Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಯಾದಗಿರಿ: ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಇಲ್ಲಿನ ಸಮಾಜಕಲ್ಯಾಣ ಇಲಾಖೆಯಲ್ಲಿ ಎಸ್ಡಿಎ ಸಿಬ್ಬಂದಿ ಅಂಜಲಿ ಕಂಬಾನೂರ ಎಂಬುವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಬುಧವಾರ ನಡೆದಿದೆ.
ಅಂಜಲಿ ಅವರು ಎಂದಿನಂತೆ ಕರ್ತವ್ಯಕ್ಕಾಗಿ ಕಚೇರಿಗೆ ಕಾರಿನಲ್ಲಿ ಆಗಮಿಸುವ ವೇಳೆ ದುಷ್ಕರ್ಮಿಗಳು ಅವರನ್ನು ಬೆನ್ನಟ್ಟಿ ಬಂದು ನಗರದ ಚಿತ್ತಾಪುರ ರಸ್ತೆಯಲ್ಲಿ ಹರಿತವಾದ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ. ಅಂಜಲಿ ಸ್ಥಿತಿ ಚಿಂತಾಜನಕವಾಗಿದೆ.
ಘಟನೆ ನಡೆದ ತಕ್ಷಣವೇ ಕಾರ್ ಚಾಲಕ ಅಜೀಮಿರ್, ದಾಳಿ ಲೆಕ್ಕಿಸದೆ ಗಾಯಾಳು ಅಂಜಲಿ ಅವರನ್ನು ಯಿಮ್ಸ್ ಆಸ್ಪತ್ರೆಗೆ ಸೇರಿಸಿದ್ದು, ಪ್ರಥಮ ಚಿಕಿತ್ಸೆ ಬಳಿಕ ಕಲಬುರಗಿಗೆ ಕರೆದೊಯ್ಯಲಾಗಿದೆ.
ಹಳೆ ವೈಷ್ಯಮ್ಮವೇ ಹಲ್ಲೆಗೆ ಕಾರಣವೆನ್ನಲಾಗುತ್ತಿದೆ.
ಜ.26ರಂದು ಭಾರೀ ದಾಳಿಗೆ ಸಂಚು ರೂಪಿಸಿದ್ದ ಉಗ್ರರು: ಕಾರು ಸ್ಫೋಟ ತನಿಖೆ ವೇಳೆ ಬಹಿರಂಗ