Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಗೆ ಮತ್ತಷ್ಟು ಕಠಿಣ ಶಿಕ್ಷೆ ಶುರುವಾಗಿದೆ. ಬ್ಯಾರಕ್ ಅಲ್ಲಿ ಕೂರಿಸಿ ಊಟ ಕೊಡುತ್ತಿದ್ದ ಜೈಲಾಧಿಕಾರಿಗಳು ಈಗ ಸರತಿ ಸಾಲಿನಲ್ಲಿ ನಿಲ್ಲುವಂತೆ ಮಾಡಿದ್ದಾರೆ.
ಜೈಲು ಅಧೀಕ್ಷಕರಾಗಿ ನೇಮಕವಾಗಿರುವ ಅಂಶಕುಮಾರ್ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿದ್ದಾರೆ. ಇಷ್ಟು ದಿನ ಬ್ಯಾರಕ್ ನಲ್ಲಿ ಊಟ ಪಡೆದುಕೊಳ್ಳುತ್ತಿದ್ದ ದರ್ಶನ್ ಎಲ್ಲಾ ಆರೋಪಿಗಳಂತೆ ಸರತಿ ಸಾಲಿನಲ್ಲಿಯೇ ನಿಂತು ಊಟ ಪಡೆಯುವ ಅನಿವಾರ್ಯ ಪರಿಸ್ಥಿತಿ ಎದುರಾಗಿದೆ.
ಜೈಲು ಅದಿಕ್ಷಕರು ಎಲ್ಲಾ ಕೈದಿಗಳಿಗೂ ಒಂದೇ ನಿಯಮ ಜಾರಿ ಮಾಡಿದ್ದಾರೆ.ಸದ್ಯ ದರ್ಶನ್ ಬ್ಯಾರಕ್ ಇಂದ ಹೊರಗೆ ಬಂದು ಊಟ ಪಡೆಯಬೇಕು ಬಳಿಕ ಊಟ ಮುಗಿಸಿಯೇ ಬ್ಯಾರಕ್ಗೆ ತೆರಳಬೇಕಿದೆ. ಇನ್ನು ಭದ್ರತಾ ದೃಷ್ಟಿಯಿಂದ ಇಷ್ಟು ದಿನ ಸಿಕ್ಕಿದ್ದ ವಾಕಿಂಗ್ ಅವಕಾಶವನ್ನೂ ಕಡಿತಗೊಳಿಸಿದ್ದಾರೆ. ಬಟ್ಟೆ ತೊಳೆದು ಒಣ ಹಾಕೋಕೆ ಮಾತ್ರ ಸ್ವಲ್ಪ ಕಾಲಾವಕಾಶ ನೀಡಿದ್ದು, ಮತ್ಯಾವುದಕ್ಕೂ ಅವಕಾಶ ಇಲ್ಲದೇ ದರ್ಶನ್ ಪರದಾಡುವಂತೆ ಆಗಿದೆ.