Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಕೋಲಾರ: ಮಾಲೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಮರು ಮತ ಎಣಿಕೆ ಕಾರ್ಯ ಮುಕ್ತಾಯಗೊಂಡಿದ್ದು, ಫಲಿತಾಂಶವನ್ನು ಮುಚ್ಚಿದ ಲಕೋಟೆಯಲ್ಲಿ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಸುಪ್ರೀಂಕೋರ್ಟ್ ಗೆ ರವಾನಿಸಿದ್ದಾರೆ.ಸುಪ್ರೀಂ ಕೋರ್ಟ್ ನವೆಂಬರ್ 24ರಂದು ಫಲಿತಾಂಶ ಪ್ರಕಟಿಸಲಿದೆ
ಸುಪ್ರೀಂಕೋರ್ಟ್ ಆದೇಶದಂತೆ ಕೋಲಾರ ನಗರದ ಹೊರವಲಯದಲ್ಲಿರುವ ತೋಟಗಾರಿಕಾ ವಿಶ್ವವಿದ್ಯಾನಿಲಯದಲ್ಲಿ ಮಂಗಳವಾರ ಬೆಳಗ್ಗೆ 8 ಗಂಟೆಗೆ ಮರು ಎಣಿಕೆ ಕಾರ್ಯ ಪ್ರಾರಂಭವಾಗಿ, ರಾತ್ರಿ 9 ಗಂಟೆಗೆ ಮುಕ್ತಾಯಗೊಂಡಿದೆ.
ಮಾಲೂರು ಮತ ಎಣಿಕೆ ಕೇಂದ್ರದಿಂದ ಹೊರಬಂದ ನಂಜೇಗೌಡರನ್ನು ಕಾಯುತ್ತಿದ್ದ ಕುಟುಂಬಸ್ಥರನ್ನು ನೋಡುತ್ತಿದ್ದಂತೆ ಭಾವುಕರಾಗಿದ್ದಾರೆ. ಪತ್ನಿ,ಮಕ್ಕಳು, ಸೊಸೆಯರ ಜೊತೆ ಶಾಸಕ ನಂಜೇಗೌಡರು ಕಣ್ಣೀರು ಹಾಕಿದ್ದಾರೆ. ಇದರ ಬೆನ್ನಲ್ಲೇ ಹಲವು ಚರ್ಚೆಗಳು ನಡೆಯುತ್ತಿದೆ. ವಿನಾ ಕಾರಣ ನಂಜೇಗೌಡರ ಗೆಲುವನ್ನು ಸಂಶಯದಿಂದ ನೋಡಲಾಗಿತ್ತು. ಇಂದು ಮರು ಎಣಿಕೆಯಲ್ಲಿ ಎಲ್ಲವೂ ಸ್ಪಷ್ಟವಾಗಿದೆ. ಹೀಗಾಗಿ ನಂಜೇಗೌಡರು ಭಾವುಕರಾಗಿದ್ದಾರೆ ಎಂದು ಕಾಂಗ್ರೆಸ್ ಬೆಂಬಲಿಗರು ಹೇಳಿದ್ದಾರೆ. ಇದೇ ವೇಳೆ ಮರು ಎಣಿಕೆಯಲ್ಲಿ ಫಲಿತಾಂಶ ಉಲ್ಟಾ ಹೊಡೆಯುವ ಸಾಧ್ಯತೆ ಇದೆ ಎಂದು ಕಣ್ಣೀರು ಹಾಕಿದ್ದಾರೆ ಅನ್ನೋ ಮಾತುಗಳು ಕೇಳಿಬಂದಿದೆ.