Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರು, ಬಳ್ಳಾರಿಯಲ್ಲಿ ಕೇರಳ SIT ತನಿಖೆ; ರೊದ್ದಂ ಜ್ಯುವೆಲ್ಲರಿಯಿಂದ ಕದ್ದ ಚಿನ್ನ ವಶ!
ಕರ್ನಾಟಕದೇಶಪ್ರಮುಖ

ಬೆಂಗಳೂರು, ಬಳ್ಳಾರಿಯಲ್ಲಿ ಕೇರಳ SIT ತನಿಖೆ; ರೊದ್ದಂ ಜ್ಯುವೆಲ್ಲರಿಯಿಂದ ಕದ್ದ ಚಿನ್ನ ವಶ!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಶಬರಿಮಲೆ ಅಯ್ಯಪ್ಪ ದೇವಸ್ಥಾನದ ಚಿನ್ನ ಕಳವು ಪ್ರಕರಣದ ತನಿಖೆ ಚುರುಕುಗೊಳಿಸಿರುವ ಕೇರಳ ಪೊಲೀಸರ ವಿಶೇಷ ತನಿಖಾ ತಂಡ ಬೆಂಗಳೂರು ಹಾಗೂ ಬಳ್ಳಾರಿಯಲ್ಲಿ ಪರಿಶೀಲನೆ ನಡೆಸಿದೆ.

ಸ್ಥಳೀಯ ಪೊಲೀಸರ ಸಹಕಾರದೊಂದಿಗೆ ಬೆಂಗಳೂರಿನ ಶ್ರೀರಾಂಪುರ ವ್ಯಾಪ್ತಿಯಲ್ಲಿರುವ ಆರೋಪಿ ಅರ್ಚಕ ಪೋಟಿ ಉನ್ನಿಕೃಷ್ಣನ್ ನಿವಾಸ ಹಾಗೂ ಬಳ್ಳಾರಿಯ ರೊದ್ದಂ ಜ್ಯುವೆಲ್ಲರ್ಸ್ ಮೇಲೆ ಕೇರಳ ಪೊಲೀಸರು ದಾಳಿ ನಡೆಸಿದ್ದು, ಪರಿಶೀಲಿಸಿದ್ದಾರೆ.

ಶಬರಿಮಲೆ ದೇವಾಲಯದ ದ್ವಾರಪಾಲಕ ಮೂರ್ತಿಗಳಿಂದ 475 ಗ್ರಾಂ ಚಿನ್ನದ ಪ್ಲೇಟ್ ಕದ್ದ ಆರೋಪದಡಿ ಪೋಟಿ ಉನ್ನಿಕೃಷ್ಣನ್ ಅವರನ್ನು ಕೇರಳ ಪೊಲೀಸರು ವಶಕ್ಕೆ ಪಡೆದಿದ್ದರು.

ಕದ್ದ ಚಿನ್ನವನ್ನು ಬಳ್ಳಾರಿಯ ಚಿನ್ನದ ವ್ಯಾಪಾರಿ ಗೋವರ್ಧನ್ ಅವರಿಗೆ ಮಾರಾಟ ಮಾಡಿದ ಆರೋಪದಲ್ಲಿ ದಾಳಿ ಮುಂದುವರಿಸಲಾಗಿದೆ. ದಾಳಿ ವೇಳೆ ಮಹತ್ವದ ದಾಖಲೆಗಳು ಲಭ್ಯವಾಗಿವೆ ಎನ್ನಲಾಗಿದೆ.

ಉದ್ಯಮಿ ಗೋವರ್ಧನ್ ಅವರ ಒಡೆತನದ ರೊದ್ದಂ ಆಭರಣ ಅಂಗಡಿಯಿಂದ ವಿಶೇಷ ತನಿಖಾ ತಂಡ ಹಲವಾರು ಚಿನ್ನದ ಗಟ್ಟಿಗಳನ್ನು ವಶಪಡಿಸಿಕೊಂಡಿದೆ. 476 ಗ್ರಾಂ ಚಿನ್ನ ಖರೀದಿಸಿದ್ದಾಗಿ ಗೋವರ್ಧನ್ ಒಪ್ಪಿಕೊಂಡಿದ್ದಾರೆ.

ಶಬರಿಮಲೆಯಲ್ಲಿ ಕಳ್ಳತನ ಆದ ಚಿನ್ನ ಎನ್ನುವುದು ಗೊತ್ತಿರದ ಕಾರಣ ನಾನು ಚಿನ್ನ ಖರೀದಿ ಮಾಡಿದ್ದೆ. ಕದ್ದಿದ್ದ ಚಿನ್ನ ಎಂದು ಗೊತ್ತಿದ್ದರೆ ಖರೀದಿ ಮಾಡುತ್ತಿರಲಿಲ್ಲ ಎಂದು ಗೋವರ್ಧನ್ ಕೇರಳ ಎಸ್‌ಐಟಿ ಮುಂದೆ ಹೇಳಿಕೊಂಡಿದ್ದಾನೆ. ಇದನ್ನು ಕೇಳಿದ ಅಧಿಕಾರಿಗಳು ಮುಂದೇನಾದರೂ ಅಗತ್ಯವಿದ್ದರೆ ತನಿಖೆಗೆ ಕರೆದಾಗ ಬರಬೇಕಾಗುತ್ತದೆ ಎಂದು ಹೇಳಿ ಹೊರಟಿದ್ದಾರೆ ಎನ್ನಲಾಗಿದೆ.

ತಡವಾಗಿ ಏಳುವ ತನ್ನಿಬ್ಬರು ಮಕ್ಕಳನ್ನು ಎಬ್ಬಿಸಲು ಬ್ಯಾಂಡ್ ತರಿಸಿದ ತಾಯಿ! ವಿಡಿಯೋ ನೋಡಿ

ಬಾಲಿವುಡ್‌ನ ಪ್ರಖ್ಯಾತ ನಟ ಸತೀಶ್‌ ಶಾ ನಿಧನ

TAGGED:Bellary; Gold stolen from Roddam Jewellery seized!Kerala SIT probes Bengaluru
Share This Article
Facebook Twitter Copy Link Print
Previous Article ತಡವಾಗಿ ಏಳುವ ತನ್ನಿಬ್ಬರು ಮಕ್ಕಳನ್ನು ಎಬ್ಬಿಸಲು ಬ್ಯಾಂಡ್ ತರಿಸಿದ ತಾಯಿ! ವಿಡಿಯೋ ನೋಡಿ
Next Article ಮೊಟ್ಟೆಗಳನ್ನು ಯಾಕೆ ಫ್ರಿಡ್ಜ್‌ನಲ್ಲಿ ಇಡಬಾರದು?; ಅಧ್ಯಯನ ಹೇಳುವುದೇನು?

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?