Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಗುರುವಾರ ಭೀಕರ ಅಪಘಾತ ಸಂಭವಿಸಿದ್ದು, ಬೈಕ್, ಶಾಲಾ ವಾಹನ ಡಿಕ್ಕಿಯಾದ ಪರಿಣಾಮ ಮೂವರು ಮಕ್ಕಳು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ.
ಚಿಕ್ಕಬಳ್ಳಾಪುದ ಚಿಂತಾಮಣಿ ತಾಲ್ಲೂಕಿನ ಬುರುಡುಗುಂಟೆ ಬಳಿಯಲ್ಲಿ ಈ ಘಟನೆ ನಡೆದಿದೆ. ಶಾಲಾ ವಾಹನ ಬೈಕಿಗೆ ಡಿಕ್ಕಿಯಾದ ಪರಿಣಾಮ ಒಂದೇ ಬೈಕಿನಲ್ಲಿ ತೆರಳುತ್ತಿದ್ದ ಮೂವರು ಮಕ್ಕಳು ಸೇರಿದಂತೆ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಅನಪ್ಪಲ್ಲಿ ಎಂಬ ಕಡೆಯಿಂದ ವಿಕ್ರಂ ಶಾಲಾ ವಾಹನ ಬರುತ್ತಿತ್ತು. ಇತ್ತ, ಬೈಕ್ ಸವಾರರು ಬುರಡಗುಂಟೆಯಿಂದ ಕೋರ್ಲಪರ್ತಿ ರಸ್ತೆಯಲ್ಲಿ ತಲಕಾಯಲಬೆಟ್ಟದ ಕಡೆ ಮದುವೆಗೆಂದು ಹೊರಟಿದ್ದರು. ಆ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ. ಅಪಘಾತದಲ್ಲಿ ಮೃತಪಟ್ಟವರನ್ನು ಬಾಲಾಜಿ(32), ಆರ್ಯ(4), ಹರೀಶ್(11), ವೆಂಕಟೇಶಪ್ಪ(45) ಮೃತಪಟ್ಟಿದ್ದು, ಒಂದು ಹೆಣ್ಣು ಮಗು ಪ್ರಾಣಾಪಾಯದಿಂದ ಪಾರಾಗಿದೆ ಎಂದು ತಿಳಿದುಬಂದಿದೆ.
ಕೆಂಚಾರ್ಲಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಇಲ್ಲಿ ನಾನು ಸಿಂಗಲ್, ನನ್ನ ಎಕ್ಸ್ ಕಳಿಸಿಕೊಡಿ, ಬಿಗ್ ಬಾಸ್ ಮನೆಯಲ್ಲಿ ಗೋಗರೆದ ಮಹಿಳಾ ಸ್ಪರ್ಧಿ!