Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ನವದೆಹಲಿ: ದೆಹಲಿಯ ಕೆಂಪು ಕೋಟೆ ಬಳಿ ಸ್ಫೋಟ ಸಂಭವಿಸಿದ್ದು, ಇದನ್ನು ಆತ್ಮಹುತಿ ಬಾಂಬ್ ದಾಳಿ ಎಂದು ತನಿಖಾಧಿಕಾರಿಗಳು ಶಂಕಿಸಿದ್ದಾರೆ. ಕಾರಿನಲ್ಲಿದ್ದ ಚಾಲಕ ಉಗ್ರ ಡಾ. ಉಮರ್ ಎಂದು ಗುರುತಿಸಲಾಗಿದ್ದು, ಹುಂಡೈ i20 ಕಾರಿನಲ್ಲಿ ಅಮೋನಿಯಂ ನೈಟ್ರೇಟ್ ಉಪಯೋಗಿಸಿ ಸ್ಫೋಟ ಮಾಡಲಾಗಿದೆ.
ಘಟನೆಯಲ್ಲಿ ಎಂಟು ಜನ ಸಾವನ್ನಪ್ಪಿದ್ದಾರೆ. ಸದ್ಯ ಘಟನೆಗೆ ಸಂಬಂಧಿಸಿದಂತೆ ತಳ ಮಟ್ಟದಿಂದ ತನಿಖೆ ನಡೆಯುತ್ತಿದ್ದು, ನೂರಕ್ಕೂ ಅಧಿಕ ಜನರನ್ನು ವಿಚಾರಣೆಗೆ ಒಳಪಡಿಸಲಾಗುತ್ತಿದೆ. ಆತ್ಮಾಹುತಿ ಬಾಂಬರ್ ಡಾ. ಉಮರ್ ಕುಟುಂಬಸ್ಥರನ್ನು ಇದೀಗ ಬಂಧಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ.
ಡಾ. ಉಮರ್ ನಬಿ, ಡಿಸೆಂಬರ್ 6 ರಂದು ಬಾಬರಿ ಮಸೀದಿ ಧ್ವಂಸ ವಾರ್ಷಿಕ ದಿನದಂದು ಪ್ರಬಲ ಸ್ಫೋಟವನ್ನು ಯೋಜಿಸಿದ್ದ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
ಇನ್ನು ಅಯೋಧ್ಯೆಯ ರಾಮಮಂದಿರ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದ್ದು, ನ.21 ರಂದು ಪ್ರಧಾನಿ ನರೇಂದ್ರ ಮೋದಿ ಮಂದಿರದಲ್ಲಿ ಧ್ವಜಾರೋಹಣ ನೆರವೇರಿಸಲಿದ್ದಾರೆ, ಇದಕ್ಕೂ ಮುನ್ನ ದೇಶದ ಹಲವೆಡೆ ಬಾಂಬ್ ಸ್ಫೋಟ ನಡೆಸಲು ಉದ್ದೇಶಿಸಲಾಗಿತ್ತು ಎಂದು ತಿಳಿದುಬಂದಿದೆ.
ಫರಿದಾಬಾದ್ನಲ್ಲಿ ಕೇಂದ್ರೀಕೃತವಾಗಿರುವ ಅಂತರರಾಜ್ಯ ‘ವೈಟ್ ಕಾಲರ್’ ಜೈಶ್-ಎ-ಮೊಹಮ್ಮದ್ ಭಯೋತ್ಪಾದಕ ಘಟಕದೊಂದಿಗೆ ಸಂಪರ್ಕ ಹೊಂದಿದ್ದ.ಪ್ರವಾಸದ ಸಮಯದಲ್ಲಿ ಇಬ್ಬರೂ ನಿಷೇಧಿತ ಜೆಇಎಂನ ಭೂಗತ ಕಾರ್ಯಕರ್ತರನ್ನು ಭೇಟಿಯಾಗಿದ್ದರು.
ಡಾ. ಉಮರ್ ಘ್ ನಬಿ ಭಟ್ ಎಂಬಾತನ ಪುತ್ರನಾಗಿದ್ದು, ಫೆಬ್ರವರಿ 24, 1989 ರಂದು ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಜನಿಸಿದ. ಫರಿದಾಬಾದ್ನ ಅಲ್-ಫಲಾಹ್ ವೈದ್ಯಕೀಯ ಕಾಲೇಜಿನಲ್ಲಿ ಈತ ಸೇವೆ ಸಲ್ಲಿಸುತ್ತಿದ್ದ. ಮತ್ತೊಬ್ಬ ಉಗ್ರ ಡಾ. ಅದೀಲ್ನ ಜೊತೆಗೆ ಈತ ಸಂಪರ್ಕ ಹೊಂದಿದ್ದು, ಟೆಲಿಗ್ರಾಮನ್ನಲ್ಲಿ ನಡೆಸಿದ ಚಾಟ್ಗಳು ಇದೀಗ ತನಿಖಾಧಿಕಾರಿಗಳಿಗೆ ಲಭ್ಯವಾಗಿದೆ. ಉಮರ್ ಶ್ರೀನಗರದ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಎಂಡಿ ವೈದ್ಯಕೀಯ ಪದವಿ ಪಡೆದಿದ್ದ. ಅಲ್ಲಿಂದಲೇ ಈತ ಉಗ್ರರ ಜೊತೆಗೆ ಸಂಪರ್ಕದಲ್ಲಿದ್ದ ಎಂದು ಹೇಳಲಾಗುತ್ತಿದೆ.
https://www.newsics.com/2025/11/13/this-man-has-six-wives-6-women-are-pregnant-at-the-same-time/