Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ವಿಶಾಖಪಟ್ಟಣ: ಆಂಧ್ರ ಪ್ರದೇಶದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯ ಮಾರೆಡುಮಿಲ್ಲಿಯ ಅರಣ್ಯ ಪ್ರದೇಶದಲ್ಲಿ ಬೆಳಗ್ಗೆ ಪೊಲೀಸರು ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದೆ.
ಈ ವೇಳೆ ಮಾವೋವಾದಿ ಸಂಘಟನೆಯ ಪ್ರಮುಖ ನಾಯಕ ಮದ್ವಿ ಹಿದ್ಮಾ, ಆತನ ಪತ್ನಿ ಸೇರಿ 6 ಮಂದಿ ಹತ್ಯೆಗೀಡಾಗಿದ್ದಾರೆ.
ಗುಂಡಿನ ಚಕಮಕಿಯಲ್ಲಿ ಯಾವುದೇ ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿಲ್ಲ. ಹತ್ಯೆಯಾದ ನಕ್ಸಲರ ಗುರುತು ಮತ್ತು ಗಾಯಗೊಂಡವರ ವಿವರಗಳನ್ನ ಕಲೆಹಾಕಲಾಗುತ್ತಿದೆ. ಘಟನಾ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಬರ್ದಾರ್ ತಿಳಿಸಿದ್ದಾರೆ.
https://www.newsics.com/2025/11/19/israeli-airstrike-on-palestinian-refugee-camp-in-lebanon-13-dead/