟ್ಟು ಪರಂಪರೆಯ ಖ್ಯಾತ ಯಕ್ಷಗಾನ ಭಾಗವತ, ‘ರಸರಾಗ ಚಕ್ರವರ್ತಿ’ ದಿನೇಶ್ ಅಮ್ಮಣ್ಣಾಯ ಅವರು ಗುರುವಾರ ನಿಧನರಾದರು.

ಬೆಳ್ತಂಗಡಿಯ ಕನ್ಯಾಡಿಯಲ್ಲಿ ವಾಸವಿದ್ದ ಅವರಿಗೆ 68 ವರ್ಷ ವಯಸ್ಸಾಗಿತ್ತು. ತಮ್ಮ ಕಂಚಿನ ಕಂಠ ಹಾಗೂ ವಿಶಿಷ್ಟ ರಾಗ ಸಂಯೋಜನೆಯ ಮೂಲಕ ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಕಲಾ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು.

ಪೌರಾಣಿಕ ಮತ್ತು ತುಳು ಪ್ರಸಂಗಗಳೆರಡರಲ್ಲೂ ತಮ್ಮ ಛಾಪು ಮೂಡಿಸಿದ್ದ ಅಮ್ಮಣ್ಣಾಯ ಅವರು, ಯಕ್ಷಗಾನ ಕ್ಷೇತ್ರದಲ್ಲಿ ಚಿರಪರಿಚಿತ ಹೆಸರು.

ಯಕ್ಷಗಾನ ಕ್ಷೇತ್ರದ ಹಿರಿಯ ಕಲಾವಿದ, ತೆಂಕುತಿಟ್ಟು ಪರಂಪರೆಯಲ್ಲಿ ತುಳು ಯಕ್ಷಗಾನವನ್ನು ಉತ್ತುಂಗಕ್ಕೇರಿಸಿದ್ದ ದಾಮೋದರ ಮಂಡೆಚ್ಚರ ಗರಡಿಯಲ್ಲಿ ದಿನೇಶ್ ಅಮ್ಮಣ್ಣಾಯ ಅವರು ಪಳಗಿ ಪ್ರಸಿದ್ಧರಾಗಿದ್ದರು.

ತಮ್ಮ ವೃತ್ತಿಜೀವನವನ್ನು ಪುತ್ತೂರು ಮೇಳದಲ್ಲಿ ಚಂಡೆ ಮತ್ತು ಮದ್ದಳೆ ವಾದಕರಾಗಿ ಆರಂಭಿಸಿ, ಹಿಮ್ಮೇಳ ವಾದನದ ಅನುಭವದೊಂದಿಗೆ ಭಾಗವತಿಕೆಯತ್ತ ಹೊರಳಿದ್ದರು.

ಭಾಗವತಿಕೆಯಲ್ಲಿ ತಮ್ಮದೇ ವಿಶಿಷ್ಟ ಶೈಲಿ ರೂಪಿಸಿಕೊಂಡು ಯಶಸ್ವಿಯಾಗಿ ಅಗ್ರ ಸ್ಥಾನಕ್ಕೇರಿದ್ದರು.

ಅಮ್ಮಣ್ಣಾಯ ಅವರು ಕೇವಲ ಪೌರಾಣಿಕ ಪ್ರಸಂಗಗಳಿಗಷ್ಟೇ ಸೀಮಿತರಾಗದೆ, ಅನೇಕ ತುಳು ಪ್ರಸಂಗಗಳಿಗೂ ಧ್ವನಿಯಾಗಿದ್ದರು. ‘ಕಾಡಮಲ್ಲಿಗೆ’, ‘ಕಚ್ಚೂರ ಮಾಲ್ದಿ’, ‘ಪಟ್ಟದ ಪದ್ಮಲೆ’ ಹಾಗೂ ‘ಮಾನಿಷಾದ’ದಂತಹ ಪ್ರಸಂಗಗಳನ್ನು ತಮ್ಮ ಗಾಯನದಿಂದ ಜನಪ್ರಿಯಗೊಳಿಸಿದ್ದರು. ‘ಸತ್ಯಹರಿಶ್ಚಂದ್ರ’ ಪ್ರಸಂಗದ ಹಾಡುಗಳಿಗೆ ಸಾಕಷ್ಟು ಅಭಿಮಾನಿಗಳೇ ಸೃಷ್ಟಿಯಾಗಿದ್ದಾರೆ.

ಅಮ್ಮಣ್ಣಾಯ ಅವರ ಅನುಪಮ ಕಲಾ ಸೇವೆಗೆ ಉಡುಪಿ ತುಳುಕೂಟವು ಪ್ರತಿಷ್ಠಿತ ‘ಸಾಮಗ ಪ್ರಶಸ್ತಿ’ ನೀಡಿ ಗೌರವಿಸಿತ್ತು. ಮಲ್ಪೆ ರಾಮದಾಸ ಸಾಮಗ, ಅಳಕೆ ರಾಮಯ್ಯ ರೈ, ಕೋಳ್ಯೂರು ರಾಮಚಂದ್ರ ರಾವ್ ಅವರಂತಹ ಮೇರು ಕಲಾವಿದರ ಒಡನಾಟದಲ್ಲಿ ತಮ್ಮ ಕಲಾ ಅನುಭವವನ್ನು ಶ್ರೀಮಂತಗೊಳಿಸಿಕೊಂಡ ಅಮ್ಮಣ್ಣಾಯರು, ಇತ್ತೀಚೆಗೆ ಎಡನೀರು ಮೇಳದಲ್ಲಿ ತಿರುಗಾಟ ಪೂರ್ಣಗೊಳಿಸಿ ವಿಶ್ರಾಂತ ಜೀವನ ನಡೆಸುತ್ತಿದ್ದರು. ಹವ್ಯಾಸಿ ಭಾಗವತರಾಗಿ ತಮ್ಮ ಕಲಾ ಸೇವೆ ಮುಂದುವರಿಸಿದ್ದರು.

https://youtu.be/DQ8W3VN_f-w?si=LpGcbIJ-sWwqBVeO

ಇನ್ಮುಂದೆ ಸರ್ಕಾರಿ ಸ್ಥಳಗಳಲ್ಲಿ RSS ಕಾರ್ಯಕ್ರಮ ನಡೆಸಿದ್ರೆ 1 ಲಕ್ಷ ದಂಡ, 3 ವರ್ಷ ಜೈಲು ಶಿಕ್ಷೆ – ಸರ್ಕಾರದಿಂದ ಹೊಸ ಮಸೂದೆ ಮಂಡನೆ.!

ಭದ್ರಾ ನಾಲೆಗೆ ಹಾರಿ ಜೀವ ಕಳೆದುಕೊಂಡ ದಂಪತಿ

ಬೈಕ್ ಸವಾರನಿಗೆ ಕಪಾಳಮೋಕ್ಷ ಮಾಡಿದ ಟ್ರಾಫಿಕ್ ಪೊಲೀಸ್ -ವೈರಲ್ ವಿಡಿಯೋ ನೋಡಿ

TAGGED:Rasaraga Chakravarthy Dinesh Ammannaya is no moreVeteran Yakshagana Bhagavata
Share This Article
Facebook Twitter Copy Link Print
Previous Article Home Loan EMI: ಗೃಹಸಾಲದ ಇಎಂಐ ಕಟ್ಲಿಲ್ಲ ಅಂದ್ರೆ ಬ್ಯಾಂಕ್‌ನವರು ಮನೆಗೆ ಬೀಗ ಹಾಕಿಬಿಡುತ್ತಾರಾ?
Next Article ನೀರಿನ ಸಂಪ್‌ನಲ್ಲಿ ನವವಿವಾಹಿತೆ ಶವ ಪತ್ತೆ, ಪತಿ ಸೇರಿ ನಾಲ್ವರ ಸೆರೆ

Popular Posts

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

ಪ್ರಿಯ ಮಿತ್ರ ನರೇಂದ್ರ, ಜೈ ಹಿಂದ್; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್

1 Min Read

You Might Also Like

ಪ್ರಮುಖ

ಬಿಜೆಪಿ ನಾಯಕನ ಜೀವಂತ ಸುಟ್ಟ ದುರ್ಷ್ಕರ್ಮಿಗಳು, ಕಾರು ಟ್ರಾಪ್ ಮಾಡಿ ಕೃತ್ಯ

2 Min Read
ಪ್ರಮುಖಮನರಂಜನೆ

ಗುಟ್ಕಾ ಜಗಿಯುತ್ತಲೇ ಯೋಗ ಮಾಡಿದ್ರಾ ನಟ ಕಿಶನ್? ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖಕರ್ನಾಟಕ

9 ವರ್ಷಗಳ ಕಾನೂನು ಹೋರಾಟಕ್ಕೆ ತೆರೆ; ಚೈತ್ರಾ ಕುಂದಾಪುರ ಭಾವುಕ ಪೋಸ್ಟ್

1 Min Read
ಪ್ರಮುಖಮನರಂಜನೆ

Nivedita Gowda: ಗರಿ ಬಿಚ್ಚಿ ಕುಣಿದ ನಿವೇದಿತಾ ಗೌಡ- ಕಿಶನ್! ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?