Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಜಮೀನಿನಲ್ಲಿ ಉಳುಮೆ ಮಾಡುತ್ತಿದ್ದ ರೈತ ಹುಲಿಗೆ ಬಲಿ: ರೊಚ್ಚಿಗೆದ್ದ ಜನರಿಂದ ಆರ್‌ಎಫ್‌ಒ ಮೇಲೆ ಹಲ್ಲೆ, ಸಫಾರಿ‌ ಬಂದ್
ಕರ್ನಾಟಕಪ್ರಮುಖ

ಜಮೀನಿನಲ್ಲಿ ಉಳುಮೆ ಮಾಡುತ್ತಿದ್ದ ರೈತ ಹುಲಿಗೆ ಬಲಿ: ರೊಚ್ಚಿಗೆದ್ದ ಜನರಿಂದ ಆರ್‌ಎಫ್‌ಒ ಮೇಲೆ ಹಲ್ಲೆ, ಸಫಾರಿ‌ ಬಂದ್

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಸರಗೂರು (ಮೈಸೂರು): ಮೈಸೂರು ಜಿಲ್ಲೆಯಲ್ಲಿ ವ್ಯಾಘ್ರನ ಅಟ್ಟಹಾಸ ಮುಂದುವರಿದಿದ್ದು, ಇದೀಗ ಹುಲಿ ದಾಳಿಗೆ ಮತ್ತೊಬ್ಬ ರೈತ ಬಲಿಯಾಗಿರುವ ಘಟನೆ ಜಿಲ್ಲೆಯ ಸರಗೂರು ತಾಲೂಕು ಮೊಳೆಯೂರು ವಲಯದ ಹಳೆ ಹೆಗ್ಗೋಡಿಲು ಗ್ರಾಮದ ಬಳಿ ಶುಕ್ರವಾರ ನಡೆದಿದೆ.ಇದರಿಂದಾಗಿ ಒಂದೇ ತಿಂಗಳಲ್ಲಿ ಮೈಸೂರು ಜಿಲ್ಲೆಯಲ್ಲಿ ಮೂವರು ಹುಲಿ ದಾಳಿಗೆ ಬಲಿಯಾದಂತಾಗಿದೆ.ಹಳೆ ಹೆಗ್ಗೋಡಿಲು ಗ್ರಾಮದ ನಿವಾಸಿಯಾದ ದಂಡನಾಯಕ ಅಲಿಯಾಸ್ ಚೌಡನಾಯಕ(55) ಹುಲಿ ದಾಳಿಗೆ ಬಲಿಯಾದ ರೈತ. ಶುಕ್ರವಾರ ಬೆಳಗ್ಗೆ ತಮ್ಮ ಜಮೀನಿನಲ್ಲಿ ಉಳುಮೆ ಮಾಡುತ್ತಿದ್ದಾಗ ಹಿಂದಿನಿಂದ ಬಂದ ಹುಲಿ ದಾಳಿ ಮಾಡಿ ಎಳೆದೊಯ್ದಿದೆ. ಚೌಡನಾಯಕರನ್ನು ಹುಲಿ ಎಳೆದೊಯ್ದಾಗ ಅಲ್ಲಿದ್ದ ಎತ್ತುಗಳು ಗಾಬರಿಯಿಂದ ರೈತನ ಮನೆಗೆ ಓಡಿ ಬಂದಿದ್ದವು. ಇದರಿಂದ ಕುಟುಂಬಸ್ಥರು ಮತ್ತು ಗ್ರಾಮಸ್ಥರು ಆತಂಕಗೊಂಡು ಜಮೀನಿನತ್ತ ಧಾವಿಸಿ ಬಂದು ಹುಡುಕಾಟ ನಡೆಸಿದಾಗ ಹಳ್ಳವೊಂದರಲ್ಲಿ ಹುಲಿ ತಿಂದು ಬಿಸಾಡಿರುವ ರೀತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ.

ಆನೆ ದಾಳಿಯಿಂದ ಬಚಾವಾಗಿದ್ದ:

ಕಳೆದ ವರ್ಷ ಜಮೀನಿನಲ್ಲಿ ಕೆಲಸ ಮಾಡುವಾಗ ಆನೆ ದಾಳಿ ಮಾಡಿದ್ದರಿಂದ ರೈತ ಚೌಡನಾಯಕನ ಸೊಂಟ ಮುರಿದಿತ್ತು. ನಂತರ ಚೇತರಿಸಿಕೊಂಡಿದ್ದ ಇವರು, ಮೂರು ತಿಂಗಳಿನಿಂದ ಜಮೀನಿಗೆ ಹೋಗಿ ಕೆಲಸ ಮಾಡುತ್ತಿದ್ದಾಗ ಹುಲಿ ದಾಳಿಗೆ ಮೃತಪಟ್ಟಿದ್ದಾರೆ.ಚೌಡನಾಯಕ ಪತ್ನಿ ರುಕ್ಮಿಣಿ, ಮೂವರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

ಆರ್‌ಎಫ್‌ಓ ಮೇಲೆ ಹಲ್ಲೆ;

ಹುಲಿ ದಾಳಿಗೆ ರೈತ ಬಲಿಯಾದ ಜಮೀನು ಮಲೆಯೂರು ಅರಣ್ಯ ಪ್ರದೇಶದ ಹತ್ತಿರವೇ ಇರುವ ಕಾರಣ ವಿಷಯ ತಿಳಿದ ಆರ್‌ಎಫ್ ಒ ಅಮೃತಾ ಅವರು ಸ್ಥಳಕ್ಕೆ ತೆರಳಿದ್ದರು. ಈ ವೇಳೆ ಘಟನೆಯಿಂದ ರೊಚ್ಚಿಗೆದ್ದಿದ್ದ ಮಹಿಳೆಯರು ಅಧಿಕಾರಿ ಹಾಗೂ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ’ ಎಂದು ತಿಳಿದುಬಂದಿದೆ.ತಕ್ಷಣವೇ ಸರಗೂರು ಠಾಣಾ ಪೊಲೀಸರು ಅಮೃತಾ ಅವರಿಗೆ ರಕ್ಷಣೆ ನೀಡಿ ಅಲ್ಲಿಂದ ಕರೆದೊಯ್ದಿದ್ದಾರೆ ಎನ್ನಲಾಗಿದೆ.ಪದೇ ಪದೇ ಹುಲಿ ದಾಳಿ ನಡೆಸುತ್ತಿದ್ದರೂ ಅರಣ್ಯ ಇಲಾಖೆ ಅಧಿಕಾರಿಗಳು ನಿರ್ಲಕ್ಷ÷್ಯ ವಹಿಸಿದ್ದಾರೆ. ಗ್ರಾಮದಲ್ಲಿ ಹುಲಿ
ಹೆಜ್ಜೆ ಇರುವ ಬಗ್ಗೆ ಅಧಿಕಾರಿಗಳಿಗೆ ತಿಳಿದರೂ ಅದನ್ನು ಸೆರೆ ಹಿಡಿಯಲು ಬೋನು ಇಟ್ಟಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ಒಂದೇ ತಿಂಗಳಲ್ಲಿ ಮೂವರು ಬಲಿ:

ಇತ್ತೀಚೆಗೆ, ಸರಗೂರು ಬಡಗಲಪುರ ಗ್ರಾಮದಲ್ಲಿ ಮಹದೇವ (ಮಾದೇಗೌಡ) ಎಂಬವರು ಹುಲಿ ದಾಳಿಯಿಂದ ಕಣ್ಣುಗಳನ್ನು ಕಳೆದುಕೊಂಡು ಗಂಭೀರವಾಗಿ ಗಾಯಗೊಂಡಿದ್ದರು. ಈ ಘಟನೆಯ ಬಳಿಕ ಬೆಣ್ಣೆಗೆರೆ ಗ್ರಾಮದ ರಾಜಶೇಖರ್ ಹಾಗೂ ಕುರ್ಣೇಗಾಲ ಗ್ರಾಮದ ದೊಡ್ಡನಿಂಗಯ್ಯ ಎಂಬವರು ಹುಲಿ ದಾಳಿಗೆ ಬಲಿಯಾಗಿದ್ದಾರೆ.ಇದೀಗ ಚೌಡನಾಯಕ ಎಂಬ ರೈತ ಮೃತಪಟ್ಟಿದ್ದಾನೆ. ಈ ಮೂಲಕ ಹುಲಿ ದಾಳಿಗೆ ಮೂವರು ಪ್ರಾಣ ಕಳೆದುಕೊಂಡಂತಾಗಿದೆ.ಪದೇ ಪದೇ ಹುಲಿ ದಾಳಿ ಹಿನ್ನಲೆ ಕಾಡಂಚಿನ ಗ್ರಾಮದ ನಿವಾಸಿಗಳು ಕಂಗಾಲಾಗಿದ್ದು, ಕೆಲಸಕ್ಕೆ ಹೋಗಲೂ ಸಾದ್ಯವಾಗದ ಪರಿಸ್ಥಿತಿ ಉಂಟಾಗಿದೆ.

ನಾಗರಹೊಳೆ, ಬಂಡೀಪುರ ಸಫಾರಿ ಬಂದ್

ಮೈಸೂರು ಜಿಲ್ಲೆಯ ನಾಗರಹೊಳೆ ಮತ್ತು ಬಂಡೀಪುರ ಸಫಾರಿಯನ್ನು ಹಾಗೂ ಮಾನವ-ವನ್ಯಜೀವಿ ಸಂಘರ್ಷ ಇರುವ ಪ್ರದೇಶದಲ್ಲಿ ಚಾರಣವನ್ನು ಇಂದಿನಿಂದಲೇ ಬಂದ್ ಮಾಡಿ, ಸಿಬ್ಬಂದಿಯನ್ನು ಹುಲಿ ಸೆರೆ ಕಾರ್ಯಾಚರಣೆಗೆ ನಿಯೋಜಿಸಲು ಸಚಿವ ಈಶ್ವರ ಬಿ ಖಂಡ್ರೆ ಆದೇಶಿಸಿದ್ದಾರೆ.

ಚರಂಡಿಯಲ್ಲಿ ಬೆಂಗಳೂರು ಟೆಕ್ಕಿಗಳ ಸಂಚಾರ; ದಾರಿಯಲ್ಲ ಕಣ್ರೀ ಇದು ಮೋರಿ, ವೈರಲ್ ವಿಡಿಯೋ ನೋಡಿ

TAGGED:Farmer killed by tiger while ploughing land: Angry people attack RFOsafari shut down
Share This Article
Facebook Twitter Copy Link Print
Previous Article ಫೋನ್ ಪೇ ಮೂಲಕ ಲವ್ವಿ ಡವ್ವಿ: ಗರ್ಭಿಣಿಯಾದ 9ನೇ ತರಗತಿ ವಿದ್ಯಾರ್ಥಿನಿ, ಆರೋಪಿ ಅರೆಸ್ಟ್
Next Article ಚರಂಡಿಯಲ್ಲಿ ಬೆಂಗಳೂರು ಟೆಕ್ಕಿಗಳ ಸಂಚಾರ; ದಾರಿಯಲ್ಲ ಕಣ್ರೀ ಇದು ಮೋರಿ, ವೈರಲ್ ವಿಡಿಯೋ ನೋಡಿ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?