Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬಾರಾಬಂಕಿ: ಕಾರ್ ಮತ್ತು ಟ್ರಕ್ ಮುಖಾಮುಖಿ ಡಿಕ್ಕಿಯಾಗಿ ಆರು ಜನರು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯಲ್ಲಿ ದೇವ ಪೊಲೀಸ್ ಠಾಣೆ ವ್ಯಾಪ್ತಿಯ ಕುಟ್ಲುಪುರ್ ಗ್ರಾಮದ ಬಳಿಯ ಕಲ್ಯಾಣಿ ನದಿಯ ಸೇತುವೆಯ ಮೇಲೆ ನಡೆದಿದೆ.
ಮೃತರೆಲ್ಲರೂ ಕಾರಿನ ಪ್ರಯಾಣಿಕರಾಗಿದ್ದು, ಫತೇಪುರ್ ಪಟ್ಟಣದ ನಿವಾಸಿಗಳಾಗಿದ್ದಾರೆ. ಡಿಕ್ಕಿಯ ಪರಿಣಾಮ ಎಷ್ಟು ತೀವ್ರವಾಗಿತ್ತೆಂದರೆ, ನಂಬರ್ ಪ್ಲೇಟ್ ಇಲ್ಲದ ಮತ್ತು ಹೊಸದಾಗಿ ಕಾಣುತ್ತಿದ್ದ ಕಾರ್, ಕ್ರೇನ್ ಬಳಸಿ ರಸ್ತೆಯಿಂದ ತೆಗೆಯುವಷ್ಟು ನಜ್ಜುಗುಜ್ಜಾಗಿತ್ತು.
ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ತಲುಪಿ ಗಾಯಾಳುಗಳನ್ನು ಹತ್ತಿರದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಮತ್ತು ನಂತರ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದರು. ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದರೆ, ಇಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.