Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಮದುವೆ ದಿನವೇ ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ್ತಿ ಸ್ಮೃತಿ ಮಂಧಾನ ಅವರ ತಂದೆಗೆ ಅರೋಗ್ಯ ಸಮಸ್ಯೆ ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾದ ಹಿನ್ನೆಯಲ್ಲಿ ಸ್ಮೃತಿ ಮಂಧಾನ ಮತ್ತು ಸಂಗೀತ ಸಂಯೋಜಕ ಪಲಾಶ್ ಮುಚ್ಚಲ್ ಅವರ ಜೊತೆ ನಡೆಯಬೇಕಿದ್ದ ಮದುವೆ ಸಮಾರಂಭವನ್ನು ಅನಿಶ್ಚಿತಾವಧಿಗೆ ಮುಂದೂಡಲಾಗಿದೆ.
ಭಾನುವಾರ (ನ.23) ರಂದು ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಸ್ಮೃತಿ ಮತ್ತು ಪಲಾಶ್ ಅವರ ವಿವಾಹ ನಡೆಯಬೇಕಿತ್ತು. ಆದರೆ, ಮದುವೆ ದಿನದ ಬೆಳಿಗ್ಗೆ ಶ್ರೀನಿವಾಸ್ ಮಂಧಾನ ಅವರು ಅಸ್ವಸ್ಥರಾಗಿದ್ದು ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ನೀಡಿದ ಮಾಹಿತಿ ಪ್ರಕಾರ ಶ್ರೀನಿವಾಸ್ ಅವರಿಗೆ ಲಘು ಹೃದಯಾಘಾತವಾಗಿದ್ದು ಸದ್ಯ ವೈದ್ಯರ ನಿಗಾದಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.
ಭಾವಿ ಪತಿಯೂ ಆಸ್ಪತ್ರೆ ದಾಖಲು:
ಭಾನುವಾರ ಬೆಳಿಗ್ಗೆ ತಂದೆ ಶ್ರೀನಿವಾಸ್ ಮಂಧಾನ ಅವರು ಅನಾರೋಗ್ಯದ ಹಿನ್ನೆಯಲ್ಲಿ ಆಸ್ಪತ್ರೆಗೆ ದಾಖಲಾದರೆ ಸಂಜೆ ವೇಳೆಗೆ ಭಾವಿ ಪತಿ ಪಲಾಶ್ ಮುಚ್ಚಲ್ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ ಇದಾದ ಪಲಾಶ್ ಚಿಕಿತ್ಸೆ ಪಡೆದು ಡಿಸ್ಟಾರ್ಜ್ ಆಗಿದ್ದರು.
ಮದುವೆ ಪೋಸ್ಟ್ಗಳ ಡಿಲೀಟ್:
ಇನ್ನು ತಂದೆಯ ಆರೋಗ್ಯದ ಹಿನ್ನೆಲೆಯಲ್ಲಿ ಸ್ಮೃತಿ ಮಂಧಾನ ಅವರು ವಿವಾಹವನ್ನು ಮುಂದೂಡಿದ್ದು ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದ ಮೆಹಂದಿ, ಹಳದಿ ಶಾಸ್ತ್ರ ಸೇರಿದಂತೆ ವಿವಾಹಪೂರ್ವದ ಎಲ್ಲಾ ಕಾರ್ಯಕ್ರಮಗಳ ಪೋಸ್ಟ್ಗಳು ಮತ್ತು ವಿಡಿಯೋಗಳನ್ನು ಸ್ಮೃತಿ ಮಂಧಾನ ಡಿಲೀಟ್ ಮಾಡಿದ್ದಾರೆ.
ತಂದೆ ಸಂಪೂರ್ಣ ಗುಣಮುಖರಾಗುವವರೆಗೆ ಮದುವೆ ಸಮಾರಂಭ ನಡೆಯುವುದಿಲ್ಲ ಎಂದು ಸ್ಮೃತಿ ಮ್ಯಾನೇಜರ್ ತುಹಿನ್ ಮಿಶ್ರಾ ಸ್ಪಷ್ಟಪಡಿಸಿದ್ದಾರೆ.