Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರ ತಾಲೂಕಿನ ಕೂನೂರು ಗ್ರಾಮದ ಹಾರೋಬೆಲೆ ಡ್ಯಾಂ ಹಿನ್ನೀರಿನಲ್ಲಿ ಮುಳುಗಿ ಎರಡು ಗಂಡಾನೆಗಳು ಮೃತಪಟ್ಟಿವೆ.
ಕಳೆದ ಒಂದು ವಾರದಿಂದ ಗ್ರಾಮದ ಸುತ್ತಮುತ್ತ ಏಳು ಗಂಡಾನೆಗಳು ಕಾಣಿಸಿಕೊಂಡಿದ್ದವು. ಹೀಗಾಗಿ ಅರಣ್ಯ ಇಲಾಖೆ ಸಿಬ್ಬಂದಿಗಳು ಎರಡು ದಿನಗಳ ಕೆಳಗೆ ಕಾಡಿಗೆ ಹಿಮ್ಮೆಟ್ಟಿಸುವ ಕೆಲಸ ಮಾಡಿದ್ದರು. ಈ ವೇಳೆ ಹದಿನೈದರಿಂದ ಇಪತ್ತು ವರ್ಷ ಪ್ರಾಯದ ಎರಡು ಗಂಡಾನೆಗಳು ನದಿ ದಾಟಲು ಹೋಗಿ ಜೊಂಡು (ಜಲಸಸ್ಯ) ಸಿಲುಕಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿವೆ.
ಆಹಾರ ಅರಿಸಿ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಿಂದ ಕಾಡಾನೆಗಳು ನಾಡಿಗೆ ಬಂದಿದ್ದವು. ಸದ್ಯ ಸಾವನ್ನಪ್ಪಿರುವ ಕಾಡಾನೆಗಳನ್ನು ಸಿಬ್ಬಂದಿ ನದಿಯಿಂದ ಮೇಲಕ್ಕೆತ್ತಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಮರಣೋತ್ತರ ಪರೀಕ್ಷೆ ಬಳಿಕ ಅಂತ್ಯಸಂಸ್ಕಾರ ನಡೆಸಲಿದ್ದಾರೆ.
ಕೂನೂರು ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸದ್ಯ ಸ್ಥಳದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಮೊಕ್ಕಾಂ ಹೂಡಿದ್ದಾರೆ.
ಇತ್ತೀಚೆಗೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಸುಳೇಗಾಳಿ ಗ್ರಾಮದ ಬಳಿ ಜಮೀನಿಗೆ ಕಾಲಿಟ್ಟಿದ್ದ ಎರಡು ಕಾಡಾನೆಗಳು ವಿದ್ಯುತ್ ಸ್ಪರ್ಶಕ್ಕೆ ಬಲಿ ಆಗಿದ್ದವು. ಎರಡು ಆನೆಗಳ ಸಾವು ಎಲ್ಲರೂ ಕೆರಳುವಂತೆ ಮಾಡಿತ್ತು. ಅರಣ್ಯ ಸಚಿವ ಈಶ್ವರ್ ಖಂಡ್ರೆ ತನಿಖೆಗೆ ಆದೇಶಿಸಿದ್ದರು. ಪ್ರಾಥಮಿಕ ತನಿಖೆ ವೇಳೆ ಗಣಪತಿ ಗುರವ್ ಎಂಬ ರೈತನ ಕುಕೃತ್ಯ ಬಯಲಾಗಿದ್ದು, ಆತನನ್ನುಙ ಬಂಧಿಸಲಾಗಿತ್ತು.
ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಯೋಗ ಗುರು ನಿರಂಜನ ಮೂರ್ತಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ