Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬೆಂಗಳೂರು : ಕ್ರಿಪ್ಟೋ ಕರೆನ್ಸಿ ಟ್ರೇಡಿಂಗ್ ಹೆಸರಿನಲ್ಲಿ ಸೈಬರ್ ವಂಚನೆಗೆ ಒಳಗಾಗಿ ಬೆಂಗಳೂರಿನ ವ್ಯಕ್ತಿಯೊಬ್ಬರು 42 ಲಕ್ಷ ಕಳೆದುಕೊಂಡಿದ್ದಾರೆ.
ಅಧಿಕ ಲಾಭ ಸಿಗುವ ಆಸೆಯಿಂದ ಅಪರಿಚಿತ ವ್ಯಕ್ತಿ ನೀಡಿದ ಆಮಿಷ ನಂಬಿ ಹಣ ಹೂಡಿಕೆ ಮಾಡಿದ್ದಾತ ಈಗ ಇರುವ ಹಣವನ್ನೂ ಕಳೆದುಕೊಂಡಿದ್ದಾನೆ. ಇನ್ಸ್ಟಾಗ್ರಾಂ ಮತ್ತು ಟೆಲಿಗ್ರಾಂ ಮೂಲಕ ಪರಿಚಯವಾದ ಖದೀಮರು ಅಧಿಕ ಲಾಭದ ಆಮಿಷವೊಡ್ಡಿ ಹಣ ಹೂಡಿಸುವಂತೆ ಪ್ರೇರೇಪಿಸಿದ್ದರು. ಲಾಭಾಂಶ ನೀಡುವ ನೆಪದಲ್ಲಿ ಹೆಚ್ಚು ಹಣ ಹಾಕಿಸಿಕೊಂಡು, ಕೊನೆಗೆ ವಿವಿಧ ಶುಲ್ಕಗಳ ಹೆಸರಿನಲ್ಲಿ ವಂಚಿಸಿದ್ದಾರೆ.
45 ವರ್ಷದ ಬೆಂಗಳೂರಿನ ವ್ಯಕ್ತಿಗೆ ಕ್ರಿಪ್ಟೋ ಕರೆನ್ಸಿ ಟ್ರೇಡಿಂಗ್ ಬಗ್ಗೆ ಮಾಹಿತಿ ಇನ್ಸ್ಟಾಗ್ರಾಂ ಮೂಲಕ ದೊರೆತಿದ್ದು, ಅಶುತೋಷ್ ಶರ್ಮಾ ಎಂಬ ವ್ಯಕ್ತಿ ಕ್ರಿಪ್ಟೋ ಹೂಡಿಕೆಗಳ ಕುರಿತು ಮಾರ್ಗದರ್ಶನ ನೀಡುತ್ತಿದ್ದ. ಬಳಿಕ ಇದಕ್ಕೆ ಸಂಬಂಧಿಸಿದ ಟೆಲಿಗ್ರಾಂ ಗುಂಪನ್ನೂ ವ್ಯಕ್ತಿಗೆ ಪರಿಚಯಿಸಿದ್ದ. ಹೂಡಿಕೆ ಹಣಕ್ಕೆ ಶೇ. 15ರಷ್ಟು ಲಾಭ ನೀಡುವ ಭರವಸೆ ಸಿಕ್ಕ ಹಿನ್ನಲೆ ಸ್ವಲ್ಪ ಹಣವನ್ನ ಸಂತ್ರಸ್ತ ಹೂಡಿಕೆ ಮಾಡಿದ್ದ. ಈ ವೇಳೆ ಲಾಭ ತನ್ನ ಖಾತೆಗೆ ಜಮಾ ಆಗುತ್ತಿದ್ದ ಕಾರಣ ಆತ ಸೈಬರ್ ಖದೀಮರನ್ನು ಮತ್ತಷ್ಟು ನಂಬಿದ್ದ. ಇನ್ನೂ ಹಣ ಹೂಡಿಕೆ ಮಾಡಿದ್ದ ಎನ್ನಲಾಗಿದೆ.
ತಾನು ವಂಚನೆಗೆ ಒಳಗಾಗಿರುವ ಬಗ್ಗೆ ಅರಿವಾಗುತ್ತಿದ್ದಂತೆ ಆತ ದೂರು ನೀಡಿದ್ದು, ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
https://www.newsics.com/2025/11/19/most-wanted-maoist-leader-madvi-hidma-encounter/