Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಚೆನ್ನೈ: ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು ಬಿಜೆಪಿ ಹೈಕಮಾಂಡ್ ಪ್ರಮುಖ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ.
ತಮಿಳುನಾಡಿನಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹಾಗೂ ಎಐಎಂಡಿಕೆ ಜಂಟಿಯಾಗಿ ಚುನಾವಣೆ ಎದುರಿಸಲಿವೆ.
ಹೀಗಾಗಿ ಬಿಜೆಪಿ ರಾಜ್ಯಾಕ್ಷರನ್ನು ಬದಲಾವಣೆ ಮಾಡಲಾಗಿತ್ತು. ಅಣ್ಣಾಮಲೈ ಅವರ ಸ್ಥಾನಕ್ಕೆ ನೈನಾರ್ ನಾಗೇಂದ್ರನ್ ಅವರನ್ನು ನೇಮಕ ಮಾಡಲಾಗಿತ್ತು.
ಈ ಎಲ್ಲಾ ಬೆಳವಣಿಗೆಗಳ ನಂತರ ತಮಿಳುನಾಡು ಬಿಜೆಪಿಯೊಳಗೆ ಸಂಭಾವ್ಯ ನಾಯಕತ್ವ ಬದಲಾವಣೆಯ ಬಗ್ಗೆ ಮತ್ತೊಮ್ಮೆ ಊಹಾಪೋಹಗಳು ಹೊರಹೊಮ್ಮಿವೆ. ಪಕ್ಷ ಪ್ರಸ್ತುತ ನೈನಾರ್ ನಾಗೇಂದ್ರನ್ ಅವರ ನಾಯಕತ್ವದಲ್ಲಿ ಕಾರ್ಯನಿರ್ವಹಿಸುತ್ತಿದ್ದರೂ, ಮಾಜಿ ರಾಜ್ಯ ಅಧ್ಯಕ್ಷ ಅಣ್ಣಾಮಲೈ ಅವರು ಮತ್ತೆ ರಾಜ್ಯಾಧ್ಯಕ್ಷರ ಹುದ್ದೆಗೆ ಮರಳಬಹುದು ಎಂಬ ಸುದ್ದಿಗಳಿವೆ.