newsics. com
ಬೆಂಗಳೂರು: ಅಲ್ಪಸಂಖ್ಯಾತ ಸಮುದಾಯದ ಎಸ್ಎಸ್ಎಲ್ಸಿ, ದ್ವಿತೀಯ ಪಿಯುಸಿ ವಿದ್ಯಾರ್ಧಿಗಳಿಗೆ ಸಚಿವ ಜಮೀರ್ ಅಹ್ಮದ್ ಖಾನ್ ಬಂಪರ್ ಕೊಡುಗೆ ಘೋಷಣೆ ಮಾಡಿದ್ದಾರೆ.
ಅಲ್ಪಸಂಖ್ಯಾತ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಚಿವ ಜಮೀರ್ ಅಹ್ಮದ್ ಖಾನ್, ಎಸ್ಎಸ್ಎಲ್ಸಿ, ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ 32 ಜನ ವಿದ್ಯಾರ್ಥಿಗಳಿಗೆ ನನ್ನ ವೈಯಕ್ತಿಕ ಖರ್ಚಿನಲ್ಲಿ ದ್ವಿಚಕ್ರ ವಾಹನ ನೀಡುತ್ತೇನೆ. ಸ್ಥಳೀಯ ಏಜನ್ಸಿಗಳ ಮೂಲಕ ಅರ್ಹ ವಿಧ್ಯಾರ್ಥಿಗಳ ಮನೆಗಳಿಗೆ ವಾಹನ ತಲುಪಿಸುತ್ತೇವೆ ಎಂದು ಭರವಸೆ ನೀಡಿದರು.
ದಿನ ನಾನು ಸಚಿವನಾಗಿ ಇರುತ್ತೇನೋ ಇಲ್ವೋ ಗೊತ್ತಿಲ್ಲ. ನಾನು ಜೀವಂತವಾಗಿ ಇರ್ತಿನೋ ಇಲ್ವೋ ಗೊತ್ತಿಲ್ಲ. ಈಗ ನನ್ನನ್ನ ಅಲ್ಪಸಂಖ್ಯಾತ ಸಚಿವರಾಗಿ ಮಾಡಿದ್ದಾರೆ. ಮುಂದಿನ ನಾಲ್ಕು ವರ್ಷ ನಮ್ಮ ಸರ್ಕಾರ ಇರುತ್ತದೆ. ನಾನೇ ಅಲ್ಪ ಸಂಖ್ಯಾತ ಮಂತ್ರಿ ಆಗಿ ಇರ್ತಿನಿ ಅನ್ನೋ ವಿಶ್ವಾಸ ಇದೆ ಎಂದು ಹೇಳಿದ್ದಾರೆ.