Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬೆಂಗಳೂರು : ಅನಾರೋಗ್ಯದಿಂದ ಬಳಲುತ್ತಿದ್ದ ಸ್ಯಾಂಡಲ್ ವುಡ್ ನ ಹಿರಿಯ ನಟ ಉಮೇಶ್ ಅವರು ನಿಧನರಾಗಿದ್ದಾರೆ.
ಇತ್ತೀಚೆಗೆ ಉಮೇಶ್ ಅವರು ಮನೆಯಲ್ಲೇ ಕಾಲು ಜಾರಿ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದರು. ಪರೀಕ್ಷೆ ವೇಳೆ ಅವರಿಗೆ 4ನೇ ಹಂತದ ಲಿವರ್ ಕ್ಯಾನ್ಸರ್ ಇರುವುದು ಪತ್ತೆಯಾಗಿತ್ತು. ಹೆಚ್ಚಿನ ಪರೀಕ್ಷೆಗಳಿಗೆ ಒಳಪಡಿಸಿದ್ದ ವೈದ್ಯರು ರೋಗವನ್ನು ಖಚಿತಪಡಿಸಿಕೊಂಡು, ಕಿಮೊಥೆರಪಿ ಹಾಗೂ ಇಮ್ಯೂನೋಥೆರಪಿ ಮೂಲಕ ಚೇತರಿಸಿಕೊಳ್ಳುವ ಸಾಧ್ಯತೆ ಇದೆ ಎಂದು ತಿಳಿಸಿದ್ದರು
ಆರು ದಶಕಗಳ ಕಾಲ ವೃತ್ತಿಜೀವನವನ್ನು ಹೊಂದಿರುವ ಕನ್ನಡ ಸಿನಿಮಾ ನಟರಾಗಿದ್ದಾರೆ. ಅವರು 350 ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿದ್ದಾರೆ. ಉಮೇಶ್ ತಮ್ಮ ವಿಶಿಷ್ಟ ಸಂಭಾಷಣೆ, ಮುಖಭಾವ ಮತ್ತು ಹಾಸ್ಯ ಸಮಯಪ್ರಜ್ಞೆಗೆ ಹೆಸರುವಾಸಿಯಾಗಿದ್ದಾರೆ.1990 ರಲ್ಲಿ ಬಿಡುಗಡೆಯಾದ ಅನಂತ್ ನಾಗ್ ನಟಿಸಿದ ಗೋಲ್ಮಾಲ್ ರಾಧಾಕೃಷ್ಣ ಹಾಸ್ಯ ಚಿತ್ರದಲ್ಲಿ ಉಮೇಶ್ ಅವರ “ಸೀತಾಪತಿ” ಪಾತ್ರವು ಕನ್ನಡ ಚಿತ್ರರಂಗದ ಅತ್ಯುತ್ತಮ ಹಾಸ್ಯ ಪಾತ್ರಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ. ಅವರ “ಅಪಾರ್ಥ ಮಾಡ್ಕೊಂಡ್ಬಿಟ್ರೋ ಎನೋ” ಡೈಲಾಗ್ ಜನಸಾಮಾನ್ಯರಲ್ಲಿ ವ್ಯಾಪಕವಾಗಿ ಮೆಚ್ಚುಗೆ ಪಡೆದಿದೆ