newsics. com
ಬೆಂಗಳೂರು: ಇಂದು ಸಂಜೆ 5:33ರಿಂದ ವಿದ್ಯುತ್ ಸರಬರಾಜು ವ್ಯವಸ್ಥೆಯಲ್ಲಿ ದೋಷ ಉಂಟಾಗಿ ಮೆಟ್ರೋ ಓಡಾಟದಲ್ಲಿ ವ್ಯತ್ಯಯ ಉಂಟಾಗಿದೆ.
ಹಸಿರು ಮಾರ್ಗದಲ್ಲಿ ಮೆಟ್ರೋ ರೈಲುಗಳು ನಾಗಸಂದ್ರ ಮತ್ತು ಆರ್ವಿ ರಸ್ತೆ ಮೆಟ್ರೋ ನಿಲ್ದಾಣದ ನಡುವೆ ಮಾತ್ರ ಓಡುತ್ತಿವೆ.
ಬನಶಂಕರಿ, ಜಯಪ್ರಕಾಶ್ ನಗರ, ಯಲಚೇನಹಳ್ಳಿ ಹಾಗೂ ಕೋಣನಕುಂಟೆ ಕ್ರಾಸ್, ದೊಡ್ಡಕಲ್ಲಸಂದ್ರ, ವಜ್ರಹಳ್ಳಿ, ತಲಘಟ್ಟಪುರ, ಸಿಲ್ಕ್ ಇನ್ಸ್ಟಿಟ್ಯೂಟ್ ಮಾರ್ಗದ ರೈಲುಗಳು ಓಡಾಟ ಸ್ಥಗಿತವಾಗಿದೆ. ಈ ಕುರಿತು ನಮ್ಮ ಮೆಟ್ರೋ ಅಧಿಕೃತ ಖಾತೆಯಲ್ಲಿ ತಿಳಿಸಿದೆ. ಇನ್ನೂ ಉಂಟಾದ ಅನಾನುಕೂಲತೆಗಾಗಿ ವಿಷಾದಿಸಿದೆ.
ಶೀಘ್ರದಲ್ಲೇ ವಿದ್ಯುತ್ ಸಮಸ್ಯೆಯನ್ನ ಬಗೆಹರಿಸೋದಾಗಿ ಬಿಎಂಆರ್ಸಿಎಲ್ ತಿಳಿಸಿದೆ.