newsics.com
ಬೆಂಗಳೂರು: ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿ ಕೈದಿಗಳ ಎಣ್ಣೆ ಪಾರ್ಟಿ ವಿಡಿಯೋ ವೈರಲ್ ವಿಚಾರಕ್ಕೀಗ ಸ್ಫೋಟಕ ತಿರುವು ಸಿಕ್ಕಿದೆ.
ಮದ್ಯದ ಬಾಟಲಿಗೆ ಮೂತ್ರ ತುಂಬಿಸಿ ವಿಡಿಯೋ ಚಿತ್ರೀಕರಣ ಮಾಡಿದ್ದಾರೆಂಬುದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ.
ಮೂರು ಸಾಲಾಗಿ ಜೋಡಿಸಿ ವಿಡಿಯೋ ಮಾಡಿದ್ದು, ಗ್ಲಾಸ್ಗೆ ಮೂತ್ರ ತುಂಬಿಸಿ ಅದನ್ನು ಮದ್ಯದ ರೀತಿ ಬಿಂಬಿಸಲಾಗಿದೆ. ಬಳಿಕ ಆ ವಿಡಿಯೋವನ್ನು ಬೇಕಂತಲೇ ಹರಿಬಿಟ್ಟಿದ್ದಾರೆ ಎಂಬುದು ಗೊತ್ತಾಗಿದೆ.
ಷಡ್ಯಂತ್ರ?
ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಲಾಗುತ್ತಿದ್ದು, ಮೊಬೈಲ್ ಮತ್ತು ಟಿವಿಗಳ ಬಳಕೆಯ ವಿಡಿಯೋಗಳು ವೈರಲ್ ಆಗಿದ್ದವು. ಜೈಲಿನಲ್ಲಿ ಭಯೋತ್ಪಾದಕರು ಮತ್ತು ಅತ್ಯಾಚಾರಿಗಳ ಕೈಯಲ್ಲಿ ಮೊಬೈಲ್ ಫೋನ್ಗಳೂ ಪತ್ತೆಯಾಗಿದ್ದವು. ಈ ಅಕ್ರಮಗಳ ಹಿಂದೆ ಅಧಿಕಾರಿಗಳ ಕೈವಾಡವಿದ್ದು, ಹುದ್ದೆಗಳಿಗಾಗಿ ಅಥವಾ ಹಣಕಾಸಿನ ಲಾಭಕ್ಕಾಗಿ ವ್ಯವಸ್ಥಿತ ಪಿತೂರಿ ನಡೆಯುತ್ತಿದ್ಯಾ ಎಂಬ ಅನುಮಾನ ವ್ಯಕ್ತವಾಗಿತ್ತು.
ಪರಪ್ಪನ ಅಗ್ರಹಾರ ಜೈಲಿನಲ್ಲಿ ಉನ್ನತ ಹುದ್ದೆಗಳಿಗೆ ಭಾರಿ ಬೇಡಿಕೆ ಇದ್ದು, ಇಲ್ಲಿ ವಿಐಪಿ ಕೈದಿಗಳಿಗೆ ಸೌಲಭ್ಯ ನೀಡಿಯೇ ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ ನಡೆಸಲಾಗುತ್ತದೆ. ಹೀಗಾಗಿ ಹಿರಿಯ ಅಧಿಕಾರಿಗಳನ್ನು ಟಾರ್ಗೆಟ್ ಮಾಡುವ ಉದ್ದೇಶದಿಂದ ಸಿಬ್ಬಂದಿಯೇ ಈ ಕೆಲಸ ಮಾಡುತ್ತಿದ್ದಾರಾ ಎಂಬ ಪ್ರಶ್ನೆ ಉದ್ಭವಿಸಿತ್ತು. ಈ ಹಿನ್ನೆಲೆಯಲ್ಲಿ ತನಿಖೆ ಆರಂಭಿಸಿದಾಗ ಮದ್ಯದ ಬಾಟಲಿಗೆ ಮೂತ್ರ ತುಂಬಿಸಿ ವಿಡಿಯೋ ಮಾಡಿರುವ ಬಗ್ಗೆ ಮಾಹಿತಿ ಸಿಕ್ಕಿರುವುದು ಷಡ್ಯಂತ್ರದ ಅನುಮಾನಕ್ಕೆ ಮತ್ತಷ್ಟು ಪುಷ್ಠಿ ನೀಡಿದೆ.
ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ವಿಚಾರ ಸಂಬಂಧ ಜೈಲಿನ ಮುಖ್ಯ ಅಧೀಕ್ಷಕ ಸುರೇಶ್ ಅವರನ್ನು ಎತ್ತಂಗಡಿ ಮಾಡಲಾಗಿದ್ದು, ಅಧೀಕ್ಷಕ ಮ್ಯಾಗೇರಿ ಮತ್ತು ಉಪಾಧೀಕ್ಷಕರಾದ ಅಶೋಕ್ ಭಜಂತ್ರಿ ಅವರನ್ನು ಈಗಾಗಲೆ ಸಸ್ಪೆಂಡ್ ಮಾಡಲಾಗಿದೆ.
ಈ ಬಗ್ಗೆ ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ ಮಾಡಿ ಗೃಹ ಸಚಿವರು ಆದೇಶಿಸಿದ್ದಾರೆ. ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್.ಹಿತೇಂದ್ರ, ಸಂದೀಪ್ ಪಾಟೀಲ್, ಅಮರನಾಥ್ ರೆಡ್ಡಿ, ರಿಷ್ಯಂತ್ ಸಮಿತಿಗೆ ಒಂದು ತಿಂಗಳಲ್ಲಿ ವರದಿ ನೀಡುವಂತೆ ಸೂಚಿಸಿರುವುದಾಗಿ ತಿಳಿಸಿದ್ದಾರೆ.
Delhi blast ಭಾರೀ ಸ್ಫೋಟಕ್ಕೆ ಬೆಚ್ಚಿದ ಜನ, ದಿಕ್ಕಾಪಾಲಾಗಿ ಓಡಿದರು… ವೀಡಿಯೊ ನೋಡಿ…
Car blast ಈ ಸ್ಫೋಟ ಆಕಸ್ಮಿಕವಲ್ಲ, 150 ಮೀಟರ್ ಎತ್ತರಕ್ಕೆ ಚಿಮ್ಮಿದ ಕಾರು, ಜೈಶ್ ಎ ಮೊಹಮ್ಮದ್ ಲಿಂಕ್?