Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನುಡುವೆ ಅಂತರ್ಯುದ್ಧ ತೀವ್ರವಾಗಿದೆ.
ನಾಯಕತ್ವ ಬದಲಾವಣೆಗೆ ಡಿಕೆ ಶಿವಕುಮಾರ್ ಬಣ ಪಟ್ಟು ಹಿಡಿದಿದ್ದು, ಈ ಸಂಬಂಧ ಹೈಕಮಾಂಡ್ ನಾಯಕರ ಜತೆ ಚರ್ಚಿಸಲು ಡಿಕೆಶಿ ಬಣದ ಶಾಸಕರು, ಸಚಿವರು ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ಈ ಎಲ್ಲಾ ಬೆಣವಣಿಗೆಗಳ ನಡುವೆ ಸಿಎಂ ಸಿದ್ದರಾಮಯ್ಯ ಮಾತನಾಡಿ, ನಾನೇ ಸಿಎಂ ಆಗಿ ಮುಂದುವರಿಯುತ್ತೇನೆ. ನಾನೇ ಬಜೆಟ್ ಮಂಡಿಸುತ್ತೇನೆ ಎಂದು ಕಡ್ಡಿ ಮುರಿದಂತೆ ಹೇಳಿದ್ದಾರೆ. ಈ ಮೂಲಕ ಡಿಕೆಶಿ ಬಣದ ಶಾಸಕರಿಗೆ ಸಂದೇಶ ರವಾನಿಸಿದ್ದಾರೆ.
ನಿಮಗೆ ಯಾಕೆ ಅನುಮಾನ? ಮತ್ತೆ ಮತ್ತೆ ಅದನ್ನೇ ಏಕೆ ಕೇಳುತ್ತೀರಿ? ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ಮಾತನಾಡಿದೆಯಾ? ನಾಯಕತ್ವ, ಸಂಪುಟ ಪುನಾರಚನೆ ಬಗ್ಗೆ ಹೈಕಮಾಂಡ್ ತೀರ್ಮಾನಿಸುತ್ತೆ. ಈ ಬಗ್ಗೆ ಹೈಕಮಾಂಡ್ ಇಲ್ಲಿಯವರೆಗೆ ಏನಾದ್ರೂ ಮಾತನಾಡಿದೆಯಾ? ಹೈಕಮಾಂಡ್ ಈ ಬಗ್ಗೆ ಮಾತಾಡಿಲ್ಲ. ಹಾಗಾದ್ರೆ ಮತ್ತೆ ಯಾಕೆ ಆ ಪ್ರಶ್ನೆ? ಹೈಕಮಾಂಡ್ ಹೇಳಿದ್ದನ್ನು ನಾನು, ಡಿಸಿಎಂ ಡಿಕೆ, ಶಾಸಕರು ಪಾಲಿಸಬೇಕು ಎಂದು ಸ್ಪಷ್ಟಪಡಿಸಿದರು.
ಬಾಂಗ್ಲಾದಲ್ಲಿ ಪ್ರಬಲ ಭೂಕಂಪ : 6 ಮಂದಿ ಸಾವು, ಹಲವರಿಗೆ ಗಾಯ; ವೈರಲ್ ವಿಡಿಯೋ ನೋಡಿ