Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಮೈಸೂರು: ಮೈಸೂರು ಜಿಲ್ಲೆಯ ಕಾಡಂಚಿನ ಎಚ್ಡಿ ಕೋಟೆ ಮತ್ತು ಸರಗೂರು ಪ್ರದೇಶಗಳಲ್ಲಿ ಹುಲಿಗಳ ಭೀತಿ ಹೆಚ್ಚಾಗಿದ್ದು, ಈ ಪ್ರದೇಶಕ್ಕೆ ಸುಮಾರು 21 ಹುಲಿಗಳು ಕಾಡಿನಿಂದ ಬಂದಿವೆ ಎನ್ನಲಾಗಿದೆ.
ಈ ಮಾಹಿತಿಯಿಂದ ಸುತ್ತ ಮುತ್ತಲಿನ ಪ್ರದೇಶದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.
ಇತ್ತೀಚೆಗಷ್ಟೇ ಹೆಚ್ಡಿ ಕೋಟೆ, ಸರಗೂರು ಭಾಗದಲ್ಲಿ ಮೂವರು ರೈತರು ಹುಲಿ ದಾಳಿಗೆ ಬಲಿಯಾದ ಘಟನೆ ಕೂಡ ನಡೆದಿತ್ತು. ಇದರ ಬೆನ್ನಲ್ಲೇ ಅರಣ್ಯ ಇಲಾಖೆ ಹುಲಿಯನ್ನ ಸೆರೆಹಿಡಿದಿತ್ತು.
ಜತೆಗೆ ಕಾಡಂಚಿನ ರೈತರ ರಕ್ಷಣೆಗೆ ಹಲವು ಕ್ರಮಗಳನ್ನ ಕೈಗೊಳ್ಳಲು ಮುಂದಾಗಿತ್ತು. ಒಟ್ಟು 26 ಹುಲಿಗಳು ಕಾಡಿನಿಂದ ನಾಡಿಗೆ ಬಂದಿದ್ದವು. ಅದರಲ್ಲಿ ಐದು ಹುಲಿ ಹಿಡಿಯಲಾಗಿದೆ. ಇನ್ನೂ 21 ಹುಲಿ ನಾಡಿನಲ್ಲೇ ಓಡಾಡುತ್ತಿವೆ ಎನ್ನಲಾಗಿದೆ.
ಈ ನಡುವೆ, ಒಂದಲ್ಲ ಎರಡಲ್ಲ ಬರೋಬ್ಬರಿ 21 ಹುಲಿಗಳು ನಾಡಿಗೆ ಆಗಮಿಸಿವೆ ಎಂದು ಹೇಳಲಾಗಿದೆ.
ಮೈಸೂರು ಡಿಸಿಎಫ್ (Mysuru DCF) ಪರಮೇಶ್ ಈ ಬಗ್ಗೆ ಅಧಿಕೃತ ಮಾಹಿತಿ ಕೊಟ್ಟಿದ್ದಾರೆ. ಜನರು ಜಾಗರೂಕರಾಗಿರಲು ಸೂಚಿಸಲಾಗಿದೆ ಎಂದು ಡಿಸಿಎಫ್ ಹೇಳಿದ್ದಾರೆ.
ಇಂತಹ ಘಟನೆ ಇದೇ ಮೊದಲೇನಲ್ಲ 2014, 2018-19ರಲ್ಲೂ ಆಗಿದೆ. ನಾನು ಕಂಡಂತೆ ಇದು ಮೂರನೇ ಘಟನೆ. ಸದ್ಯ ಈಗ ಹೆಡಿಯಾಲ ಉಪವಿಭಾಗದಲ್ಲಿ ಮೂರು ಕಡೆ ಹುಲಿ ಸೆರೆ ಕಾರ್ಯಾಚರಣೆ ನಡೆಯುತ್ತಿದೆ ಎಂದು ಡಿಸಿಎಫ್ ಮಾಹಿತಿ ನೀಡಿದ್ದಾರೆ.
ಹುಲಿ ದಾಳಿಯಿಂದ ತಪ್ಪಿಸಿಕೊಳ್ಳಲು ರೈತರಿಗೆ ಮಾನವ ಮುಖದ ಮಾಸ್ಕ್ ನೀಡಲು ನಿರ್ಧರಿಸಲಾಗಿದೆ ಎಂದು ಡಿಸಿಎಫ್ ಪರಮೇಶ್ ಹೇಳಿದ್ದಾರೆ.
ರೈತರಿಗೆ 10 ಸಾವಿರ ಮಾನವ ಮುಖದ ಮಾಸ್ಕ್ ನೀಡಲು ನಿರ್ಧರಿಸಲಾಗಿದೆ. ಕುಳಿತು ಕೆಲಸ ಮಾಡುವಾಗ ಹುಲಿಗಳು ದಾಳಿ ನಡೆಸುತ್ತವೆ. ಆದ್ದರಿಂದ ರೈತರು ಮಾನವ ಮಾಸ್ಕ್ ಗಳನ್ನು ಹಾಕಿಕೊಳ್ಳಬೇಕು ಎಂದು ಡಿಸಿಎಫ್ ಸೂಚಿಸಿದ್ದಾರೆ.
ಆದಷ್ಟು ಶೀಘ್ರ ಹುಲಿಗಳ ಸಮಸ್ಯೆ ಬಗೆಹರಿಯಲಿದೆ. ಸಾಕಾನೆಗಳ ಮೂಲಕ ಥರ್ಮಲ್ ಡೋನ್ ಮೂಲಕ ಕಾರ್ಯಾಚರಣೆ ನಡೆಸುತ್ತಿದ್ದೇವೆ ಎಂದು ಪರಮೇಶ್ ಮಾಹಿತಿ ನೀಡಿದ್ದಾರೆ.
Shabarimale ಮೂಗಿನೊಳಗೆ ನೀರು ಹೋಗದಂತೆ ಎಚ್ಚರ ವಹಿಸಿ: ಸರ್ಕಾರ ಸೂಚನೆ
ಬೆಳಗಾವಿಯ ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ 28 ಕೃಷ್ಣ ಮೃಗಗಳು ಸಾವು : ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ.!
ಹೆಂಡತಿ ಜೊತೆ ಮಲಗಲು ಭಯ ಆಗ್ತಿದೆ ದಯವಿಟ್ಟು ನನಗೆ ವಿಚ್ಚೇದನ ಕೊಡಿಸಿ ಎಂದು ಕೋರ್ಟ್ ಮೊರೆ ಹೋದ ಗಂಡ