Subscribe ನ್ಯೂಸಿಕ್ಸ್ ಕನ್ನಡ
NewsicsKannada/ YouTube
newsics.com
ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರುವ ದರ್ಶನ್ ಅವರು ತಮಗೆ ಕೆಲವು ಮೂಲ ಸೌಕರ್ಯಗಳು ಬೇಕು ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ. ಈ ಕುರಿತಂತೆ ನ್ಯಾಯಾಲಯದಲ್ಲಿ ದರ್ಶನ್ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯವು ಇಂದು ಆದೇಶ ಪ್ರಕಟಿಸಿದೆ.
ಹರಿದ ಚಾದರ ನೀಡಿದ ಜೈಲು ಅಧಿಕಾರಿಗಳಿಗೆ ಕೋರ್ಟ್ ಛೀಮಾರಿ ಹಾಕಿದೆ ಎಂದು ವಕೀಲ ಸುನಿಲ್ ಅವರು ಹೇಳಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸೆಷನ್ಸ್ ನ್ಯಾಯಾಲಯದಲ್ಲಿ ಮೂರು ಅರ್ಜಿಗಳ ವಿಚಾರಣೆ ನಡೆದಿದೆ. ಅದರ ಬಗ್ಗೆ ಸುನಿಲ್ ಅವರು ವಿವರ ನೀಡಿದ್ದಾರೆ. ‘ದರ್ಶನ್ ಹಾಗೂ ಉಳಿದ ಆರೋಪಿಗಳಿಗೆ ಮೂಲ ಸೌಕರ್ಯಗಳನ್ನು ನೀಡಬೇಕು ಎಂದು ಮಾನ್ಯ ನ್ಯಾಯಾಲಯ ಆದೇಶಿಸಿತ್ತು. ಮ್ಯಾನುಯೆಲ್ ಪ್ರಕಾರ ಏನೆಲ್ಲ ಕೊಡಬೇಕೋ ಅದನ್ನೆಲ್ಲ ಕೊಡಿ ಎಂದು ಆದೇಶಿಸಿತ್ತು. ಆದರೂ ಕೂಡ ಜೈಲಾಧಿಕಾರಿಗಳು ಅದನ್ನು ಪಾಲನೆ ಮಾಡುತ್ತಿಲ್ಲ ಎಂದು ಅವರ ಮೇಲೆ ನ್ಯಾಯಾಂಗ ನಿಂದನೆ ಕೇಸ್ ಮಾಡುವಂತೆ ನ್ಯಾಯಲಯಕ್ಕೆ ಕೋರಿಕೊಂಡಿದ್ದೆವು. ಅವರ ವಿಚಾರವಾಗಿ ವಾದ-ಪ್ರತಿವಾದ ನಡೆದಿತ್ತು. ಇಂದು ಆ ಅರ್ಜಿ ವಿಚಾರಣೆಯ ಆದೇಶ ನೀಡಿದೆ’ ಎಂದು ಸುನಿಲ್ ಅವರು ಹೇಳಿದ್ದಾರೆ.
‘ಜೈಲು ಅಧಿಕಾರಿಗಳು ಇನ್ಮುಂದೆ ಈ ನ್ಯಾಯಾಲಯದಿಂದ ಯಾವುದೇ ಆದೇಶವನ್ನು ನಿರೀಕ್ಷಿಸದೇ ಜೈಲಿನ ಮ್ಯಾನುಯೆಲ್ನಲ್ಲಿ ಇರುವ ಎಲ್ಲ ಸೌಕರ್ಯಗಳನ್ನು ಕೊಡಿ ಎಂದು ಕಠಿಣ ಆದೇಶವನ್ನು ನ್ಯಾಯಾಲಯ ಮಾಡಿದೆ. ಆರೋಪಿಗಳನ್ನು ಇನ್ನೂ ಕೂಡ ಕ್ವಾರೆಂಟೈನ್ ಸೆಲ್ನಲ್ಲಿ ಇಟ್ಟಿದ್ದಾರೆ. ಸಾಧ್ಯವಾದರೆ ಬೇರೆ ಸೆಲ್ಗೆ ಶಿಫ್ಟ್ ಮಾಡಿ ಎಂದು ನ್ಯಾಯಾಲಯ ಆದೇಶ ನೀಡಿದೆ.